RRR: ಬಹುದಿನಗಳಿಂದ ಕಾದಿದ್ದ ಅಭಿಮಾನಿಗಳಿಗೆ ಆರ್​ಆರ್​ಆರ್​ ತಂಡದಿಂದ ಸಿಕ್ತು ಬಿಗ್​ ನ್ಯೂಸ್​

Ram Charan: ಲಾಕ್​ಡೌನ್​ನಿಂದಾಗಿ ಆರ್​ಆರ್​ಆರ್​ ಚಿತ್ರೀಕರಣಕ್ಕೆ ಬ್ರೇಕ್​ ಹಾಕಲಾಗಿತ್ತು. ಆದರೆ ಈಗ ಶೂಟಿಂಗ್​ ಸೆಟ್​ಗೆ ಹೋಗಿರುವ ರಾಮ್​ ಚರಣ್​ ಅವರು ಬಹಳ ಉತ್ಸಾಹದಿಂದ ತಮ್ಮ​ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹೊಸ ಮಾಹಿತಿ ಹಂಚಿಕೊಂಡಿದ್ದಾರೆ.

RRR: ಬಹುದಿನಗಳಿಂದ ಕಾದಿದ್ದ ಅಭಿಮಾನಿಗಳಿಗೆ ಆರ್​ಆರ್​ಆರ್​ ತಂಡದಿಂದ ಸಿಕ್ತು ಬಿಗ್​ ನ್ಯೂಸ್​
ಆರ್​ಆರ್​ಆರ್, ರಾಮ್​ ಚರಣ್​
Edited By:

Updated on: Jun 21, 2021 | 4:14 PM

ನಿರ್ದೇಶಕ ರಾಜಮೌಳಿ ಹೆಸರು ಕೇಳಿದರೆ ಸಾಕು, ಸಿನಿಪ್ರಿಯರ ಕಿವಿ ಚುರುಕಾಗುತ್ತದೆ. ‘ಬಾಹುಬಲಿ’ ರೀತಿಯ ದೈತ್ಯ ಸಿನಿಮಾ ಮಾಡಿದ ಬಳಿಕವಂತೂ ಅವರ ಮೇಲಿನ ಅಭಿಮಾನ ದುಪ್ಪಟ್ಟಾಯಿತು. ಈಗ ಅವರು ಆರ್​ಆರ್​ಆರ್​ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ಲಾಕ್​ಡೌನ್​ ಕಾರಣದಿಂದ ಚಿತ್ರದ ಕೆಲಸಗಳು ತಡವಾಗುತ್ತಿತ್ತು. ಈ ಸಿನಿಮಾದ ಅಪ್​ಡೇಟ್​ಗಾಗಿ ಅಭಿಮಾನಿಗಳು ಕಾದಿದ್ದರು. ಆರ್​ಆರ್​ಆರ್​ ಚಿತ್ರದಲ್ಲಿ ನಟಿಸುತ್ತಿರುವ ರಾಮ್​ ಚರಣ್​ ಅವರು ಹೊಸ ಸುದ್ದಿ ನೀಡಿದ್ದಾರೆ.

ಹೊಸ ನ್ಯೂಸ್​ ಏನೆಂದರೆ, ಇಷ್ಟು ದಿನ ನಿಂತುಹೋಗಿದ್ದ ಶೂಟಿಂಗ್​ಗೆ ಈಗ ಮತ್ತೆ ಚಾಲನೆ ನೀಡಲಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ ಆಗುತ್ತಿರುವುದರ ಹಿನ್ನೆಲೆಯಲ್ಲಿ ತೆಲಂಗಾಣ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಹಾಗಾಗಿ ‘ಆರ್​ಆರ್​ಆರ್​’ ಸಿನಿಮಾ ಶೂಟಿಂಗ್​ ಕೂಡ ಪುನಾರಂಭ ಆಗಿದೆ.

ಬಹುದಿನಗಳ ಬಳಿಕ ಶೂಟಿಂಗ್​ ಸೆಟ್​ಗೆ ಹೋಗಿರುವ ರಾಮ್​ ಚರಣ್​ ಅವರು ಬಹಳ ಉತ್ಸಾಹದಿಂದ ತಮ್ಮ​ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಅಲ್ಲುರಿ ಸೀತಾರಾಮ ರಾಜು ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಆ ಪಾತ್ರದ ಗೆಟಪ್​ನಲ್ಲಿ ಅವರ ತಮ್ಮ ಮೇಕಪ್​ ಮ್ಯಾನ್​ ಹಾಗೂ ಕೇಶವಿನ್ಯಾಸಕ ಆಲಿಮ್​ ಹಾಕಿಮ್​ ಜೊತೆ ಸೆಲ್ಫಿಗೆ ಪೋಸ್​ ನೀಡಿದ್ದಾರೆ. ‘ಲಾಕ್​ಡೌನ್​ 2.0 ಮುಗಿದ ಬಳಿಕ ಆರ್​ಆರ್​ಆರ್​ ಶುರುವಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದೇ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​ ಅವರು ಕೊಮರಾಮ್​ ಭೀಮ್​ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿತ್ತು. ಬಾಲಿವುಡ್​ ನಟಿ ಆಲಿಯಾ ಭಟ್​ ಅವರು ಇದೇ ಮೊದಲ ಬಾರಿಗೆ ‘ಆರ್​ಆರ್​ಆರ್​’ ಚಿತ್ರದ ಮೂಲಕ ದಕ್ಷಿಣ ಭಾರತಕ್ಕೆ ಕಾಲಿಡುತ್ತಿರುವುದು ವಿಶೇಷ. ಅಲ್ಲದೆ, ಅಜಯ್​ ದೇವಗನ್​ ಕೂಡ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ.

ಈ ಎಲ್ಲ ಕಾರಣಗಳಿಂದಾಗಿ ಆರ್​ಆರ್​ಆರ್​ ಸಿನಿಮಾ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ತೆಲುಗಿನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಕನ್ನಡ, ತಮಿಳು, ಹಿಂದಿ ಸೇರಿದಂತೆ ಹಲವು ಭಾಷೆಗಳಿಗೆ ಡಬ್​ ಆಗಿ ತೆರೆ ಕಾಣಲಿದೆ. ಇದೇ ವರ್ಷ ಅಕ್ಟೋಬರ್​ 13ರಂದು ಸಿನಿಮಾ ತೆರೆಕಾಣಿಸಬೇಕು ಎಂದು ನಿರ್ಮಾಪಕರು ಪ್ಲ್ಯಾನ್​ ಮಾಡಿಕೊಂಡಿದ್ದಾರೆ. ಆದರೆ ಲಾಕ್​ಡೌನ್ ಕಾರಣದಿಂದ ಚಿತ್ರದ ಕೆಲಸಗಳು ಲೇಟ್​ ಆಗಿರುವುದರಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ ಆದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ:

ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?

ಮತ್ತೆ ಶುರುವಾಯ್ತ ಫ್ಯಾನ್ಸ್​ ವಾರ್​; ರಾಮ್​ ಚರಣ್​-ಜ್ಯೂ. ಎನ್​ಟಿಆರ್​ ಅಭಿಮಾನಿಗಳ ಕಿತ್ತಾಟ

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us