AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ನಟನೆಯ ‘ಪೆದ್ದಿ’ ಚಿತ್ರಕ್ಕೆ ಜಾನ್ವಿ, ಮೃಣಾಲ್ ಮೆರುಗು: ಶೀಘ್ರವೇ ಸಾಂಗ್ ಶೂಟಿಂಗ್ ಶುರು

ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾದ ಕೆಲಸಗಳು ಇನ್ನೂ ನಡೆಯುತ್ತಲೇ ಇವೆ. ಒಂದು ಹಾಡಿನ ಶೂಟಿಂಗ್ ಬಾಕಿ ಇದೆ. ಈ ಹಾಡಿನಲ್ಲಿ ರಾಮ್ ಚರಣ್, ಜಾನ್ವಿ ಕಪೂರ್, ಮೃಣಾಲ್ ಠಾಕೂರ್ ಅವರು ಕಾಣಿಸಿಕೊಳ್ಳಲಿದ್ದಾರೆ. ಆದ್ದರಿಂದ ಈ ಹಾಡಿನ ಬಗ್ಗೆ ಸಖತ್ ನಿರೀಕ್ಷೆ ಸೃಷ್ಟಿ ಆಗಿದೆ.

ರಾಮ್ ಚರಣ್ ನಟನೆಯ ‘ಪೆದ್ದಿ’ ಚಿತ್ರಕ್ಕೆ ಜಾನ್ವಿ, ಮೃಣಾಲ್ ಮೆರುಗು: ಶೀಘ್ರವೇ ಸಾಂಗ್ ಶೂಟಿಂಗ್ ಶುರು
Ram Charan, Mrunal Thakur, Janhvi Kapoor
ಮದನ್​ ಕುಮಾರ್​
|

Updated on: Apr 01, 2026 | 3:14 PM

Share

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ‘ಪೆದ್ದಿ’ (Peddi) ಚಿತ್ರದ ಬಗ್ಗೆ ಇದೀಗ ಹೊಸದೊಂದು ಅಪ್‌ಡೇಟ್ ಹೊರಬಿದ್ದಿದೆ. ಅಭಿಮಾನಿಗಳಲ್ಲಿ ಕುತೂಹಲ ದುಪ್ಪಟ್ಟು ಮಾಡಿದೆ. ಮುಂದಿನ ವಾರದಿಂದ ಈ ಚಿತ್ರದ ಪ್ರಮುಖ ಹಾಡೊಂದರ ಚಿತ್ರೀಕರಣ ಆರಂಭವಾಗಲಿದ್ದು, ಚಿತ್ರತಂಡ ಅದ್ದೂರಿ ಸಿದ್ಧತೆ ಮಾಡಿಕೊಂಡಿದೆ. ಈ ಹಾಡಿನಲ್ಲಿ ರಾಮ್ ಚರಣ್ (Ram Charan) ಜೊತೆ ಜಾನ್ವಿ ಕಪೂರ್ ಮತ್ತು ಮೃಣಾಲ್ ಠಾಕೂರ್ ಕೂಡ ಹೆಜ್ಜೆ ಹಾಕಲಿದ್ದಾರೆ.

ಹಳ್ಳಿ ಸೊಗಡಿನ ಕಥಾಹಂದರ ಹೊಂದಿರುವ ‘ಪೆದ್ದಿ’ ಸಿನಿಮಾಗೆ ‘ಉಪ್ಪೆನಾ’ ಖ್ಯಾತಿಯ ಬುಚ್ಚಿ ಬಾಬು ಸನಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ವಿಶೇಷವೆಂದರೆ, ಇದರಲ್ಲಿ ಬಾಲಿವುಡ್ ಸುಂದರಿಯರಾದ ಜಾನ್ವಿ ಕಪೂರ್ ಮತ್ತು ಮೃಣಾಲ್ ಠಾಕೂರ್ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ. ಮುಂದಿನ ವಾರ ಚಿತ್ರೀಕರಣಗೊಳ್ಳಲಿರುವ ಹಾಡಿನಲ್ಲಿ ಈ ಇಬ್ಬರು ನಟಿಯರು ರಾಮ್ ಚರಣ್ ಜೊತೆ ಹೆಜ್ಜೆ ಹಾಕಲಿದ್ದು, ಇದು ಪ್ರೇಕ್ಷಕರ ಕಣ್ಣಿಗೆ ಹಬ್ಬವಾಗುವುದರಲ್ಲಿ ಅನುಮಾನವಿಲ್ಲ.

ತೆಲುಗು ಚಿತ್ರರಂಗದ ಖ್ಯಾತ ನೃತ್ಯ ಸಂಯೋಜಕ ಶೇಖರ್ ಮಾಸ್ಟರ್ ಈ ಹಾಡಿಗೆ ಕೊರಿಯೋಗ್ರಫಿ ಮಾಡುತ್ತಿದ್ದಾರೆ. ಶೇಖರ್ ಮಾಸ್ಟರ್ ಅವರ ಎನರ್ಜಿಟಿಕ್ ಸ್ಟೆಪ್‌ಗಳಿಗೆ ರಾಮ್ ಚರಣ್ ಅವರ ಡ್ಯಾನ್ಸ್ ಸೇರಿದರೆ ಸಿನಿಮಾ ಮಂದಿರದಲ್ಲಿ ಶಿಳ್ಳೆ-ಚಪ್ಪಾಳೆ ಗ್ಯಾರಂಟಿ. ಈಗಾಗಲೇ ಬಿಡುಗಡೆ ಆಗಿರುವ ‘ಚಿಕಿರಿ ಚಿಕಿರಿ’ ಹಾಡು ಅಭಿಮಾನಿಗಳಿಗೆ ಇಷ್ಟ ಆಗಿದೆ.

ಈ ಮೊದಲು ‘ಪೆದ್ದಿ’ ಚಿತ್ರವನ್ನು ಏಪ್ರಿಲ್ 30ರಂದು ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿತ್ತು. ಆದರೆ ಸದ್ಯದ ಮಾಹಿತಿ ಪ್ರಕಾರ, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಾಕಿ ಇರುವುದರಿಂದ ಬಿಡುಗಡೆ ದಿನಾಂಕ ಸ್ವಲ್ಪ ಮುಂದೂಡಿಕೆಯಾಗುವ ಸಾಧ್ಯತೆ ಇದೆ ಎಂದು ಚಿತ್ರರಂಗದ ಮೂಲಗಳು ತಿಳಿಸಿವೆ. ಸ್ಟಾರ್ ಕಲಾವಿದರು ಮತ್ತು ಪ್ರತಿಭಾವಂತ ತಾಂತ್ರಿಕ ವರ್ಗವನ್ನು ಹೊಂದಿರುವ ‘ಪೆದ್ದಿ’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: ‘ಪೆದ್ದಿ’ ಸಿನಿಮಾನಲ್ಲಿ ಶಿವರಾಜ್ ಕುಮಾರ್ ಪಾತ್ರವೇನು?

‘ಪೆದ್ದಿ’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಚಿತ್ರತಂಡದ ಕಡೆಯಿಂದ ಇನ್ನೂ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಆದರೆ ಕೇಳಿಬರುತ್ತಿರುವ ವದಂತಿಗಳಿಗೆ ಚಿತ್ರತಂಡ ಸ್ಪಷ್ಟನೆ ಕೂಡ ನೀಡಿಲ್ಲ. ಹಾಗಾಗಿ ರಿಲೀಸ್ ದಿನಾಂಕದ ಬಗ್ಗೆ ಅಭಿಮಾನಿಗಳಲ್ಲಿ ಗೊಂದಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ