AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಬರ್ತ್​ಡೇಗೆ ‘ಗೇಮ್ ಚೇಂಜರ್’ ಸಾಂಗ್ ರಿಲೀಸ್; ಗಮನ ಸೆಳೆದ ಕಾಂಬಿನೇಷನ್

ಸಿನಿಮಾ ರಿಲೀಸ್​ಗೂ ಮೊದಲು ಚಿತ್ರತಂಡದವರು ಸಾಂಗ್ ರಿಲೀಸ್ ಮಾಡುವ ವಾಡಿಕೆ ಮೊದಲಿನಿಂದಲೂ ಇದೆ. ಅದೇ ರೀತಿ ‘ಗೇಮ್ ಚೇಂಜರ್’ ಸಿನಿಮಾ ತಂಡದಿಂದ ‘ಜರಗಂಡಿ..’ ಹಾಡು ರಿಲೀಸ್ ಮಾಡಲಾಗಿದೆ. ಈ ಹಾಡಿನಲ್ಲಿ ಕಿಯಾರಾ ಹಾಗೂ ರಾಮ್ ಚರಣ್ ಸ್ಟಿಲ್​ಗಳನ್ನು ಬಳಕೆ ಮಾಡಲಾಗಿದೆ.

ರಾಮ್ ಚರಣ್ ಬರ್ತ್​ಡೇಗೆ ‘ಗೇಮ್ ಚೇಂಜರ್’ ಸಾಂಗ್ ರಿಲೀಸ್; ಗಮನ ಸೆಳೆದ ಕಾಂಬಿನೇಷನ್
ಕಿಯಾರಾ-ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Mar 27, 2024 | 10:28 AM

Share

ರಾಮ್ ಚರಣ್ (Ram Charan) ಅವರು ‘ಗೇಮ್ ಚೇಂಜರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು ಬಿಟ್ಟರೆ ಯಾವುದೇ ಅಪ್​ಡೇಟ್ ಸಿಕ್ಕಿರಲಿಲ್ಲ. ಈಗ ‘ಗೇಮ್ ಚೇಂಜರ್’ ಸಿನಿಮಾದ ಸಾಂಗ್ ರಿಲೀಸ್ ಆಗಿದೆ. ಇಂದು (ಮಾರ್ಚ್ 27) ರಾಮ್ ಚರಣ್ ಅವರ ಬರ್ತ್​ಡೇ. ಆ ಪ್ರಯುಕ್ತ ತಂಡದವರು ಹಾಡನ್ನು ರಿಲೀಸ್ ಮಾಡಿದ್ದಾರೆ. ಈ ಹಾಡಿಗೆ ‘ಜರಗಂಡಿ..’ ಎಂದು ಟೈಟಲ್ ಇಡಲಾಗಿದೆ.

ಸಿನಿಮಾ ರಿಲೀಸ್​ಗೂ ಮೊದಲು ಚಿತ್ರತಂಡದವರು ಸಾಂಗ್ ರಿಲೀಸ್ ಮಾಡುವ ವಾಡಿಕೆ ಮೊದಲಿನಿಂದಲೂ ಇದೆ. ಅದೇ ರೀತಿ ‘ಗೇಮ್ ಚೇಂಜರ್’ ಸಿನಿಮಾ ತಂಡದಿಂದ ‘ಜರಗಂಡಿ..’ ಹಾಡು ರಿಲೀಸ್ ಮಾಡಲಾಗಿದೆ. ಈ ಹಾಡಿನಲ್ಲಿ ಕಿಯಾರಾ ಹಾಗೂ ರಾಮ್ ಚರಣ್ ಸ್ಟಿಲ್​ಗಳನ್ನು ಬಳಕೆ ಮಾಡಲಾಗಿದ್ದು ಅವರ ಕಾಂಬಿನೇಷನ್ ಗಮನ ಸೆಳೆದಿದೆ.

ಟಾಲಿವುಡ್​ನಲ್ಲಿ ವಿಶೇಷ ಹಾಡುಗಳಿಗೆ ದೊಡ್ಡ ದೊಡ್ಡ ಸೆಟ್ ಹಾಕಲಾಗುತ್ತದೆ. ‘ಗೇಮ್ ಚೇಂಜರ್’ ಹಾಡಿನ ಶೂಟ್​ಗೂ ಭರ್ಜರಿ ಸೆಟ್ ಬಳಕೆ ಮಾಡಲಾಗಿದೆ ಎಂಬುದು ಈ ಸಾಂಗ್ ಮೂಲಕ ಗೊತ್ತಾಗಿದೆ. ಈ ಹಾಡಿಗೆ ಥಮನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡು ರಿಲೀಸ್ ಆದ ಒಂದೇ ಗಂಟೆ ಲಕ್ಷ ಲಕ್ಷ ವೀಕ್ಷಣೆ ಕಂಡಿದೆ. ಫ್ಯಾನ್ಸ್ ಈ ಹಾಡನ್ನು ಇಷ್ಟಪಡುತ್ತಿದ್ದಾರೆ.

ಇದನ್ನೂ ಓದಿ: ರಾಮ್ ಚರಣ್ ಕೈಯಲ್ಲಿದೆ ಮೂರು ಬಿಗ್ ಬಜೆಟ್ ಸಿನಿಮಾ

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಆದಾಗ್ಯೂ ಇನ್ನೂ ಸಿನಿಮಾದ ಕೆಲಸ ಮುಗಿದಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇಷ್ಟು ದಿನ ಸಿನಿಮಾ ಬಗ್ಗೆ ಅಪ್​ಡೇಟ್ ಸಿಗದೆ ಫ್ಯಾನ್ಸ್ ಸಿಕ್ಕಾಪಟ್ಟೆ ತಲೆಬಿಸಿ ಮಾಡಿಕೊಂಡಿದ್ದರು. ಆದರೆ, ಈಗ ಸಾಂಗ್ ರಿಲೀಸ್ ಆಗಿರುವುದರಿಂದ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ