AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ನೀಲ್​ ಮತ್ತು ರಾಮ ಚರಣ್​ ಭೇಟಿಯ ಅಸಲಿಯತ್ತೇ ಬೇರೆ; ಕೊನೆಗೂ ಹೊರಬಿತ್ತು ಸತ್ಯ

ಸ್ಟಾರ್​ ನಟರ ಜತೆ ಸಿನಿಮಾ ಮಾಡೋಕೆ ಪ್ರಶಾಂತ್​ ನೀಲ್​ ಆಸಕ್ತಿ ತೋರಿಸುತ್ತಿದ್ದಾರೆ. ಹೀಗಿರುವಾಗಲೇ ರಾಮ್​ ಚರಣ್​ ಜತೆ ಕಾಣಿಸಿಕೊಂಡಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ಪ್ರಶಾಂತ್​ ನೀಲ್​ ಮತ್ತು ರಾಮ ಚರಣ್​ ಭೇಟಿಯ ಅಸಲಿಯತ್ತೇ ಬೇರೆ; ಕೊನೆಗೂ ಹೊರಬಿತ್ತು ಸತ್ಯ
ರಾಮ್​ ಚರಣ್​-ಪ್ರಶಾಂತ್​ ನೀಲ್​- ಚಿರಂಜೀವಿ
TV9 Web
| Edited By: |

Updated on: Oct 17, 2021 | 6:04 PM

Share

ಪ್ರಶಾಂತ್​ ನೀಲ್​ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ‘ಕೆಜಿಎಫ್​’ ನಂತರ ಅವರ ಖ್ಯಾತಿ ಸಾಕಷ್ಟು ಹೆಚ್ಚಿದೆ. ಈ ಕಾರಣಕ್ಕೆ ಅವರು ಯಾವುದೇ ಸ್ಟಾರ್​ ನಟರನ್ನು ಭೇಟಿ ಮಾಡಿದರೂ ಸಿನಿಮಾ ವಿಚಾರ ಮುನ್ನೆಲೆಗೆ ಬರುತ್ತದೆ. ಇತ್ತೀಚೆಗೆ ರಾಮ್​ ಚರಣ್​ ಹಾಗೂ ಚಿರಂಜೀವಿ ಜತೆ ಕಾಣಿಸಿಕೊಂಡಿದ್ದರು ಪ್ರಶಾಂತ್ ನೀಲ್​​. ರಾಮ್​ ಚರಣ್​ ಜತೆ ಪ್ರಶಾಂತ್​ ನೀಲ್​ ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಇದರ ಅಸಲಿಯತ್ತು ಈಗ ಹೊರ ಬಿದ್ದಿದೆ.

ಸ್ಟಾರ್​ ನಟರ ಜತೆ ಸಿನಿಮಾ ಮಾಡೋಕೆ ಪ್ರಶಾಂತ್​ ನೀಲ್​ ಆಸಕ್ತಿ ತೋರಿಸುತ್ತಿದ್ದಾರೆ. ಹೀಗಿರುವಾಗಲೇ ರಾಮ್​ ಚರಣ್​ ಜತೆ ಕಾಣಿಸಿಕೊಂಡಿರುವುದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ‘ಲೆಜೆಂಡ್​ ನಟರನ್ನು ಭೇಟಿ ಮಾಡಿದೆ. ಆತಿಥ್ಯ ನೀಡಿದ್ದಕ್ಕೆ ಧನ್ಯವಾದ. ಚಿರಂಜೀವಿಯನ್ನು ಭೇಟಿ ಮಾಡಬೇಕು ಎನ್ನುವ ಬಾಲ್ಯದ ಕನಸು ನನಸಾಯಿತು’ ಎಂದು ಟ್ವೀಟ್​ ಮಾಡಿದ್ದರು ರಾಮ್​ ಚರಣ್​. ಇದರ ಜತೆಗೆ ಆರ್​ಆರ್​ಆರ್​ ಸಿನಿಮಾ ನಿರ್ಮಾಣ ಸಂಸ್ಥೆ ಡಿವಿವಿ ಮೂವೀಸ್​ ಅನ್ನು ಟ್ಯಾಗ್​ ಮಾಡಿದ್ದರು ರಾಮ್​ ಚರಣ್​. ಈ ಮೂಲಕ ಸಾಕಷ್ಟು ಕುತೂಹಲ ಹುಟ್ಟಿಸಿದ್ದರು. ಈಗ ರಾಮ್​ ಚರಣ್​ ಕಡೆಯಿಂದ ಇದಕ್ಕೆ ಉತ್ತರ ಸಿಕ್ಕಿದೆ.

ಈ ಬಗ್ಗೆ ಟಿವಿ9 ತೆಲುಗಿಗೆ ಪ್ರತಿಕ್ರಿಯೆ ನೀಡಿರುವ ರಾಮ್​ ಚರಣ್​, ‘ಇಲ್ಲ, ಪ್ರಶಾಂತ್ ಅವರು ಕೇವಲ ಊಟಕ್ಕೆ ಬಂದಿದ್ದರು. ಮುಂದಿನ ದಿನಗಳಲ್ಲಿ ಈ ಬಗ್ಗೆ ಘೋಷಿಸುತ್ತೇವೆ’ ಎಂದರು.  ಈ ಮೂಲಕ ಅವರು ಅಡ್ಡಗೋಡೆ ಮೇಲೆ ದೀಪ ಇಟ್ಟರು. ಅವರು ಸಿನಿಮಾ ಮಾಡುವುದಿಲ್ಲ ಎಂದಾದರೆ, ಆರ್​ಆರ್​ಆರ್​ ಸಿನಿಮಾ ನಿರ್ಮಾಣ ಸಂಸ್ಥೆ ಡಿವಿವಿ ಮೂವೀಸ್ಅನ್ನುಏಕೆ ಟ್ಯಾಗ್​ ಮಾಡುತ್ತಿದ್ದರು ಎಂದು ಫ್ಯಾನ್ಸ್​ ಪ್ರಶ್ನೆ ಮಾಡುತ್ತಿದ್ದಾರೆ.

ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಯಾವಾಗ ರಿಲೀಸ್​ ಆಗಲಿದೆ ಎಂಬುದಕ್ಕೆ ಇತ್ತೀಚೆಗೆ ಉತ್ತರ ಸಿಕ್ಕಿತ್ತು. 2022ರ ಏಪ್ರಿಲ್​ 14ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಷ್ಟು ಹೊತ್ತಿಗಾಗಲೇ ‘ಕೆಜಿಎಫ್​ 2’ ತೆರೆಕಂಡಿರಬೇಕಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದ ಪರಿಣಾಮ ಚಿತ್ರದ ರಿಲೀಸ್​ ದಿನಾಂಕ ಮುಂದೂಡಲಾಗಿತ್ತು. ಈ ಚಿತ್ರದ ಕೊನೆಯ ಹಂತದ ಕೆಲಸದಲ್ಲಿ ಪ್ರಶಾಂತ್​ ನೀಲ್​ ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ: ಚಿರಂಜೀವಿ ಮತ್ತು ರಾಮ್​ ಚರಣ್ ಜತೆ ಪ್ರಶಾಂತ್​ ನೀಲ್​​; ಆರ್​ಆರ್​ಆರ್​ ನಿರ್ಮಾಣ ಸಂಸ್ಥೆಯಿಂದ ಬಂಡವಾಳ?

Follow Us
Web contact
Web contact

TV9 Kannada

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ