AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ನೀಲ್​ ಮತ್ತು ರಾಮ ಚರಣ್​ ಭೇಟಿಯ ಅಸಲಿಯತ್ತೇ ಬೇರೆ; ಕೊನೆಗೂ ಹೊರಬಿತ್ತು ಸತ್ಯ

ಸ್ಟಾರ್​ ನಟರ ಜತೆ ಸಿನಿಮಾ ಮಾಡೋಕೆ ಪ್ರಶಾಂತ್​ ನೀಲ್​ ಆಸಕ್ತಿ ತೋರಿಸುತ್ತಿದ್ದಾರೆ. ಹೀಗಿರುವಾಗಲೇ ರಾಮ್​ ಚರಣ್​ ಜತೆ ಕಾಣಿಸಿಕೊಂಡಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ಪ್ರಶಾಂತ್​ ನೀಲ್​ ಮತ್ತು ರಾಮ ಚರಣ್​ ಭೇಟಿಯ ಅಸಲಿಯತ್ತೇ ಬೇರೆ; ಕೊನೆಗೂ ಹೊರಬಿತ್ತು ಸತ್ಯ
ರಾಮ್​ ಚರಣ್​-ಪ್ರಶಾಂತ್​ ನೀಲ್​- ಚಿರಂಜೀವಿ
TV9 Web
| Edited By: |

Updated on: Oct 17, 2021 | 6:04 PM

Share

ಪ್ರಶಾಂತ್​ ನೀಲ್​ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ‘ಕೆಜಿಎಫ್​’ ನಂತರ ಅವರ ಖ್ಯಾತಿ ಸಾಕಷ್ಟು ಹೆಚ್ಚಿದೆ. ಈ ಕಾರಣಕ್ಕೆ ಅವರು ಯಾವುದೇ ಸ್ಟಾರ್​ ನಟರನ್ನು ಭೇಟಿ ಮಾಡಿದರೂ ಸಿನಿಮಾ ವಿಚಾರ ಮುನ್ನೆಲೆಗೆ ಬರುತ್ತದೆ. ಇತ್ತೀಚೆಗೆ ರಾಮ್​ ಚರಣ್​ ಹಾಗೂ ಚಿರಂಜೀವಿ ಜತೆ ಕಾಣಿಸಿಕೊಂಡಿದ್ದರು ಪ್ರಶಾಂತ್ ನೀಲ್​​. ರಾಮ್​ ಚರಣ್​ ಜತೆ ಪ್ರಶಾಂತ್​ ನೀಲ್​ ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಇದರ ಅಸಲಿಯತ್ತು ಈಗ ಹೊರ ಬಿದ್ದಿದೆ.

ಸ್ಟಾರ್​ ನಟರ ಜತೆ ಸಿನಿಮಾ ಮಾಡೋಕೆ ಪ್ರಶಾಂತ್​ ನೀಲ್​ ಆಸಕ್ತಿ ತೋರಿಸುತ್ತಿದ್ದಾರೆ. ಹೀಗಿರುವಾಗಲೇ ರಾಮ್​ ಚರಣ್​ ಜತೆ ಕಾಣಿಸಿಕೊಂಡಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ‘ಲೆಜೆಂಡ್​ ನಟರನ್ನು ಭೇಟಿ ಮಾಡಿದೆ. ಆತಿಥ್ಯ ನೀಡಿದ್ದಕ್ಕೆ ಧನ್ಯವಾದ. ಚಿರಂಜೀವಿಯನ್ನು ಭೇಟಿ ಮಾಡಬೇಕು ಎನ್ನುವ ಬಾಲ್ಯದ ಕನಸು ನನಸಾಯಿತು’ ಎಂದು ಟ್ವೀಟ್​ ಮಾಡಿದ್ದರು ರಾಮ್​ ಚರಣ್​. ಇದರ ಜತೆಗೆ ಆರ್​ಆರ್​ಆರ್​ ಸಿನಿಮಾ ನಿರ್ಮಾಣ ಸಂಸ್ಥೆ ಡಿವಿವಿ ಮೂವೀಸ್​ ಅನ್ನು ಟ್ಯಾಗ್​ ಮಾಡಿದ್ದರು ರಾಮ್​ ಚರಣ್​. ಈ ಮೂಲಕ ಸಾಕಷ್ಟು ಕುತೂಹಲ ಹುಟ್ಟಿಸಿದ್ದರು. ಈಗ ರಾಮ್​ ಚರಣ್​ ಕಡೆಯಿಂದ ಇದಕ್ಕೆ ಉತ್ತರ ಸಿಕ್ಕಿದೆ.

ಈ ಬಗ್ಗೆ ಟಿವಿ9 ತೆಲುಗಿಗೆ ಪ್ರತಿಕ್ರಿಯೆ ನೀಡಿರುವ ರಾಮ್​ ಚರಣ್​, ‘ಇಲ್ಲ, ಪ್ರಶಾಂತ್ ಅವರು ಕೇವಲ ಊಟಕ್ಕೆ ಬಂದಿದ್ದರು. ಮುಂದಿನ ದಿನಗಳಲ್ಲಿ ಈ ಬಗ್ಗೆ ಘೋಷಿಸುತ್ತೇವೆ’ ಎಂದರು.  ಈ ಮೂಲಕ ಅವರು ಅಡ್ಡಗೋಡೆ ಮೇಲೆ ದೀಪ ಇಟ್ಟರು. ಅವರು ಸಿನಿಮಾ ಮಾಡುವುದಿಲ್ಲ ಎಂದಾದರೆ, ಆರ್​ಆರ್​ಆರ್​ ಸಿನಿಮಾ ನಿರ್ಮಾಣ ಸಂಸ್ಥೆ ಡಿವಿವಿ ಮೂವೀಸ್ಅನ್ನುಏಕೆ ಟ್ಯಾಗ್​ ಮಾಡುತ್ತಿದ್ದರು ಎಂದು ಫ್ಯಾನ್ಸ್​ ಪ್ರಶ್ನೆ ಮಾಡುತ್ತಿದ್ದಾರೆ.

ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎಂಬುದಕ್ಕೆ ಇತ್ತೀಚೆಗೆ ಉತ್ತರ ಸಿಕ್ಕಿತ್ತು. 2022ರ ಏಪ್ರಿಲ್​ 14ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಷ್ಟು ಹೊತ್ತಿಗಾಗಲೇ ‘ಕೆಜಿಎಫ್​ 2’ ತೆರೆಕಂಡಿರಬೇಕಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದ ಪರಿಣಾಮ ಚಿತ್ರದ ರಿಲೀಸ್​ ದಿನಾಂಕ ಮುಂದೂಡಲಾಗಿತ್ತು. ಈ ಚಿತ್ರದ ಕೊನೆಯ ಹಂತದ ಕೆಲಸದಲ್ಲಿ ಪ್ರಶಾಂತ್​ ನೀಲ್​ ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ: ಚಿರಂಜೀವಿ ಮತ್ತು ರಾಮ್​ ಚರಣ್ ಜತೆ ಪ್ರಶಾಂತ್​ ನೀಲ್​​; ಆರ್​ಆರ್​ಆರ್​ ನಿರ್ಮಾಣ ಸಂಸ್ಥೆಯಿಂದ ಬಂಡವಾಳ?

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?