ರಾಮ್ ಚರಣ್ ಸಿನಿಮಾ ಬಿಡುಗಡೆ ಮುಂದೂಡಿಕೆ, ಮಗನಿಗೆ ಜಾಗ ಬಿಟ್ಟುಕೊಟ್ಟ ಮೆಗಾಸ್ಟಾರ್

ರಾಮ್ ಚರಣ್ ನಟಿಸಿ ಶಂಕರ್ ನಿರ್ದೇಶನ ಮಾಡಿರುವ ‘ಗೇಮ್ ಚೇಂಜರ್’ ಸಿನಿಮಾ ಇದೇ ಡಿಸೆಂಬರ್​ನಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ಈಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಬದಲಾಯಿಸಲಾಗಿದೆ. ಸಿನಿಮಾದ ಬಿಡುಗಡೆ ದಿನಾಂಕ ಮೂಂದೂಡಲಾಗಿದ್ದು, ಮಗನ ಸಿನಿಮಾಕ್ಕಾಗಿ ತಂದೆ ಮೆಗಾಸ್ಟಾರ್ ಚಿರಂಜೀವಿ ಜಾಗ ಬಿಟ್ಟುಕೊಟ್ಟಿದ್ದಾರೆ.

ರಾಮ್ ಚರಣ್ ಸಿನಿಮಾ ಬಿಡುಗಡೆ ಮುಂದೂಡಿಕೆ, ಮಗನಿಗೆ ಜಾಗ ಬಿಟ್ಟುಕೊಟ್ಟ ಮೆಗಾಸ್ಟಾರ್
Follow us
|

Updated on: Oct 13, 2024 | 2:30 PM

‘ಆರ್​ಆರ್​ಆರ್’ ಸಿನಿಮಾ ಮೂಲಕ ಗ್ಲೋಬಲ್ ಸ್ಟಾರ್ ಆಗಿದ್ದಾರೆ ರಾಮ್ ಚರಣ್. ಆದರೆ ‘ಆರ್​ಆರ್​ಆರ್’ ಸಿನಿಮಾದ ಬಳಿಕ ಬಿಡುಗಡೆ ಆದ ರಾಮ್ ಚರಣ್ ನಟನೆಯ ‘ಆಚಾರ್ಯ’ ಸಿನಿಮಾ ಅಟ್ಟರ್ ಪ್ಲಾಪ್ ಆಯ್ತು. ಇದೀಗ ಮತ್ತೆ ಗೆಲುವಿನ ಹಾದಿಗೆ ಮರಳುವ ಪ್ರಯತ್ನದಲ್ಲಿದ್ದಾರೆ ರಾಮ್ ಚರಣ್. ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶನ ಮಾಡುತ್ತಿರುವ ‘ಗೇಮ್ ಚೇಂಜರ್’ ಸಿನಿಮಾದಲ್ಲಿ ರಾಮ್ ಚರಣ್ ನಟಿಸುತ್ತಿದ್ದಾರೆ. ಈ ಸಿನಿಮಾ ಕಳೆದ ಒಂದು ವರ್ಷದಿಂದಲೂ ಚಿತ್ರೀಕರಣ ನಡೆಸುತ್ತಿದೆ. ಇನ್ನೇನು ಸಿನಿಮಾ ಬಿಡುಗಡೆ ಆಗಲಿದೆ ಎಂದುಕೊಳ್ಳುತ್ತಿರುವಾಗಲೇ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ವಿಶೇಷವೆಂದರೆ ಮಗನಿಗಾಗಿ ಅಪ್ಪ ಜಾಗ ಮಾಡಿಕೊಟ್ಟಿದ್ದಾರೆ.

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಕ್ರಿಸ್​ಮಸ್ ಸಮಯದಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ಆ ಮೂಲಕ ಕ್ರಿಸ್ ಮಸ್ ರಜೆ ಸಮಯದ ಲಾಭ ಪಡೆಯುವ ಯೋಜನೆ ಹಾಕಿಕೊಂಡಿತ್ತು. ಆದರೆ ಈಗ ಅನಿವಾರ್ಯ ಕಾರಣಗಳಿಂದ ಈ ಸಿನಿಮಾದ ಬಿಡುಗಡೆ ಮುಂದೂಡಲಾಗಿದೆ. ವಿಶೇಷವೆಂದರೆ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಗಿ, ಇತರೆ ಕೆಲ ಸ್ಟಾರ್ ನಟರ ಸಿನಿಮಾ ಬಿಡುಗಡೆ ಸಮಯದಲ್ಲಿ ಈ ಸಿನಿಮಾ ಸಹ ಬಿಡುಗಡೆ ಆಗಲಿಕ್ಕಿದೆ.

ಇದನ್ನೂ ಓದಿ:ಸಿನಿಮಾ ಬಗ್ಗೆ ಅಪ್ಡೇಟ್ ಕೊಡಲು ಮುಂದಾದ ‘ಗೇಮ್ ಚೇಂಜರ್’ ತಂಡ

‘ಗೇಮ್ ಚೇಂಜರ್’ ಸಿನಿಮಾ ಜನವರಿ 10 ರಂದು ಸಂಕ್ರಾಂತಿ ಸಂದರ್ಭದಲ್ಲಿ ಬಿಡುಗಡೆ ಆಗಲಿದೆ. ಸಂಕ್ರಾಂತಿಗೆ ಬಿಡುಗಡೆ ಆಗಲು ಈಗಾಗಲೇ ಹಲವು ಸಿನಿಮಾಗಳು ಸಾಲುಗಟ್ಟಿ ನಿಂತಿವೆ. ಇದರ ನಡುವೆ ಈಗ ‘ಗೇಮ್ ಚೇಂಜರ್’ ಸಹ ಸೇರಿಕೊಂಡಿದೆ. ತೆಲುಗು ಚಿತ್ರರಂಗದ ನಂಬಿಕೆ ಪ್ರಕಾರ ಸಂಕ್ರಾಂತಿಗೆ ಬಿಡುಗಡೆ ಆಗುವ ಸಿನಿಮಾಗಳು ನಷ್ಟ ಅನುಭವಿಸುವುದಿಲ್ಲ ಹಾಗಾಗಿ ‘ಗೇಮ್ ಚೇಂಜರ್’ ಸಿನಿಮಾವನ್ನು ಅದೇ ಸಮಯದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ವಿಶ್ವಂಭರ’ ಸಿನಿಮಾ ಸಂಕ್ರಾಂತಿಗೆ ಬಿಡುಗಡೆ ಆಗಲಿಕ್ಕಿತ್ತು. ಜನವರಿ 10ರಂದೇ ಸಿನಿಮಾದ ಬಿಡುಗಡೆ ಆಗುವುದರಲ್ಲಿತ್ತು ಆದರೆ ಈಗ ರಾಮ್ ಚರಣ್ ಸಿನಿಮಾ ಅದೇ ದಿನ ಬಿಡುಗಡೆ ಆಗುತ್ತಿರುವ ಕಾರಣದಿಂದಾಗಿ ಸಿನಿಮಾದ ಬಿಡುಗಡೆಯನ್ನು ಮುಂದಕ್ಕೆ ಹಾಕಿಕೊಳ್ಳಲಾಗಿದೆ. ‘ವಿಶ್ವಂಭರ’ ಸಿನಿಮಾದ ಹೊಸ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿಲ್ಲ. ಡಿಸೆಂಬರ್​ನಲ್ಲಿ ‘ಪುಷ್ಪ 2’ ಸಿನಿಮಾ ಬಿಡುಗಡೆ ಆಗುತ್ತಿರುವ ಕಾರಣ ‘ಗೇಮ್ ಚೇಂಜರ್’ ಸಿನಿಮಾದ ಬಿಡುಗಡೆ ಮುಂದೂಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ