AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬಾಲಕನ ಆಸೆ ಈಡೇರಿಸಿದ ರಾಮ್ ಚರಣ್

9 ವರ್ಷದ ಮಣಿ ಕುಶಾಲ್ ಎಂಬ ಬಾಲಕ ಕ್ಯಾನ್ಸರ್​ನಿಂದ ಬಳಲುತ್ತಿದ್ದಾನೆ. ಆತನನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ರಾಮ್ ಚರಣ್ ಅವರ ದೊಡ್ಡ ಅಭಿಮಾನಿ.

ಕ್ಯಾನ್ಸರ್​ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬಾಲಕನ ಆಸೆ ಈಡೇರಿಸಿದ ರಾಮ್ ಚರಣ್
ಕ್ಯಾನ್ಸರ್​ಗೆ ತುತ್ತಾದ ಬಾಲಕನ ಭೇಟಿ ಮಾಡಿದ ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on:Feb 10, 2023 | 9:49 AM

Share

ಕೆಲ ಸ್ಟಾರ್​​ಗಳು ದೊಡ್ಡ ಪರದೆ ಮೇಲೆ ಮಾತ್ರ ಹೀರೋ ಎನಿಸಿಕೊಳ್ಳೋದಿಲ್ಲ. ಅವರು ನಿಜ ಜೀವನದಲ್ಲೂ ಹಿರೋ ಆಗಿ ಕಾಣಿಸಿಕೊಳ್ಳುತ್ತಾರೆ. ಸಾಮಾಜಿಕ ಕೆಲಸ ಮಾಡಿ ಎಲ್ಲರಿಂದ ಭೇಷ್ ಎನಿಸಿಕೊಳ್ಳುತ್ತಾರೆ. ಮೆಗಾ ಪವರ್​ಸ್ಟಾರ್ ರಾಮ್ ಚರಣ್ (Ram Charan) ಕೂಡ ಈಗ ಎಲ್ಲರಿಂದ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಅವರು ಮಾಡಿದ ಕೆಲಸಕ್ಕೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಕ್ಯಾನ್ಸರ್​ನಿಂದ  ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಅಭಿಮಾನಿಯನ್ನು ರಾಮ್ ಚರಣ್ ಭೇಟಿ ಮಾಡಿ ಆತನ ಕೊನೆಯ ಆಸೆಯನ್ನು ಈಡೇರಿಸಿದ್ದಾರೆ.

9 ವರ್ಷದ ಮಣಿ ಕುಶಾಲ್ ಎಂಬ ಬಾಲಕ ಕ್ಯಾನ್ಸರ್​ನಿಂದ ಬಳಲುತ್ತಿದ್ದಾನೆ. ಆತನನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ರಾಮ್ ಚರಣ್ ಅವರ ದೊಡ್ಡ ಅಭಿಮಾನಿ. ಮಣಿ ಕುಶಾಲ್​ಗೆ ರಾಮ್ ಚರಣ್ ಅವರನ್ನು ಭೇಟಿ ಮಾಡಬೇಕು ಎನ್ನುವ ಆಸೆ ಇತ್ತು. ಈ ಆಸೆಯನ್ನು ಅವರು ಈಡೇರಿಸಿದ್ದಾರೆ. ಆಸ್ಪತ್ರೆಗೆ ತೆರಳಿ ಬಾಲಕನನ್ನು ಭೇಟಿ ಮಾಡಿರುವ ಫೋಟೋ ವೈರಲ್ ಆಗಿದೆ.

ಇದನ್ನೂ ಓದಿ
Image
ನವ ದಂಪತಿ ಕಿಯಾರಾ-ಸಿದ್ದಾರ್ಥ್ ಬಳಿ ಕ್ಷಮೆ ಕೇಳಿದ ರಾಮ್ ಚರಣ್ ಪತ್ನಿ ಉಪಾಸನಾ
Image
RRR OTT Release: ‘ಆರ್​ಆರ್​ಆರ್​’ ಚಿತ್ರ ಒಟಿಟಿಯಲ್ಲಿ ಪ್ರಸಾರ ಆಗೋದು ಯಾವಾಗ? ಆ ದಿನಾಂಕಕ್ಕಾಗಿ ಕಾದಿರುವ ಫ್ಯಾನ್ಸ್​
Image
‘RRR’ ಯಶಸ್ಸು; ಚಿತ್ರತಂಡಕ್ಕೆ 18 ಲಕ್ಷ ಮೌಲ್ಯದ ಚಿನ್ನದ ನಾಣ್ಯ ಉಡುಗೊರೆ ನೀಡಿದ ನಟ ರಾಮ್ ಚರಣ್

ರಾಮ್ ಚರಣ್ ಅವರದ್ದು ವಿಶಾಲ ಹೃದಯ ಎಂದು ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ಹಂಚಿಕೊಳ್ಳುತ್ತಿದ್ದಾರೆ. ‘ತೆರೆಮೇಲೆ ಮಾತ್ರವಲ್ಲ, ತೆರೆ ಹಿಂದೆಯೂ ನೀವು ಇಷ್ಟ ಆಗೋದು ಇದಕ್ಕೆ’ ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ರಾಮ್ ಚರಣ್ ಬಗ್ಗೆ ಬರೆದುಕೊಂಡಿದ್ದಾರೆ.

ರಾಮ್ ಚರಣ್ ಅವರು ‘ಆರ್​ಆರ್​ಆರ್​’ ಸಿನಿಮಾ ಮಾಡುತ್ತಿರುವ ಸಾಧನೆಗಳನ್ನು ಸಂಭ್ರಮಿಸುತ್ತಿದ್ದಾರೆ. ಈ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಅಷ್ಟೇ ಅಲ್ಲ ವಿದೇಶದಲ್ಲಿ ಸಿನಿಮಾ ಪ್ರಶಸ್ತಿಗಳನ್ನು ಬಾಚಿಕೊಳ್ಳುತ್ತಿದೆ. ಈ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್​ ರೇಸ್​ನಲ್ಲಿದೆ.

ಇದನ್ನೂ ಓದಿ: Ram Charan: ‘ಆರ್​ಆರ್​ಆರ್​’ ಗೆದ್ದ ಬಳಿಕ ರಾಮ್​ ಚರಣ್​ ಸಖತ್​ ಬ್ಯುಸಿ; ಕೈಯಲ್ಲಿವೆ ಬಹುನಿರೀಕ್ಷಿತ​ ಚಿತ್ರಗಳು

‘ಆರ್​ಆರ್​ಆರ್​’ ಗೆಲುವಿನ ನಂತರ ರಾಮ್ ಚರಣ್ ಅವರು ‘ಆರ್​ಸಿ15’ ಹಾಗೂ ‘ಆರ್​ಸಿ16’ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ರಾಮ್ ಚರಣ್ 15ನೇ ಚಿತ್ರಕ್ಕೆ ಶಂಕರ್ ನಿರ್ದೇಶನ ಮಾಡುತ್ತಿದ್ದಾರೆ. ಮಾರ್ಚ್ 27 ಅವರ ಜನ್ಮದಿನ. ಈ ವಿಶೇಷ ದಿನಕ್ಕೆ ಈ ಚಿತ್ರಗಳ ಪೋಸ್ಟರ್ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಚಿತ್ರದ ಶೀರ್ಷಿಕೆ ಅನಾವರಣಗೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಇದಲ್ಲದೆ, ಸಲ್ಮಾನ್ ಖಾನ್ ಅಭಿನಯದ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾದಲ್ಲಿ ರಾಮ್ ಚರಣ್ ಅತಿಥಿ ಪಾತ್ರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:43 am, Fri, 10 February 23

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ