AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?

Ram Charan: ಮೆಗಾಸ್ಟಾರ್ ಚಿರಂಜೀವಿ ಪುತ್ರ, ಪ್ಯಾನ್ ಇಂಡಿಯಾ ಸ್ಟಾರ್ ರಾಮ್ ಚರಣ್ ಅವರಿಗೆ ಸಿನಿಮಾಗಳ ಜೊತೆಗೆ ಪ್ರಾಣಿಗಳ ಮೇಲೂ ವಿಶೇಷ ಪ್ರೀತಿ. ರಾಮ್ ಚರಣ್ ಒಂದು ಶ್ವಾನವನ್ನು ಸಾಕಿದ್ದು, ತಮ್ಮದೇ ಕುಟುಂಬದವರಂತೆ ಕಾಣುತ್ತಾರೆ. ಅದರ ಜೊತೆಗೆ ಸುಮಾರು 25 ಕುದುರೆಗಳನ್ನು ರಾಮ್ ಚರಣ್ ಸಾಕಿದ್ದಾರೆ.

ರಾಮ್ ಚರಣ್ ಮನೆಯಲ್ಲಿ ಇದೆ ಬರೋಬ್ಬರಿ 15 ಕುದುರೆ; ಕಾರಣ ಏನು?
Ram Charan
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 22, 2025 | 2:15 PM

Share

ರಾಮ್ ಚರಣ್ ಅವರು ಹೀರೋ ಆಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಇದೆ. ಅವರು ಸಾಮಾಜಿಕ ಕೆಲಸಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಅವರಿಗೆ ಪ್ರಾಣಿಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಇದನ್ನು ಅವರು ಅನೇಕ ಕಡೆಗಳಲ್ಲಿ ಹೇಳಿಕೊಂಡಿದ್ದರು. ಈ ಕಾರಣದಿಂದಲೇ ಅವರ ಮನೆಯಲ್ಲಿ ಒಂದಲ್ಲ-ಎರಡಲ್ಲ ಬರೋಬ್ಬರಿ 15 ಕುದುರೆಗಳು ಇವೆ. ಈ ವಿಚಾರ ಕೇಳಿ ಫ್ಯಾನ್ಸ್ ಅಚ್ಚರಿ ಹೊರಹಾಕಿದ್ದಾರೆ.

ರಾಮ್ ಚರಣ್ ಸಿನಿಮಾಗಳಲ್ಲಿ ಪ್ರಾಣಿಗಳನ್ನು ಬಳಕೆ ಮಾಡುತ್ತಾರೆ. ಅದರಲ್ಲೂ ಕುದುರೆಗಳನ್ನು ಓಡಿಸೋದು ಎಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಅವರು ಶ್ವಾನ ಸಾಕಿದ್ದು, ಕುಟುಂಬದಲ್ಲಿ ಒಂದು ಎಂಬಂತೆ ಅದನ್ನು ನೊಡಿಕೊಳ್ಳುತ್ತಾ ಇದ್ದಾರೆ. ವಿದೇಶಿ ಟ್ರಿಪ್ಗೆ ಆ ಶ್ವಾನವನ್ನು ಕರೆದುಕೊಂಡೇ ಹೋಗುತ್ತಾರೆ. ಈಗ ಮಗಳಿಗೂ ಇದೇ ಬಾಂಡ್ ಬೆಳೆಯುವಂತೆ ಅವರು ನೋಡಿಕೊಳ್ಳುತ್ತಿದ್ದಾರೆ.

‘ಮಗಧೀರ’ ಸಿನಿಮಾದಲ್ಲಿ ಕುದುರೆ ಒಂದು ಬರುತ್ತದೆ. ಈ ಕುದುರೆಯನ್ನು ರಾಮ್ ಚರಣ್ ಓಡಿಸುತ್ತಾರೆ. ಈ ಕುದುರೆಯನ್ನು ಅವರು ಮನೆಯಲ್ಲಿ ತೆಗೆದುಕೊಂಡು ಹೋಗಿ ಸಾಕಿದ್ದಾರೆ ಎಂಬ ವಿಚಾರ ಗೊತ್ತೇ! ಹೌದು, ರಾಮ್ ಚರಣ್ ಅವರು ಶೂಟ್ ಮುಗಿದ ಬಳಿಕ ಅದನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ:ಟಾಲಿವುಡ್ ರಾಮ್ ಚರಣ್ ಗೆ ಸಖತ್ ಇಷ್ಟ ಕನ್ನಡದ ಈ ಹಾಡು

‘ಮಗಧೀರ ಸಿನಿಮಾದಲ್ಲಿ ಬಾದ್ಶಾ ಕುದುರೆಯನ್ನು ಬಳಸಲಾಗಿತ್ತು. ಶೂಟಿಂಗ್ ಮುಗಿದ ಬಳಿಕ ಅದನ್ನು ನಾನು ಮನೆಗೆ ತೆಗೆದುಕೊಂಡು ಹೋದೆ. ಅದನ್ನು ಫಾರ್ಮ್ನಲ್ಲಿ ಇಟ್ಟಿದ್ದೇನೆ. ಅದಕ್ಕೆ ಇತ್ತೀಚೆಗೆ ಮರಿ ಹುಟ್ಟಿದೆ. ನಾನು ಅದನ್ನು ಮಗಳಿಗೆ ಗಿಫ್ಟ್ ಆಗಿ ನೀಡಿದ್ದೇನೆ. ಅವಳಿಗೂ ಈ ಬಗ್ಗೆ ಪ್ಯಾಷನ್ ಬೆಳೆಯಲಿ. ನನ್ನ ಫಾರ್ಮ್ನಲ್ಲಿ 15 ಕುದುರೆಗಳು ಇವೆ. ನನಗೆ ಪ್ರಾಣಿ ಪ್ರೀತಿ. ಅವುಗಳು ನನ್ನ ಹೃದಯಕ್ಕೆ ಹತ್ತಿರ’ ಎಂದಿದ್ದರು ಅವರು.

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿದೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿಲ್ಲ. ಒಟಿಟಿಯಲ್ಲೂ ಚಿತ್ರ ರಿಲೀಸ್ ಆಗಿದೆ ಸದ್ಯ ರಾಮ್ ಚರಣ್ ಅವರು ಬುಚ್ಚಿ ಬಾಬು ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟ್ ಶೀಘ್ರವೇ ಆರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ