AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ದಿನ ‘ಗೇಮ್ ಚೇಂಜರ್’ ಗಳಿಸಿದ್ದೆಷ್ಟು? ಹಿಟ್ ಅಥವಾ ಫ್ಲಾಪ್?

Game Changer Box Office: ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಮೊದಲ ದಿನ 51 ಕೋಟಿಗೂ ಹೆಚ್ಚು ಹಣ ಗಳಿಕೆ ಮಾಡಿತ್ತು. ಎರಡನೇ ದಿನ ಈ ಸಿನಿಮಾ ಮಾಡಿರುವ ಗಳಿಕೆ ಎಷ್ಟು? ಎರಡನೇ ದಿನದ ಕಲೆಕ್ಷನ್ ಸಿನಿಮಾ ಹಿಟ್ ಅಥವಾ ಪ್ಲಾಪ್ ಎಂಬುದನ್ನು ನಿರ್ಣಯ ಮಾಡುತ್ತದೆ. ಹಾಗಿದ್ದರೆ ರಾಮ್ ಚರಣ್ ಅವರ ಈ ಸಿನಿಮಾ ಹಿಟ್ ಆಯ್ತ? ಅಥವಾ ಫ್ಲಾಪ್ ಸಿನಿಮಾನಾ?

2ನೇ ದಿನ ‘ಗೇಮ್ ಚೇಂಜರ್’ ಗಳಿಸಿದ್ದೆಷ್ಟು? ಹಿಟ್ ಅಥವಾ ಫ್ಲಾಪ್?
Game Changer
ಮಂಜುನಾಥ ಸಿ.
|

Updated on: Jan 12, 2025 | 8:42 AM

Share

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಜನವರಿ 10ರಂದು ಅದ್ಧೂರಿಯಾಗಿ ತೆರೆ ಕಂಡಿದೆ. ಶಂಕರ್ ನಿರ್ದೇಶನದ ಈ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇರಿಸಲಾಗಿತ್ತು. ‘ಆರ್​ಆರ್​ಆರ್’ ಸಿನಿಮಾದ ಬಳಿಕ ರಾಮ್ ಚರಣ್ ಪೂರ್ಣ ಪ್ರಮಾಣದ ನಾಯಕನಾಗಿ ನಟಿಸುತ್ತಿರುವ ಸಿನಿಮಾ ಸಹ ಇದಾಗಿರುವ ಕಾರಣ ಸಿನಿಮಾದ ಬಗ್ಗೆ ದೊಡ್ಡ ನಿರೀಕ್ಷೆ ಇತ್ತು. ಸಿನಿಮಾ ಬಿಡುಗಡೆ ಆದ ಮೊದಲ ದಿನ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿತ್ತು. ಹಾಗಿದ್ದರೂ ಸಹ ಬಾಕ್ಸ್ ಆಫೀಸ್​ನಲ್ಲಿ ಬಹಳ ಒಳ್ಳೆಯ ಕಲೆಕ್ಷನ್ ಅನ್ನೇ ಮಾಡಿತು. ಇದೀಗ ಎರಡನೇ ದಿನ ಆ ಕಲೆಕ್ಷನ್ ಉಳಿದುಕೊಂಡಿದೆಯೇ? ಮೊದಲ ದಿನ ಏನೂ ಗೊತ್ತಿಲ್ಲದೆ ಪ್ರೇಕ್ಷಕ ಚಿತ್ರಮಂದಿರಕ್ಕೆ ಹೋಗಿರುತ್ತಾನೆ. ಹಾಗಾಗಿ ಎರಡನೇ ದಿನದ ಕಲೆಕ್ಷನ್ ಸಿನಿಮಾದ ನಿಜವಾದ ಸಾಮರ್ಥ್ಯವನ್ನು ತೋರಿಸುತ್ತದೆ. ಸಿನಿಮಾ ಹಿಟ್ ಅಥವಾ ಫ್ಲಾಪ್ ಎಂಬುದನ್ನು ಹೇಳುತ್ತದೆ. ಅಂದಹಾಗೆ ‘ಗೇಮ್ ಚೇಂಜರ್’ ಸಿನಿಮಾದ ಎರಡನೇ ದಿನದ ಕಲೆಕ್ಷನ್ ಎಷ್ಟಾಗಿದೆ?

ಜನವರಿ 10 ರಂದು ಬಿಡುಗಡೆ ಆಗಿದ್ದ ‘ಗೇಮ್ ಚೇಂಜರ್’ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ 51 ಕೋಟಿ ರೂಪಾಯಿ ಹಣ ಗಳಿಸಿದೆ. ಅಸಲಿಗೆ ಇದು ಬಹಳ ಉತ್ತಮ ಮೊತ್ತ. ಇಷ್ಟು ದೊಡ್ಡ ಮೊತ್ತವನ್ನು ‘ಗೇಮ್ ಚೇಂಜರ್’ ಸಿನಿಮಾ ಮೊದಲ ದಿನ ಕಲೆಕ್ಷನ್ ಮಾಡುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಆದರೆ ದೊಡ್ಡ ಮೊತ್ತವನ್ನೇ ‘ಗೇಮ್ ಚೇಂಜರ್’ ಗಳಿಸಿತ್ತು. ಎರಡನೇ ದಿನ ಸಿನಿಮಾದ ಕಲೆಕ್ಷನ್ 50% ಗಿಂತಲೂ ಹೆಚ್ಚು ಕುಸಿದಿದೆ. ಆ ಮೂಲಕ ಸಿನಿಮಾಕ್ಕೆ ನೆಗೆಟಿವ್ ಹೊಡೆತ ಬಿದ್ದಾಗಿದೆ.

ಇದನ್ನೂ ಓದಿ:ಮಿಶ್ರ ಪ್ರತಿಕ್ರಿಯೆ ಮಧ್ಯೆಯೂ ಭರ್ಜರಿ ಗಳಿಕೆ; ‘ಗೇಮ್ ಚೇಂಜರ್’ ಮೊದಲ ದಿನದ ಕಲೆಕ್ಷನ್ ಇಷ್ಟೊಂದಾ?

‘ಗೇಮ್ ಚೇಂಜರ್’ ಸಿನಿಮಾ ಎರಡನೇ ದಿನ ಬಾಕ್ಸ್ ಆಫೀಸ್​ನಲ್ಲಿ ಕೇವಲ 21.50 ಕೋಟಿ ರೂಪಾಯಿ ಹಣವನ್ನು ಮಾತ್ರವೇ ಗಳಿಸಿದೆ. ಮೊದಲ ದಿನಕ್ಕೆ ಹೋಲಿಸಿದರೆ ಈ ಮೊತ್ತ ಬಹಳ ಕಡಿಮೆ. ಮೊದಲ ಸಿನಿಮಾ ಸಿನಿಮಾ ನೋಡಿದ ಮಂದಿ ನೀರಸ ಅಭಿಪ್ರಾಯ ವ್ಯಕ್ತಪಡಿಸಿದ ಕಾರಣ ಅದರ ಪರಿಣಾಮ ಎರಡನೇ ದಿನದ ಮೇಲಾಗಿದೆ. ಮೊದಲ ದಿನ ನಿರೀಕ್ಷೆಯಿಂದ ಚಿತ್ರಮಂದಿರಕ್ಕೆ ಜನ ಬಂದಿದ್ದರು. ಆದರೆ ಸಿನಿಮಾದ ಬಗ್ಗೆ ನೆಗೆಟಿವ್ ವಿಮರ್ಶೆಗಳು ಹಬ್ಬಿದ ಕಾರಣ ಎರಡನೇ ದಿನಕ್ಕೆ ಸಿನಿಮಾದ ಕಲೆಕ್ಷನ್ ಕುಸಿದಿದೆ.

ಮೂರನೇ ದಿನದ ಕಲೆಕ್ಷನ್ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ಏಕೆಂದರೆ ಜನವರಿ 12 ರಂದು ನಂದಮೂರಿ ಬಾಲಕೃಷ್ಣ ನಟನೆಯ ‘ಡಾಕೂ ಮಹಾರಾಜ್’ ಸಿನಿಮಾ ಬಿಡುಗಡೆ ಆಗುತ್ತಿದೆ. ಆ ಸಿನಿಮಾದ ಬಗ್ಗೆ ಒಳ್ಳೆಯ ಟಾಕ್ ಇದ್ದು, ಈ ಸಿನಿಮಾ, ‘ಗೇಮ್ ಚೇಂಜರ್’ ಸಿನಿಮಾದ ಅರ್ಧಕ್ಕಿಂತಲೂ ಹೆಚ್ಚಿನ ಕಲೆಕ್ಷನ್ ಅನ್ನು ನುಂಗಿ ಹಾಕಲಾಗಿದೆ. ಆದರೆ ವೀಕೆಂಡ್ ಮತ್ತು ಆ ನಂತರ ಸಂಕ್ರಾಂತಿ ರಜೆ ಸಾಲು ಸಾಲಾಗಿ ಇರುವ ಕಾರಣ ಸಿನಿಮಾದ ಕಲೆಕ್ಷನ್ ಕುಸಿಯದೆ ಸ್ಥಿರವಾಗಿ ನಿಲ್ಲುವ ನಿರೀಕ್ಷೆ ವ್ಯಕ್ತಪಡಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ