ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಅವಧಿ 3 ಗಂಟೆ 9 ನಿಮಿಷ? ಹಲವು ಪದಗಳು ಮ್ಯೂಟ್

ನಟ ರಾಮ್ ಚರಣ್ ಅವರು ಕಷ್ಟಪಟ್ಟು ಮಾಡಿರುವ ‘ಪೆದ್ದಿ’ ಸಿನಿಮಾಗೆ ಈಗ ಸೆನ್ಸಾರ್ ಪ್ರಕ್ರಿಯೆ ಮುಗಿದಿದೆ. ಚಿತ್ರದಲ್ಲಿನ ಹಲವು ಪದಗಳನ್ನು ಮ್ಯೂಟ್ ಮಾಡುವಂತೆ ಸೆನ್ಸಾರ್ ಮಂಡಳಿ ಸೂಚಿಸಿದೆ. ರಾಜಸ್ಥಾನ ಹಾಗೂ ಒಂದು ಸಮುದಾಯಕ್ಕೆ ಸಂಬಂಧಿಸಿದ ಉಲ್ಲೇಖವನ್ನು ತೆಗೆದುಹಾಕಬೇಕು ಎಂದು ಕೂಡ ಆದೇಶಿಲಾಗಿದೆ. ಚಿತ್ರದ ಅವಧಿ ಬಗ್ಗೆಯೂ ಮಾಹಿತಿ ಸಿಕ್ಕಿದೆ.

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಅವಧಿ 3 ಗಂಟೆ 9 ನಿಮಿಷ? ಹಲವು ಪದಗಳು ಮ್ಯೂಟ್
Ram Charan

Updated on: May 24, 2026 | 7:07 AM

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಹಾಗೂ ಬಾಲಿವುಡ್ ಬ್ಯೂಟಿ ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ಪೆದ್ದಿ’ (Peddi) ಜೂನ್ 4ರಂದು ತೆರೆಕಾಣಲು ಸಜ್ಜಾಗಿದೆ. ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಚಿತ್ರತಂಡ ಸೆನ್ಸಾರ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುಗಿಸಿದೆ. ಆದರೆ, ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಈ ಚಿತ್ರದ ಮೂಲ ತೆಲುಗು ಆವೃತ್ತಿಗೆ ಹಲವು ಪ್ರಮುಖ ಸೂಚನೆಗಳನ್ನು ನೀಡಿದೆ. ಅನೇಕ ಪದಗಳನ್ನು ಮ್ಯೂಟ್ ಮಾಡುವಂತೆ ತಿಳಿಸಿದೆ.

‘ಪೆದ್ದಿ’ ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ಯು/ಎ (U/A 16+) ಪ್ರಮಾಣಪತ್ರವನ್ನು ನೀಡಿದೆ. ಆದರೆ ಚಿತ್ರದಲ್ಲಿ ಬಳಕೆಯಾಗಿರುವ ಹಲವು ಆಕ್ಷೇಪಾರ್ಹ ಪದಗಳು, ಸಮುದಾಯದ ಉಲ್ಲೇಖಗಳು ಹಾಗೂ ದೃಶ್ಯಗಳನ್ನು ಬದಲಾಯಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅಷ್ಟೇ ಅಲ್ಲದೆ, ಚಿತ್ರದ ಹಿಟ್ ಗೀತೆ ‘ಚಿಕಿರಿ ಚಿಕಿರಿ’ ಹಾಡಿನಲ್ಲಿ ಬರುವ ‘ಸರುಕು ಸಾಮಾನ್’ ಎಂಬ ಪದಗಳನ್ನು ಸಹ ಬದಲಾಯಿಸಲಾಗಿದೆ.

ಚಿತ್ರದ ದ್ವಿತೀಯಾರ್ಧದಲ್ಲಿ ಬರುವ ‘ರಾಜಸ್ಥಾನ’ ಪದ ಹಾಗೂ ಒಂದು ನಿರ್ದಿಷ್ಟ ಸಮುದಾಯಕ್ಕೆ ಸಂಬಂಧಿಸಿದ ಉಲ್ಲೇಖಗಳನ್ನು ಚಿತ್ರದಿಂದ ಸಂಪೂರ್ಣವಾಗಿ ತೆಗೆದುಹಾಕಲು ಸೂಚಿಸಲಾಗಿದೆ. ದೃಶ್ಯಗಳ ವಿಚಾರಕ್ಕೆ ಬಂದರೆ, ಚಿತ್ರದಲ್ಲಿ ಪಾತ್ರವೊಂದು ಮಧ್ಯದ ಬೆರಳು ತೋರಿಸುವ ದೃಶ್ಯಕ್ಕೆ ಸಿಜಿ ಎಫೆಕ್ಟ್ ಬಳಸಿ ಮರೆಮಾಚಲು ಹೇಳಲಾಗಿದೆ.

ಚಿತ್ರತಂಡ ಈ ಎಲ್ಲಾ ಬದಲಾವಣೆಗಳನ್ನು ಮಾಡಿದ ನಂತರ ಮೇ 22ರಂದು ಅಧಿಕೃತ ಸೆನ್ಸಾರ್ ಪ್ರಮಾಣಪತ್ರವನ್ನು ಕೈಗೆತ್ತಿಕೊಂಡಿದೆ. ಸೆನ್ಸಾರ್ ಸರ್ಟಿಫಿಕೇಟ್ ಪ್ರಕಾರ ‘ಪೆದ್ದಿ’ ಚಿತ್ರದ ಒಟ್ಟು ಅವಧಿ 189 ನಿಮಿಷಗಳು, ಅಂದರೆ 3 ಗಂಟೆ 9 ನಿಮಿಷ ಇರಲಿದೆ. ಚಿತ್ರದಲ್ಲಿ ಸಾಹಸ ಮತ್ತು ಹಿಂಸಾತ್ಮಕ ದೃಶ್ಯಗಳಿಗೆ ಯಾವುದೇ ವಿಶುವಲ್ ಕಟ್ಸ್ ನೀಡಿಲ್ಲ ಎಂದು ಬಾಲಿವುಡ್ ಹಂಗಾಮಾ ವರದಿ ಮಾಡಿದೆ.

ಇದನ್ನೂ ಓದಿ: ದಂಗಲ್, ಸುಲ್ತಾನ್ ರೀತಿ ಇದೆಯಾ ‘ಪೆದ್ದಿ’ ಕಥೆ? ಆಮಿರ್, ಸಲ್ಲುಗೆ ರಾಮ್ ಚರಣ್ ಧನ್ಯವಾದ

ಬುಚ್ಚಿ ಬಾಬು ಸನಾ ಕಥೆ ಬರೆದು ನಿರ್ದೇಶಿಸಿರುವ ‘ಪೆದ್ದಿ’ ಚಿತ್ರವನ್ನು ವೆಂಕಟ ಸತೀಶ್ ಕಿಲಾರು ನಿರ್ಮಿಸಿದ್ದಾರೆ. ಈಶಾನ್ ಸಕ್ಸೇನಾ ಸಹ-ನಿರ್ಮಾಪಕರಾಗಿದ್ದಾರೆ. ಚಿತ್ರದಲ್ಲಿ ರಾಮ್ ಚರಣ್, ಜಾನ್ವಿ ಕಪೂರ್ ಜೊತೆಗೆ ಶಿವರಾಜ್‌ಕುಮಾರ್, ಜಗಪತಿ ಬಾಬು, ದಿವ್ಯೇಂದು ಶರ್ಮಾ, ಬೊಮನ್ ಇರಾನಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಎ.ಆರ್. ರೆಹಮಾನ್ ಸಂಗೀತ ನೀಡಿದ್ದಾರೆ. ಉತ್ತರ ಭಾರತದಲ್ಲಿ ‘ಜಿಯೋ ಸ್ಟುಡಿಯೋಸ್’ ಈ ಚಿತ್ರವನ್ನು ವಿತರಣೆ ಮಾಡುತ್ತಿದೆ. ಈ ಸಿನಿಮಾ ಐಮ್ಯಾಕ್ಸ್ ಫಾರ್ಮ್ಯಾಟ್‌ನಲ್ಲೂ ಬಿಡುಗಡೆಯಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us