AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR: ‘ಎತ್ತುವ ಜಂಡಾ’ ಹಾಡಿನ ಮೂಲಕ ಮತ್ತೆ ಅಬ್ಬರಿಸಲು ಸಜ್ಜಾದ ‘ಆರ್​ಆರ್​ಆರ್’​ ಸಿನಿಮಾ

‘ಆರ್​ಆರ್​ಆರ್​’ ಚಿತ್ರದಿಂದ ಹೊಸ ಹಾಡು ಬಿಡುಗಡೆ ಆಗುತ್ತಿದೆ. ‘ಎತ್ತುವ ಜಂಡಾ..’ ಎಂಬ ಈ ಸಾಂಗ್​ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳುವ ಕೌತುಕ ಅಭಿಮಾನಿಗಳಲ್ಲಿ ಮೂಡಿದೆ.

RRR: ‘ಎತ್ತುವ ಜಂಡಾ’ ಹಾಡಿನ ಮೂಲಕ ಮತ್ತೆ ಅಬ್ಬರಿಸಲು ಸಜ್ಜಾದ ‘ಆರ್​ಆರ್​ಆರ್’​ ಸಿನಿಮಾ
ಜ್ಯೂ. ಎನ್​ಟಿಆರ್​, ಆಲಿಯಾ ಭಟ್​, ರಾಮ್​ ಚರಣ್
TV9 Web
| Edited By: |

Updated on: Mar 11, 2022 | 9:11 AM

Share

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಆರ್​ಆರ್​ಆರ್​’ ಸಿನಿಮಾ (RRR Movie) ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ರಿಲೀಸ್​ ವಿಳಂಬ ಆಯಿತು. ಲೇಟ್​ ಆದ್ರೂ ಲೇಟೆಸ್ಟ್​ ಆಗಿ ಬರ್ತೀವಿ ಎಂಬ ಭರವಸೆಯನ್ನು ರಾಜಮೌಳಿ (Rajamouli) ಆ್ಯಂಡ್​ ಟೀಮ್​ ನೀಡಿದೆ. ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ಆಲಿಯಾ ಭಟ್​ (Alia Bhatt) ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ಈ ಚಿತ್ರಕ್ಕೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಹಾಡುಗಳು ಜನರಿಗೆ ಇಷ್ಟ ಆಗಿವೆ. ರಿಲೀಸ್​ ದಿನಾಂಕ ಮುಂದೂಡಿದ ಬಳಿಕ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಸಣ್ಣ ಗ್ಯಾಪ್​ ನೀಡಲಾಗಿತ್ತು. ಈಗ ಮತ್ತೆ ಅಬ್ಬರಿಸಲು ಚಿತ್ರತಂಡ ಸಿದ್ಧವಾಗಿದೆ. ರಾಜಮೌಳಿ ನಿರ್ದೇಶನದ ಈ ಸಿನಿಮಾದಿಂದ ಹೊಸದೊಂದು ಹಾಡು ರಿಲೀಸ್​ ಆಗುತ್ತಿದೆ. ‘ಎತ್ತುವ ಜಂಡಾ..’ ಗೀತೆಯನ್ನು ಮಾರ್ಚ್​ 14ರಂದು ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಈ ಬಗ್ಗೆ ಈಗಾಗಲೇ ‘ಆರ್​ಆರ್​ಆರ್​’ ಚಿತ್ರತಂಡದ ಕಡೆಯಿಂದ ಅಧಿಕೃತವಾಗಿ ಘೋಷಣೆ ಆಗಿದೆ. ಈ ಹಾಡಿನಲ್ಲಿ ಮುಖ್ಯ ಪಾತ್ರಧಾರಿಗಳಾದ ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ಆಲಿಯಾ ಭಟ್​ ಕಾಣಿಸಿಕೊಳ್ಳಲಿದ್ದಾರೆ ಎಂಬುದಕ್ಕೆ ಈ ಪೋಸ್ಟರ್​ನಲ್ಲಿ ಝಲಕ್​ ತೋರಿಸಲಾಗಿದೆ. ಇದೊಂದು ಸೆಲೆಬ್ರೇಷನ್​ ಸಾಂಗ್​ ಆಗಿರಲಿದೆ.

ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯಾದ ಡಿವಿವಿ ಎಂಟರ್​ಟೇನ್ಮೆಂಟ್​ ಬ್ಯಾನರ್‌ನಲ್ಲಿ ‘ಆರ್​ಆರ್​ಆರ್​’ ಸಿನಿಮಾ ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದಾರೆ. ಶ್ರೀಕರ್ ಪ್ರಸಾದ್ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಕನ್ನಡ, ತೆಲುಗು, ಮಲಯಾಳಂ, ತಮಿಳು ಹಾಗೂ ಹಿಂದಿಯಲ್ಲಿ ರಿಲೀಸ್ ಆಗಲಿರುವ ಈ ಚಿತ್ರ ಇಂಗ್ಲಿಷ್, ಪೋರ್ಚುಗೀಸ್, ಕೊರಿಯನ್, ಟರ್ಕಿಷ್, ಸ್ಪ್ಯಾನಿಶ್‌ ಭಾಷೆಗಳಿಗೆ ಡಬ್ ಆಗಲಿದೆ ಎಂಬುದು ವಿಶೇಷ. ಮಾರ್ಚ್ 25ರಂದು ವಿಶ್ವದಾದ್ಯಂತ ‘ಆರ್‌ಆರ್‌ಆರ್‌’ ತೆರೆಕಾಣಲಿದೆ. ಕನ್ನಡದಲ್ಲಿ ಈ ಸಿನಿಮಾದ ವಿತರಣೆಯನ್ನು ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ವಹಿಸಿಕೊಂಡಿದೆ.

‘ಆರ್​ಆರ್​ಆರ್​’ ಸಿನಿಮಾದ ಟ್ರೇಲರ್​ ಕಂಡು ಅಭಿಮಾನಿಗಳು ಈಗಾಗಲೇ ವಾವ್​ ಎಂದಿದ್ದಾರೆ. ‘ದೋಸ್ತಿ’, ‘ಹಳ್ಳಿ ನಾಟು’, ‘ಜನನಿ’ ಮುಂತಾದ ಹಾಡುಗಳು ಕೇಳುಗರ ಮೆಚ್ಚುಗೆ ಗಳಿಸಿವೆ. ಅದರಲ್ಲೂ ‘ಹಳ್ಳಿ ನಾಟು..’ ಹಾಡಿಗೆ ಲಕ್ಷಾಂತರ ಅಭಿಮಾನಿಗಳು ರೀಲ್ಸ್​ ಮಾಡಿದ್ದಾರೆ. ಈಗ ಇನ್ನೊಂದು ಹಾಡು ಬಿಡುಗಡೆ ಆಗುತ್ತಿದೆ. ಆ ಸಾಂಗ್​ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳುವ ಕೌತುಕ ಅಭಿಮಾನಿಗಳಲ್ಲಿ ಮೂಡಿದೆ. ಅದಕ್ಕಾಗಿ ಮಾ.14ರ ದಿನಾಂಕಕ್ಕಾಗಿ ಕಾಯುತ್ತಿದ್ದಾರೆ.

ವಿದೇಶದಲ್ಲಿ ‘ಆರ್​ಆರ್​​ಆರ್​’ ಟಿಕೆಟ್​ಗಳು ಸೋಲ್ಡ್​ ಔಟ್​:

ಜ್ಯೂ. ಎನ್​ಟಿಆರ್​ ಅವರಿಗೆ ವಿದೇಶದಲ್ಲೂ ಅಭಿಮಾನಿಗಳಿದ್ದಾರೆ. ಅಮೆರಿಕದಲ್ಲಿ ಇರುವ ಅಭಿಮಾನಿಯೊಬ್ಬರು ಬರೋಬ್ಬರಿ 75 ಟಿಕೆಟ್​ಗಳನ್ನು ಏಕಕಾಲಕ್ಕೆ ಖದೀರಿಸಿದ್ದಾರೆ. ಅದರ ಫೋಟೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದು ಎಲ್ಲೆಡೆ ವೈರಲ್​ ಆಗುತ್ತಿದೆ. ‘ಆರ್​ಆರ್​ಆರ್​’ ಚಿತ್ರದ ಬಗ್ಗೆ ವಿದೇಶದಲ್ಲಿ ಎಷ್ಟರಮಟ್ಟಿಗೆ ಕ್ರೇಜ್​ ಇದೆ ಎಂಬುದಕ್ಕೆ ಈ ಘಟನೆ ಸಾಕ್ಷಿ ಆಗಿದೆ. ಇಂಗ್ಲೆಂಡ್​, ಆಸ್ಟ್ರೇಲಿಯಾ ಮುಂತಾದ ಕಡೆಗಳಲ್ಲೂ ಬುಕಿಂಗ್​ ಶುರುವಾಗಿದೆ. ಎಲ್ಲೆಡೆ ಟಿಕೆಟ್​ ಸೋಲ್ಡ್​ ಔಟ್​ ಆಗುತ್ತಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ. ಈ ಎಲ್ಲ ಬೆಳವಣಿಗೆ ಗಮನಿಸಿದರೆ ‘ಆರ್​ಆರ್​ಆರ್​’ ಚಿತ್ರವು ಥಿಯೇಟರ್​ನಲ್ಲಿ ದೊಡ್ಡ ಮಟ್ಟದ ಯಶಸ್ಸು ಕಾಣಲಿದೆ ಎಂಬುದರ ಮುನ್ಸೂಚನೆ ಸಿಕ್ಕಿದೆ. ಚಿತ್ರದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ.

ಇದನ್ನೂ ಓದಿ:

‘ಆರ್​ಆರ್​ಆರ್​’ ನಿರ್ಮಾಪಕನ ಖಾತೆಯಿಂದ ಪ್ರಭಾಸ್​ಗೆ ವರ್ಗಾವಣೆ ಆಯ್ತು 50 ಕೋಟಿ ರೂಪಾಯಿ?  

100 ಕೋಟಿ ರೂ. ಗಳಿಸಿದ ‘ಗಂಗೂಬಾಯಿ ಕಾಠಿಯಾವಾಡಿ’; ಪಾರ್ಟಿ ಮೂಡ್​ನಲ್ಲಿ ಆಲಿಯಾ ಭಟ್​-ರಣಬೀರ್​

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ