Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?

Ram Charan: ಮೆಗಾಸ್ಟಾರ್ ಚಿರಂಜೀವಿ ಪುತ್ರ, ಪ್ಯಾನ್ ಇಂಡಿಯಾ ಸ್ಟಾರ್ ರಾಮ್ ಚರಣ್ ಅವರಿಗೆ ಸಿನಿಮಾಗಳ ಜೊತೆಗೆ ಪ್ರಾಣಿಗಳ ಮೇಲೂ ವಿಶೇಷ ಪ್ರೀತಿ. ರಾಮ್ ಚರಣ್ ಒಂದು ಶ್ವಾನವನ್ನು ಸಾಕಿದ್ದು, ತಮ್ಮದೇ ಕುಟುಂಬದವರಂತೆ ಕಾಣುತ್ತಾರೆ. ಅದರ ಜೊತೆಗೆ ಸುಮಾರು 25 ಕುದುರೆಗಳನ್ನು ರಾಮ್ ಚರಣ್ ಸಾಕಿದ್ದಾರೆ.

ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?
Ram Charan
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on: Feb 22, 2025 | 2:15 PM

ರಾಮ್ ಚರಣ್ ಅವರು ಹೀರೋ ಆಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಇದೆ. ಅವರು ಸಾಮಾಜಿಕ ಕೆಲಸಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಅವರಿಗೆ ಪ್ರಾಣಿಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಇದನ್ನು ಅವರು ಅನೇಕ ಕಡೆಗಳಲ್ಲಿ ಹೇಳಿಕೊಂಡಿದ್ದರು. ಈ ಕಾರಣದಿಂದಲೇ ಅವರ ಮನೆಯಲ್ಲಿ ಒಂದಲ್ಲ-ಎರಡಲ್ಲ ಬರೋಬ್ಬರಿ 15 ಕುದುರೆಗಳು ಇವೆ. ಈ ವಿಚಾರ ಕೇಳಿ ಫ್ಯಾನ್ಸ್ ಅಚ್ಚರಿ ಹೊರಹಾಕಿದ್ದಾರೆ.

ರಾಮ್ ಚರಣ್ ಸಿನಿಮಾಗಳಲ್ಲಿ ಪ್ರಾಣಿಗಳನ್ನು ಬಳಕೆ ಮಾಡುತ್ತಾರೆ. ಅದರಲ್ಲೂ ಕುದುರೆಗಳನ್ನು ಓಡಿಸೋದು ಎಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಅವರು ಶ್ವಾನ ಸಾಕಿದ್ದು, ಕುಟುಂಬದಲ್ಲಿ ಒಂದು ಎಂಬಂತೆ ಅದನ್ನು ನೊಡಿಕೊಳ್ಳುತ್ತಾ ಇದ್ದಾರೆ. ವಿದೇಶಿ ಟ್ರಿಪ್ಗೆ ಆ ಶ್ವಾನವನ್ನು ಕರೆದುಕೊಂಡೇ ಹೋಗುತ್ತಾರೆ. ಈಗ ಮಗಳಿಗೂ ಇದೇ ಬಾಂಡ್ ಬೆಳೆಯುವಂತೆ ಅವರು ನೋಡಿಕೊಳ್ಳುತ್ತಿದ್ದಾರೆ.

‘ಮಗಧೀರ’ ಸಿನಿಮಾದಲ್ಲಿ ಕುದುರೆ ಒಂದು ಬರುತ್ತದೆ. ಈ ಕುದುರೆಯನ್ನು ರಾಮ್ ಚರಣ್ ಓಡಿಸುತ್ತಾರೆ. ಈ ಕುದುರೆಯನ್ನು ಅವರು ಮನೆಯಲ್ಲಿ ತೆಗೆದುಕೊಂಡು ಹೋಗಿ ಸಾಕಿದ್ದಾರೆ ಎಂಬ ವಿಚಾರ ಗೊತ್ತೇ! ಹೌದು, ರಾಮ್ ಚರಣ್ ಅವರು ಶೂಟ್ ಮುಗಿದ ಬಳಿಕ ಅದನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ:ಟಾಲಿವುಡ್ ರಾಮ್ ಚರಣ್ ಗೆ ಸಖತ್ ಇಷ್ಟ ಕನ್ನಡದ ಈ ಹಾಡು

‘ಮಗಧೀರ ಸಿನಿಮಾದಲ್ಲಿ ಬಾದ್ಶಾ ಕುದುರೆಯನ್ನು ಬಳಸಲಾಗಿತ್ತು. ಶೂಟಿಂಗ್ ಮುಗಿದ ಬಳಿಕ ಅದನ್ನು ನಾನು ಮನೆಗೆ ತೆಗೆದುಕೊಂಡು ಹೋದೆ. ಅದನ್ನು ಫಾರ್ಮ್ನಲ್ಲಿ ಇಟ್ಟಿದ್ದೇನೆ. ಅದಕ್ಕೆ ಇತ್ತೀಚೆಗೆ ಮರಿ ಹುಟ್ಟಿದೆ. ನಾನು ಅದನ್ನು ಮಗಳಿಗೆ ಗಿಫ್ಟ್ ಆಗಿ ನೀಡಿದ್ದೇನೆ. ಅವಳಿಗೂ ಈ ಬಗ್ಗೆ ಪ್ಯಾಷನ್ ಬೆಳೆಯಲಿ. ನನ್ನ ಫಾರ್ಮ್ನಲ್ಲಿ 15 ಕುದುರೆಗಳು ಇವೆ. ನನಗೆ ಪ್ರಾಣಿ ಪ್ರೀತಿ. ಅವುಗಳು ನನ್ನ ಹೃದಯಕ್ಕೆ ಹತ್ತಿರ’ ಎಂದಿದ್ದರು ಅವರು.

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿದೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿಲ್ಲ. ಒಟಿಟಿಯಲ್ಲೂ ಚಿತ್ರ ರಿಲೀಸ್ ಆಗಿದೆ ಸದ್ಯ ರಾಮ್ ಚರಣ್ ಅವರು ಬುಚ್ಚಿ ಬಾಬು ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟ್ ಶೀಘ್ರವೇ ಆರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು