ಹಾಲಿವುಡ್ ಸಿನಿಮಾ ಒಪ್ಪಿಕೊಳ್ಳಲ್ಲ ರಾಮ್ ಚರಣ್: ಕಾರಣ ವಿವರಿಸಿದ ನಟ

‘ಆರ್​ಆರ್​ಆರ್’ ಸಿನಿಮಾದ ಭಾರಿ ಯಶಸ್ಸಿನ ಬಳಿಕ ರಾಮ್ ಚರಣ್ ಪ್ಯಾನ್ ವರ್ಲ್ಡ್ ನಟ ಆಗಿದ್ದಾರೆ. ಹಾಲಿವುಡ್​ನಿಂದಲೂ ರಾಮ್ ಚರಣ್​ಗೆ ಅವಕಾಶಗಳು ಬರುತ್ತಿವೆ ಎನ್ನಲಾಗುತ್ತಿದೆ. ಆದರೆ ಹಿಂದೊಮ್ಮೆ ಮಾತನಾಡಿದ್ದ ರಾಮ್ ಚರಣ್ ತಾವು ಹಾಲಿವುಡ್ ಸಿನಿಮಾಗಳಲ್ಲಿ ನಟಿಸುವುದಿಲ್ಲ ಎಂದಿದ್ದರು.

ಹಾಲಿವುಡ್ ಸಿನಿಮಾ ಒಪ್ಪಿಕೊಳ್ಳಲ್ಲ ರಾಮ್ ಚರಣ್: ಕಾರಣ ವಿವರಿಸಿದ ನಟ
Follow us
| Updated By: ಮಂಜುನಾಥ ಸಿ.

Updated on: Oct 22, 2024 | 6:38 PM

ಪ್ಯಾನ್ ಇಂಡಿಯಾ ಸೂಪರ್​ ಸ್ಟಾರ್ ರಾಮ್ ಚರಣ್ ಅವರಿಗೆ ವಿಶ್ವ ಮಟ್ಟದಲ್ಲಿ ಕ್ರೇಜ್ ಇದೆ. ಅವರ ನಟನೆಯ ‘ಆರ್ಆರ್ಆರ್’ ಸಿನಿಮಾ ಹಾಲಿವುಡ್ ಮಟ್ಟದಲ್ಲಿ ಸದ್ದು ಮಾಡಿತು. ಈ ಸಿನಿಮಾ ಆಸ್ಕರ್ ಕೂಡ ಗೆದ್ದಿತ್ತು. ಅನೇಕ ಹಾಲಿವುಡ್ನ ನಿರ್ದೇಶಕರು ಹಾಗೂ ಕಲಾವಿದರು ರಾಮ್ ಚರಣ್ ಜೊತೆ ಕೆಲಸ ಮಾಡುವ ಇಂಗಿತ ಹೊರಹಾಕಿದ್ದಾರೆ. ಇದಕ್ಕೆ ರಾಮ್ ಚರಣ್ ಅವರು ಒಪ್ಪಿಗೆ ಸೂಚಿಸಿಲ್ಲ. ಅವರು ಎಂದಿಗೂ ಹಾಲಿವುಡ್ ಸಿನಿಮಾ ಮಾಡುವುದಿಲ್ಲವಂತೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಕೊಟ್ಟಿದ್ದಾರೆ.

ಕಳೆದ ವರ್ಷ ರಾಮ್ ಚರಣ್ ಅವರು ಹಾಲಿವುಡ್ ಹೋಗುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಅವರಿಗೆ ಈ ಬಗ್ಗೆ ಪ್ರಶ್ನೆ ಕೂಡ ಎದುರಾಗಿತ್ತು. ಅವರು ವಿಶೇಷ ಈವೆಂಟ್ಗಾಗಿ ಜಮ್ಮು ಮತ್ತು ಕಾಶ್ಮೀರ ತೆರಳಿದ್ದರು. ಅವರಿಗೆ ಅಲ್ಲಿ ಹಾಲಿವುಡ್ನಲ್ಲಿ ಕೆಲಸ ಮಾಡುವ ಬಗ್ಗೆ ಕೇಳಲಾಗಿತ್ತು.

‘ನಾನು ಭಾರತದಲ್ಲೇ ಹೆಚ್ಚು ಅನ್ವೇಷಣೆ ಮಾಡಬೇಕು. ನಾನು ನನ್ನ ಸಂಸ್ಕೃತಿಗೆ ಅಂಟಿಕೊಳ್ಳುತ್ತೇನೆ. ನಮ್ಮ ಭಾರತೀಯ ಭಾವನೆಗಳು ಎಷ್ಟು ಪ್ರಬಲವಾಗಿವೆ ಎಂಬುದನ್ನು ನಾನು ಜನರಿಗೆ ತಿಳಿಸಲು ಬಯಸುತ್ತೇನೆ. ನಮ್ಮ ಸಂಸ್ಕೃತಿ ತುಂಬಾ ಪ್ರಬಲವಾಗಿದೆ. ನಮ್ಮ ಕಥೆಗಳಲ್ಲಿ ಸಾಕಷ್ಟು ಘನತೆ ಇದೆ. ದಕ್ಷಿಣ ಭಾರತದ ಅಥವಾ ಉತ್ತರ ಭಾರತದ ಸಿನಿಮಾ ಎಂದಲ್ಲ. ಇದು ಭಾರತೀಯ ಮಣ್ಣಿನ ಕಥೆಗಳ ಬಗ್ಗೆ. ಈ ಕಥೆಗಳನ್ನು ಹೇಳಬೇಕು’ ಎಂದಿದ್ದರು ರಾಮ್ ಚರಣ್.

ಇದನ್ನೂ ಓದಿ:ರಾಮ್ ಚರಣ್ ಸಿನಿಮಾ ಬಿಡುಗಡೆ ಮುಂದೂಡಿಕೆ, ಮಗನಿಗೆ ಜಾಗ ಬಿಟ್ಟುಕೊಟ್ಟ ಮೆಗಾಸ್ಟಾರ್

ರಾಮ್ ಚರಣ್ ಅವರು ಸದ್ಯ ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಈ ವರ್ಷವೇ ರಿಲೀಸ್ ಆಗುವ ಸಾಧ್ಯತೆ ಇದೆ. ಶಂಕರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತಿದ್ದಾರೆ. ಈ ಚಿತ್ರಕ್ಕೆ ಕಿಯಾರಾ ಅಡ್ವಾಣಿ ನಾಯಕಿ. ಈ ಸಿನಿಮಾ ಬಗ್ಗೆ ಫ್ಯಾನ್ಸ್ಗೆ ಆತಂಕ ಶುರುವಾಗಿದೆ.

ಶಂಕರ್ ನಿರ್ದೇಶನ ಮಾಡಿದ್ದ ‘ಇಂಡಿಯನ್ 2’ ಚಿತ್ರ ಸೋತಿದೆ. ಇದಾದ ಬಳಿಕ ಅವರು ‘ಗೇಮ್ ಚೇಂಜರ್’ ರಿಲೀಸ್ ಮಾಡಲಾಗುತ್ತಿದೆ. ಈ ಚಿತ್ರವನ್ನು ಫ್ಯಾನ್ಸ್ ಹೆಚ್ಚು ಇಷ್ಟಪಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ರಾಮ್ ಚರಣ್ ನಟನೆಯ ಈ ಮೊದಲ ಸಿನಿಮಾ ‘ಆಚಾರ್ಯ’ ಹೀನಾಯವಾಗಿ ಸೋತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್