AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್​ನಲ್ಲಿ ರಿಲೀಸ್ ಆಗಲಿದೆ ‘ಗೇಮ್ ಚೇಂಜರ್’? ನಡೆಯಲಿದೆ ಬಿಗ್ ಕ್ಲ್ಯಾಶ್

‘ಗೇಮ್ ಚೇಂಜರ್’ ಸಿನಿಮಾಗೆ ಟಾಲಿವುಡ್​ನ ಖ್ಯಾತ ನಿರ್ಮಾಪಕ ‘ದಿಲ್ ರಾಜು’ ಅವರು ಬಂಡವಾಳ ಹೂಡುತ್ತಿದ್ದಾರೆ. ಖ್ಯಾತ ನಿರ್ದೇಶಕ ಎಸ್. ಶಂಕರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಶಂಕರ್ ಅವರು ‘ಇಂಡಿಯನ್ 2’ ಸಿನಿಮಾ ಕೆಲಸಗಳಲ್ಲೂ ತೊಡಗಿಕೊಂಡಿರುವುದರಿಂದ ಈ ಚಿತ್ರದ ಕೆಲಸ ವಿಳಂಬ ಆಗುತ್ತಿದೆ.

ಅಕ್ಟೋಬರ್​ನಲ್ಲಿ ರಿಲೀಸ್ ಆಗಲಿದೆ ‘ಗೇಮ್ ಚೇಂಜರ್’? ನಡೆಯಲಿದೆ ಬಿಗ್ ಕ್ಲ್ಯಾಶ್
ರಾಮ್ ಚರಣ್
 ಶ್ರೀಲಕ್ಷ್ಮೀ ಎಚ್
| Edited By: |

Updated on: May 29, 2024 | 8:01 AM

Share

‘ಗೇಮ್ ಚೇಂಜರ್’ ಸಿನಿಮಾ (Game Changer Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಸಿನಿಮಾ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಆದಾಗ್ಯೂ ಚಿತ್ರತಂಡ ಶೂಟಿಂಗ್​ ಮಾತ್ರ ಪೂರ್ಣಗೊಳಿಸಿಲ್ಲ. ಒಂದಾದಮೇಲೆ ಒಂದರಂತೆ ಈ ಸಿನಿಮಾದ ಶೂಟಿಂಗ್ ಶೆಡ್ಯೂಲ್ ನಡೆಯುತ್ತಲೇ ಇದ್ದು ಫ್ಯಾನ್ಸ್ ಬೇಸರಗೊಂಡಿದ್ದಾರೆ. ‘ಗೇಮ್ ಚೇಂಜರ್’ ಥಿಯೇಟರ್​ಗೆ ಯಾವಾಗ ಬರಲಿದೆ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಲೇ ಇದ್ದಾರೆ. ಇದಕ್ಕೆ ಅಕ್ಟೋಬರ್ ಎನ್ನುವ ಉತ್ತರ ಮೂಲಗಳಿಂದ ಸಿಕ್ಕಿದೆ. ಈ ಮೂಲಕ ದೊಡ್ಡ ಸಿನಿಮಾಗಳ ಮಧ್ಯೆ ಫೈಟ್ ಏರ್ಪಡೋ ಸಾಧ್ಯತೆ ದಟ್ಟವಾಗಿದೆ.

‘ಗೇಮ್ ಚೇಂಜರ್’ ಸಿನಿಮಾಗೆ ಟಾಲಿವುಡ್​ನ ಖ್ಯಾತ ನಿರ್ಮಾಪಕ ‘ದಿಲ್ ರಾಜು’ ಅವರು ಬಂಡವಾಳ ಹೂಡುತ್ತಿದ್ದಾರೆ. ಖ್ಯಾತ ನಿರ್ದೇಶಕ ಎಸ್. ಶಂಕರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಶಂಕರ್ ಅವರು ‘ಇಂಡಿಯನ್ 2’ ಸಿನಿಮಾ ಕೆಲಸಗಳಲ್ಲೂ ತೊಡಗಿಕೊಂಡಿರುವುದರಿಂದ ಈ ಚಿತ್ರದ ಕೆಲಸ ವಿಳಂಬ ಆಗುತ್ತಿದೆ. ನಿರ್ದೇಶಕರಾಗಲಿ, ನಿರ್ಮಾಪಕರಾಗಲಿ ಸಿನಿಮಾ ರಿಲೀಸ್ ಬಗ್ಗೆ ಮಾಹಿತಿ ನೀಡಿಲ್ಲ. ಆದರೆ, ಈ ಸಿನಿಮಾ ಅಕ್ಟೋಬರ್​ನಲ್ಲಿ ರಿಲೀಸ್ ಆಗೋ ಸಾಧ್ಯತೆ ಇದೆ.

ಇತ್ತೀಚೆಗೆ ದಿಲ್ ರಾಜು ಅವರು ಮಾಧ್ಯಮಗಳ ಜೊತೆ ಮಾತನಾಡುತ್ತಾ, ‘ಈ ವರ್ಷದ ದೀಪಾವಳಿಗೆ ಸಿನಿಮಾ ರಿಲೀಸ್ ಮಾಡುವ ಉದ್ದೇಶ ಇಟ್ಟುಕೊಂಡಿದ್ದೇವೆ’ ಎಂದು ಹೇಳಿದ್ದಾರೆ. ಈ ವರ್ಷ ಅಕ್ಟೋಬರ್ ಅಂತ್ಯಕ್ಕೆ ದೀಪಾವಳಿ ಬಂದಿದೆ. ಅಕ್ಟೋಬರ್ ಆರಂಭದಲ್ಲೇ ಈ ಸಿನಿಮಾ ರಿಲೀಸ್ ಮಾಡಲಾಗುತ್ತದೆಯೇ ಅಥವಾ ಅಕ್ಟೋಬರ್ ಅಂತ್ಯಕ್ಕೆ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ.

ಅಕ್ಟೋಬರ್ ಆರಂಭದಲ್ಲಿ ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಹಾಗೂ ಕನ್ನಡದಲ್ಲಿ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಬಿಡುಗಡೆ ಆಗಲಿದೆ ಎಂದು ಘೋಷಿಸಿದೆ. ಈ ಸಂದರ್ಭದಲ್ಲಿ ‘ಗೇಮ್ ಚೇಂಜರ್’ ಫೈಟ್​ಗೆ ಇಳಿಯೋದು ಅನುಮಾನ. ಹೀಗಾಗಿ, ಅಕ್ಟೋಬರ್ ಅಂತ್ಯಕ್ಕೆ ಈ ಸಿನಿಮಾ ರಿಲೀಸ್ ಆಗೋ ಸಾಧ್ಯತೆ ಇದೆ.

‘ಗೇಮ್ ಚೇಂಜರ್’ ಸಿನಿಮಾದ ಬಜೆಟ್ 300 ಕೋಟಿ ರೂಪಾಯಿಗೂ ಅಧಿಕವಾಗಿದೆ. ಇದನ್ನು ರಿಕವರಿ ಮಾಡಿಕೊಳ್ಳಬೇಕು ಎಂದರೆ ಸಿನಿಮಾ ಒಳ್ಳೆಯ ಬಿಸ್ನೆಸ್ ಮಾಡಬೇಕು. ಹೀಗಾಗಿ, ಸಿನಿಮಾ ರಿಲೀಸ್ ಮಾಡಲು ತಂಡದವರು ತರಾತುರಿ ಮಾಡುವಂತಿಲ್ಲ.

ಇದನ್ನೂ ಓದಿ: ರಾಮ್​ ಚರಣ್ ನಟನೆಯ ‘ಗೇಮ್ ಚೇಂಜರ್’: ಹಾಡು ಚಿತ್ರೀಕರಣಕ್ಕೆ 60 ಕೋಟಿಗೂ ಹೆಚ್ಚು ಖರ್ಚು

‘ಗೇಮ್ ಚೇಂಜರ್​’ಗೆ ಇನ್ನೂ 50 ದಿನಗಳ ಶೂಟ್ ಬಾಕಿ ಇದೆಯಂತೆ. ಈ ಸಿನಿಮಾನ ರೀಶೂಟ್ ಮಾಡಲಾಗುತ್ತಿದೆಯೇ ಎನ್ನುವ ಅನುಮಾನ ಇದೆ. ಹಿಂದಿಯ ಕಿಯಾರಾ ಅಡ್ವಾಣಿ ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. 2023ರಲ್ಲಿ ಈ ಸಿನಿಮಾನ ರಿಲೀಸ್ ಮಾಡೋ ಆಲೋಚನೆ ಚಿತ್ರತಂಡಕ್ಕೆ ಇತ್ತು. ಆದರೆ, ಅದು ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ