AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಜಿಮ್ ಫೋಟೋ ವೈರಲ್; ‘ಪೆದ್ದಿ’ ಸಿನಿಮಾಗಾಗಿ ಇಷ್ಟೆಲ್ಲ ವರ್ಕೌಟ್

‘ಗೇಮ್ ಚೇಂಜರ್’ ಬಳಿಕ ನಟ ರಾಮ್ ಚರಣ್ ಅವರು ‘ಪೆದ್ದಿ’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡರು. ಈ ಸಿನಿಮಾ ಗೆಲ್ಲಲೇಬೇಕಿದೆ. ಅದಕ್ಕಾಗಿ ಅವರು ತುಂಬ ಕಷ್ಟಪಡುತ್ತಿದ್ದಾರೆ. ‘ಪೆದ್ದಿ’ ಸಿನಿಮಾದ ಪಾತ್ರಕ್ಕಾಗಿ ರಾಮ್ ಚರಣ್ ಅವರು ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದಾರೆ. ಆ ಸಂದರ್ಭದ ಫೋಟೋ ವೈರಲ್ ಆಗಿದೆ.

ರಾಮ್ ಚರಣ್ ಜಿಮ್ ಫೋಟೋ ವೈರಲ್; ‘ಪೆದ್ದಿ’ ಸಿನಿಮಾಗಾಗಿ ಇಷ್ಟೆಲ್ಲ ವರ್ಕೌಟ್
Ram Charan
ಮದನ್​ ಕುಮಾರ್​
|

Updated on: Jul 21, 2025 | 5:12 PM

Share

ಟಾಲಿವುಡ್ ನಟ ರಾಮ್ ಚರಣ್ ಅವರು ‘ಪೆದ್ದಿ’ (Peddi Movie) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ತುಂಬಾ ನಿರೀಕ್ಷೆ ಇದೆ. ಈ ಮೊದಲು ಬಿಡುಗಡೆ ಆಗಿದ್ದ ಟೀಸರ್​ನಲ್ಲಿ ರಾಮ್ ಚರಣ್ (Ram Charan) ಅವರು ಅಬ್ಬರಿಸಿದ್ದೇ ಆ ನಿರೀಕ್ಷೆಗೆ ಕಾರಣ. ಈಗ ಜನರ ನಿರೀಕ್ಷೆಯನ್ನು ಡಬಲ್ ಮಾಡುವ ರೀತಿಯಲ್ಲಿ ರಾಮ್ ಚರಣ್ ಅವರು ಒಂದು ಫೋಟೋ ಹಂಚಿಕೊಂಡಿದ್ದಾರೆ. ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿರುವ ಫೋಟೋ ಇದಾಗಿದೆ. ‘ಪೆದ್ದಿ’ ಸಿನಿಮಾಗಾಗಿ ರಾಮ್ ಚರಣ್ ಅವರು ಬಾಡಿ (Ram Charan Body) ಹುರಿಗೊಳಿಸಿಕೊಳ್ಳುತ್ತಿದ್ದಾರೆ. ಈ ಫೋಟೋ ಕಂಡು ಫ್ಯಾನ್ಸ್ ವಾವ್ ಎನ್ನುತ್ತಿದ್ದಾರೆ.

ಬುಚ್ಚಿ ಬಾಬು ಸನಾ ಅವರು ‘ಪೆದ್ದಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಬಾಲಿವುಡ್ ನಟಿ ಜಾನ್ವಿ ಕಪೂರ್ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಹೈಪ್ ಹೆಚ್ಚಾಗಿದೆ. ಅದರ ಜೊತೆಗೆ ರಾಮ್ ಚರಣ್ ಅವರ ಬಾಡಿ ಟ್ರಾನ್ಸ್​​ಫಾರ್ಮೇಷನ್ ನೋಡಿ ಅಭಿಮಾನಿಗಳಿಗೆ ಥ್​ರಿಲ್ ಆಗಿದೆ. ಕಮೆಂಟ್ ಮೂಲಕ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ
Image
ರಾಮ್ ಚರಣ್​ಗೆ ಪತ್ನಿ ಉಪಾಸನಾ ಕೊಡುವ ದುಬಾರಿ ಗಿಫ್ಟ್​ಗಳೇನು?
Image
ಗೆದ್ದಿದ್ದು ಕಡಿಮೆ ಸಿನಿಮಾ ಆದರೂ ರಾಮ್ ಚರಣ್ ಆಸ್ತಿ 1,300 ಕೋಟಿ ರೂಪಾಯಿ
Image
ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?
Image
ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ರಾಮ್ ಚರಣ್

ಇದು ಇನ್ನೂ ಆರಂಭ ಮಾತ್ರ. ಪಾತ್ರಕ್ಕಾಗಿ ರಾಮ್ ಚರಣ್ ಅವರು ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ. ಅಂತಿಮವಾಗಿ ಅವರು ತೆರೆ ಮೇಲೆ ಯಾವ ರೀತಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಸೆಲೆಬ್ರಿಟಿ ಟ್ರೇನರ್ ಶಿವೋಹಂ ಅವರು ರಾಮ್ ಚರಣ್ ಅವರಿಗೆ ತರಬೇತಿ ನೀಡುತ್ತಿದ್ದಾರೆ. ರಾಮ್ ಚರಣ್ ಅವರ ಹೇರ್ ಸ್ಟೈಲ್ ಕೂಡ ಗಮನ ಸೆಳೆಯುತ್ತಿದೆ.

2026ರ ಮಾರ್ಚ್ 27ಕ್ಕೆ ‘ಪೆದ್ದಿ’ ಸಿನಿಮಾ ಬಿಡುಗಡೆ ಆಗಲಿದೆ. ಅಂದು ರಾಮ್ ಚರಣ್ ಹುಟ್ಟುಹಬ್ಬ. ಆ ಕಾರಣದಿಂದ ಅಭಿಮಾನಿಗಳ ಪಾಲಿಗೆ ‘ಪೆದ್ದಿ’ ಸಿನಿಮಾದ ಬಿಡುಗಡೆ ಸಖತ್ ಸ್ಪೆಷಲ್ ಆಗಿರಲಿದೆ. ಇದೇ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್​ಕುಮಾರ್ ಕೂಡ ಅಭಿನಯಿಸುತ್ತಿದ್ದಾರೆ. ಹಾಗಾಗಿ ಕರ್ನಾಟಕದಲ್ಲೂ ಈ ಸಿನಿಮಾ ಮೇಲೆ ನಿರೀಕ್ಷೆ ಜೋರಾಗಿದೆ.

ಇದನ್ನೂ ಓದಿ: ಬಹಿರಂಗ ಪತ್ರದ ಮೂಲಕ ನಿರ್ಮಾಪಕರಿಗೆ ಎಚ್ಚರಿಕೆ ಕೊಟ್ಟ ರಾಮ್ ಚರಣ್ ಅಭಿಮಾನಿಗಳು

‘ಪೆದ್ದಿ’ ಸಿನಿಮಾಗೆ ಎ.ಆರ್. ರೆಹಮಾನ್ ಅವರು ಸಂಗೀತ ನೀಡುತ್ತಿದ್ದಾರೆ. ವೆಂಕಟ ಸತೀಶ್ ಕಿಲಾರು ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ‘ಪೆದ್ದಿ’ ಸಿನಿಮಾ ತಯಾರಾಗುತ್ತಿದೆ. ಈ ಚಿತ್ರದಲ್ಲಿ ನಟಿಸಲು ಜಾನ್ವಿ ಕಪೂರ್ ಅವರು ಬರೋಬ್ಬರಿ 6 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಮಾಹಿತಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ