AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

200 ಕೋಟಿ ರೂಪಾಯಿ ಕ್ಲಬ್ ಸೇರಿದ ರಾಮ್ ಚರಣ್ ಸಿನಿಮಾ ‘ಪೆದ್ದಿ’; ಆದರೂ ಇದೆ ಸವಾಲು

‘ಪೆದ್ದಿ’ ಸಿನಿಮಾ ಮೇಲೆ ರಾಮ್ ಚರಣ್ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಈ ಸಿನಿಮಾದ ವೀಕೆಂಡ್ ಕಲೆಕ್ಷನ್ ಉತ್ತಮವಾಗಿದ್ದರೂ ಅಸಲಿ ಪರೀಕ್ಷೆ ಮುಂದಿದೆ. ಬಜೆಟ್ ಜಾಸ್ತಿ ಇರುವುದರಿಂದ ಸಿನಿಮಾ ಹಿಟ್ ಎನಿಸಿಕೊಳ್ಳಲು ಕಲೆಕ್ಷನ್ ಕೂಡ ಭಾರಿ ಪ್ರಮಾಣದಲ್ಲಿ ಆಗಬೇಕಿದೆ. ಚಿತ್ರದ ಮುಂದೆ ದೊಡ್ಡ ಟಾರ್ಗೆಟ್ ಇದೆ.

200 ಕೋಟಿ ರೂಪಾಯಿ ಕ್ಲಬ್ ಸೇರಿದ ರಾಮ್ ಚರಣ್ ಸಿನಿಮಾ ‘ಪೆದ್ದಿ’; ಆದರೂ ಇದೆ ಸವಾಲು
Ram Charan
ಮದನ್​ ಕುಮಾರ್​
|

Updated on: Jun 07, 2026 | 1:15 PM

Share

ಪ್ಯಾನ್ ಇಂಡಿಯಾ ಸ್ಟಾರ್ ರಾಮ್ ಚರಣ್ (Ram Charan) ಮತ್ತು ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ ಅಭಿನಯದ, ಬುಚ್ಚಿ ಬಾಬು ಸನಾ ನಿರ್ದೇಶನದ ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ತೀವ್ರ ವಿವಾದಗಳು ಮತ್ತು ಮಿಶ್ರ ವಿಮರ್ಶೆಗಳ ನಡುವೆಯೂ ಚಿತ್ರವು ಶನಿವಾರ (ಜೂನ್ 6) ಉತ್ತಮವಾಗಿ ಕಲೆಕ್ಷನ್ ಮಾಡುವ ಮೂಲಕ ಕೇವಲ ಎರಡೇ ದಿನಗಳಲ್ಲಿ ಜಾಗತಿಕವಾಗಿ ಬರೋಬ್ಬರಿ 200 ಕೋಟಿ ರೂಪಾಯಿ ಒಟ್ಟು ಗಳಿಕೆ (Worldwide Gross) ದಾಟಿದೆ ಎಂದು ವರದಿ ಆಗಿದೆ. ಭಾನುವಾರವೂ ಚಿತ್ರಕ್ಕೆ ಭಾರಿ ಬೇಡಿಕೆ ಕಂಡುಬಂದಿದ್ದು, ಮೊದಲ ವೀಕೆಂಡ್ ಮುಕ್ತಾಯದ ವೇಳೆಗೆ ‘ಪೆದ್ದಿ’ (Peddi) ಸಿನಿಮಾ ಒಟ್ಟು 240ರಿಂದ 250 ಕೋಟಿ ರೂಪಾಯಿ ಗಳಿಸುವ ಎಲ್ಲಾ ಮುನ್ಸೂಚನೆಗಳು ಸಿಕ್ಕಿವೆ.

‘ಪೆದ್ದಿ’ ಸಿನಿಮಾಗೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ವಿಶೇಷವಾಗಿ ಆಂಧ್ರ ಭಾಗದಲ್ಲಿ ಚಿತ್ರದ ಕಲೆಕ್ಷನ್ ಧೂಳೆಬ್ಬಿಸುತ್ತಿದ್ದರೆ, ಇತ್ತ ನಿಜಾಮ್ (ಹೈದರಾಬಾದ್) ಪ್ರಾಂತ್ಯದಲ್ಲೂ ಚಿತ್ರ ಸ್ಥಿರವಾದ ಗಳಿಕೆ ಕಾಣುತ್ತಿದೆ. ಈ ವೀಕೆಂಡ್ ಟ್ರೆಂಡ್​ನಿಂದಾಗಿ ಸದ್ಯ ಚಿತ್ರತಂಡ ನಿಟ್ಟುಸಿರು ಬಿಡುವಂತೆ ಆಗಿದೆ. ಆದರೂ ಚಿತ್ರತಂಡದ ಮುಂದೆ ಸವಾಲು ಇದೆ.

ಹೌದು, ಈ ಸಿನಿಮಾ ಸುಮಾರು 350 ಕೋಟಿ ರೂಪಾಯಿಗಳ ಬೃಹತ್ ಬಜೆಟ್‌ನಲ್ಲಿ ನಿರ್ಮಾಣವಾಗಿದೆ. ಹಾಗಾಗಿ, ಬಾಕ್ಸ್ ಆಫೀಸ್‌ನಲ್ಲಿ ಅಧಿಕೃತವಾಗಿ ‘ಹಿಟ್’ ಎನಿಸಿಕೊಳ್ಳಬೇಕಾದರೆ ಈ ಸಿನಿಮಾ ಜಾಗತಿಕವಾಗಿ ಕನಿಷ್ಠ 480ರಿಂದ 500 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಲೇಬೇಕಾದ ಅನಿವಾರ್ಯತೆ ಇದೆ. ತೆಲುಗು ರಾಜ್ಯಗಳ ಪ್ರದರ್ಶನ ಹೀಗೆಯೇ ಮುಂದುವರಿದರೆ ಈ ಟಾರ್ಗೆಟ್ ತಲುಪುವುದು ಕಷ್ಟವೇನಲ್ಲ.

ಆದರೆ, ಈ ಚಿತ್ರಕ್ಕೆ ಎದುರಾಗಿರುವ ಅತಿ ದೊಡ್ಡ ಮೈನಸ್ ಪಾಯಿಂಟ್ ಎಂದರೆ ಹೊರರಾಜ್ಯಗಳ ಕಲೆಕ್ಷನ್. ತೆಲುಗಿನಲ್ಲಿ ಅಬ್ಬರಿಸುತ್ತಿರುವ ‘ಪೆದ್ದಿ’ ಚಿತ್ರವು ಹಿಂದಿ, ತಮಿಳು ಮತ್ತು ಮಲಯಾಳಂ ಮಾರುಕಟ್ಟೆಗಳಲ್ಲಿ ನಿರೀಕ್ಷಿತ ಮಟ್ಟದ ವೇಗವನ್ನು ಪಡೆದುಕೊಂಡಿಲ್ಲ. ನಿರೀಕ್ಷಿತ ಮಟ್ಟದ ಕಲೆಕ್ಷನ್ ಮಾಡಬೇಕಾದರೆ ಈ ರಾಜ್ಯಗಳಲ್ಲೂ ಸಿನಿಮಾ ಚೇತರಿಸಿಕೊಳ್ಳಬೇಕಿದೆ. ಜೊತೆಗೆ, ಭಾನುವಾರ ಮತ್ತು ಸೋಮವಾರದ ಅಗ್ನಿಪರೀಕ್ಷೆ ಪಾಸ್ ಆಗಬೇಕಿದೆ.

ಇದನ್ನೂ ಓದಿ: ‘ಪೆದ್ದಿ’ ಚಿತ್ರದ ಆಕ್ಷೇಪಾರ್ಹ ಶಾಟ್‌ಗಳಿಗೆ ಜಾನ್ವಿ ಕಪೂರ್ ವಿರೋಧ? ನಟಿಯ ಮೆಸೇಜ್ ಲೀಕ್

ಇದೇ ವೇಳೆ ಸಿನಿಮಾದ ಟಿಕೆಟ್ ದರಗಳ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಮಲ್ಟಿಪ್ಲೆಕ್ಸ್ ಹಾಗೂ ಸಿಂಗಲ್ ಸ್ಕ್ರೀನ್‌ಗಳಲ್ಲಿ ಟಿಕೆಟ್ ಬೆಲೆ ಗಗನಕ್ಕೇರಿರುವುದರಿಂದ, ಕುಟುಂಬ ಸಮೇತ ಸಿನಿಮಾ ನೋಡಲು ಬರುವವರಿಗೆ ಇದು ಅತಿಯಾದ ಹೊರೆಯಾಗುತ್ತಿದೆ ಎಂಬ ದೂರು ಕೇಳಿಬಂದಿದೆ. ‘ದುಬಾರಿ ಟಿಕೆಟ್ ದರದಿಂದ ಆರಂಭಿಕ ದಿನಗಳ ಕಲೆಕ್ಷನ್‌ಗೆ ಸಹಾಯ ಆಗಬಹುದು. ಆದರೆ ನಂತರದ ದಿನಗಳಲ್ಲಿ ಜನ ಸಾಮಾನ್ಯರು ಥಿಯೇಟರ್‌ಗೆ ಬರಬೇಕಾದರೆ ಟಿಕೆಟ್ ದರವನ್ನು ಕಡಿಮೆ ಮಾಡುವುದು ಅನಿವಾರ್ಯ’ ಎಂಬ ಅಭಿಪ್ರಾಯ ಕೇಳಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ