AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಈ ಸಿನಿಮಾದಲ್ಲಿ ರಾಮ್​ ಚರಣ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇದಾದ ನಂತರ ತೆರೆಗೆ ಬಂದ ರಾಮ್​ ಚರಣ್ ಸಿನಿಮಾ ‘ಆಚಾರ್ಯ’. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮಕಾಡೆ ಮಲಗಿದೆ.

ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್
ರಾಮ್ ಚರಣ್​-ರಾಜಮೌಳಿ
TV9 Web
| Edited By: |

Updated on: May 02, 2022 | 10:15 PM

Share

ನಿರ್ದೇಶಕ ರಾಜಮೌಳಿ ಅವರು (SS Rajamouli) ಬಣ್ಣದ ಲೋಕದಲ್ಲಿ ಮಾಡಿದ ಮೋಡಿ ತುಂಬಾನೇ ದೊಡ್ಡದು. ಅವರ ಜತೆ ಕೆಲಸ ಮಾಡಬೇಕು ಎಂಬುದು ಅನೇಕರ ಕನಸು. ಆದರೆ, ಎಲ್ಲರಿಗೂ ಆ ಅವಕಾಶ ಸಿಗುವುದಿಲ್ಲ. ರಾಜಮೌಳಿ ನಿರ್ದೇಶನದ ಸಿನಿಮಾ ತೆರೆಗೆ ಬಂತು ಎಂದಾದರೆ ಗೆಲುವು ಖಚಿತ. ಆದರೆ, ಈ ನಿರ್ದೇಶಕನ ಜತೆ ಕೆಲಸ ಮಾಡಿದ ನಂತರ ಬೇರೆ ನಿರ್ದೇಶಕರ ಜತೆ ಕೈ ಜೋಡಿಸಿದರೆ ಸೋಲು ಉಣ್ಣಬೇಕಾಗುತ್ತದೆ ಎನ್ನುವ ಮೂಢನಂಬಿಕೆ ಟಾಲಿವುಡ್​ನಲ್ಲಿದೆ (Tollywood). ಕಾಕತಾಳಿಯವೋ ಎಂಬಂತೆ, ಪ್ರತಿ ಬಾರಿಯೂ ಇದು ಸಾಬೀತಾಗುತ್ತಿದೆ. ಈಗ ಈ ವಿಚಾರ ಮತ್ತೆ ಮುನ್ನೆಲೆಗೆ ಬರಲು ಕಾರಣ ‘ಆಚಾರ್ಯ’ ಸಿನಿಮಾ (Acharya Movie).

2001ರಲ್ಲಿ ರಾಜಮೌಳಿ ನಿರ್ದೇಶಿಸಿದ ‘ಸ್ಟೂಡೆಂಟ್​ ನಂಬರ್​ 1’ ಚಿತ್ರಕ್ಕೆ ಜ್ಯೂ. ಎನ್​ಟಿಆರ್​ ಹೀರೋ ಆಗಿದ್ದರು. ಆ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​​ಗೆ ದೊಡ್ಡ ಗೆಲುವು ಸಿಕ್ಕಿತು. ಆದರೆ ನಂತರ ಅವರು ನಟಿಸಿದ ‘ಸುಬ್ಬ’ ಸಿನಿಮಾ ಫ್ಲಾಪ್​ ಆಯಿತು. ಬಳಿಕ ರಾಜಮೌಳಿ ಮತ್ತು ಜ್ಯೂ. ಎನ್​ಟಿಆರ್ ಜೊತೆಯಾಗಿ ‘ಸಿಂಹಾದ್ರಿ’ ಸಿನಿಮಾ ಮಾಡಿ ಯಶಸ್ಸು ಕಂಡರು. ಆ ಬಳಿಕ ಜ್ಯೂ. ಎನ್​ಟಿಆರ್ ನಟಿಸಿದ ‘ಆಂಧ್ರಾವಾಲ’ ಸೋತು ಸುಣ್ಣವಾಯಿತು. ರಾಜಮೌಳಿ ಜೊತೆ ‘ಮಗಧೀರ’ ಚಿತ್ರ ಮಾಡಿ ಗೆದ್ದಿದ್ದ ರಾಮ್​ ಚರಣ್​ ಅವರು ನಂತರ ‘ಆರೆಂಜ್’​ ಸಿನಿಮಾದಲ್ಲಿ ಹೀನಾಯವಾಗಿ ಸೋಲು ಅನುಭವಿಸಿದರು. ಪ್ರಭಾಸ್​ ವಿಚಾರದಲ್ಲೂ ಈ ನಂಬಿಕೆ ನಿಜವಾಗಿದೆ. ರಾಜಮೌಳಿ ನಿರ್ದೇಶಿಸಿದ ‘ಚತ್ರಪತಿ’ ಸಿನಿಮಾದಲ್ಲಿ ಪ್ರಭಾಸ್​ಗೆ ಗೆಲುವು ಸಿಕ್ಕಿತ್ತು. ನಂತರ ಮಾಡಿದ ‘ಪೌರ್ಣಮಿ’ ಚಿತ್ರದಲ್ಲಿ ಅವರು ಸೋಲು ಕಂಡರು. ‘ಬಾಹುಬಲಿ’ ಬಳಿಕ ಪ್ರಭಾಸ್​ ನಟಿಸಿದ ‘ಸಾಹೋ’, ‘ರಾಧೆ ಶ್ಯಾಮ್​’ ಚಿತ್ರ ಫ್ಲಾಪ್ ಆಯಿತು.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಈ ಸಿನಿಮಾದಲ್ಲಿ ರಾಮ್​ ಚರಣ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇದಾದ ನಂತರ ತೆರೆಗೆ ಬಂದ ರಾಮ್​ ಚರಣ್ ಸಿನಿಮಾ ‘ಆಚಾರ್ಯ’. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮಕಾಡೆ ಮಲಗಿದೆ. ಬುಕ್​ ಮೈ ಶೋನಲ್ಲಿ ಕೇವಲ 59 ರೇಟಿಂಗ್ ಪಡೆದುಕೊಂಡಿದೆ. ರಾಮ್​ ಚರಣ್ ಹಾಗೂ ಚಿರಂಜೀವಿ ಒಟ್ಟಾಗಿ ನಟಿಸಿದ ಈ ಸಿನಿಮಾ ಹೀನಾಯವಾಗಿ ಸೋತಿತಲ್ಲ ಎನ್ನುವ ಬೇಸರ ಫ್ಯಾನ್ಸ್​ಗೆ ಇದೆ. ಈ ಮಧ್ಯೆ ಎಲ್ಲರೂ ರಾಜಮೌಳಿ ನೆನಪಿಸಿಕೊಳ್ಳುತ್ತಿದ್ದಾರೆ. ‘ರಾಮ್​ ಚರಣ್ ಸೋಲಿಗೆ ರಾಜಮೌಳಿ ಜತೆ ಕೆಲಸ ಮಾಡಿದ್ದೇ ಕಾರಣ’ ಎಂದು ಫ್ಯಾನ್ಸ್ ಶಪಿಸುತ್ತಿದ್ದಾರೆ.

ಜ್ಯೂ.ಎನ್​ಟಿಆರ್​ ಕೂಡ ‘ಆರ್​ಆರ್​ಆರ್’ ಸಿನಿಮಾದಲ್ಲಿ ನಟಿಸಿದ್ದರು. ಅವರ ಮುಂದಿನ ಸಿನಿಮಾಗೆ ಸದ್ಯ ಸಿದ್ಧತೆ ನಡೆಯುತ್ತಿದೆ. ಈಗ ರಾಮ್​ ಚರಣ್​ ವಿಚಾರದಲ್ಲಿ ಇತಿಹಾಸ ಮರುಕಳಿಸಿರುವುದರಿಂದ ಜ್ಯೂ.ಎನ್​ಟಿಆರ್​ ಫ್ಯಾನ್ಸ್ ಆತಂಕಗೊಂಡಿದ್ದಾರೆ.

ಇತರೆ ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬಂಕಿಮ್​ ಚಂದ್ರ ಚಟರ್ಜಿ ಬಯೋಪಿಕ್​​: ಸ್ಕ್ರಿಪ್ಟ್​ ಕೆಲಸ ಒಪ್ಪಿಕೊಂಡ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್​ 

‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!