AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರಿಕೆಯಿಂದ ಇದ್ದಿದ್ದೆಲ್ಲವೂ ವ್ಯರ್ಥವಾಯಿತು; ರಾಮ್ ಚರಣ್ ಚಿತ್ರದ ಸೆಟ್​ನ ಫೋಟೋ ಲೀಕ್

‘ಗೇಮ್ ಚೇಂಜರ್’ ಚಿತ್ರದ ಕೆಲವು ಪೋಸ್ಟರ್ ರಿಲೀಸ್ ಆಗಿದ್ದು ಹೊರತಪಡಿಸಿದರೆ ಮತ್ತಾವುದೇ ಅಪ್​ಡೇಟ್ ಸಿನಿಮಾ ಬಗ್ಗೆ ಸಿಕ್ಕಿಲ್ಲ. ವಿಶೇಷ ದಿನದಂದು ಈ ಬಗ್ಗೆ ಮಾಹಿತಿ ನೀಡಲು ಸಿನಿಮಾ ತಂಡ ಪ್ಲ್ಯಾನ್ ಮಾಡಿಕೊಂಡಿದೆ. ಆದರೆ, ಅದಕ್ಕೂ ಮೊದಲೇ ಸಿನಿಮಾ ಶೂಟಿಂಗ್ ಸ್ಥಳದ ಫೋಟೋ ಲೀಕ್ ಆಗಿದೆ.

ಎಚ್ಚರಿಕೆಯಿಂದ ಇದ್ದಿದ್ದೆಲ್ಲವೂ ವ್ಯರ್ಥವಾಯಿತು; ರಾಮ್ ಚರಣ್ ಚಿತ್ರದ ಸೆಟ್​ನ ಫೋಟೋ ಲೀಕ್
ಲೀಕ್ ಆದ ಸೆಟ್ ಫೋಟೋ
Follow us
ರಾಜೇಶ್ ದುಗ್ಗುಮನೆ
|

Updated on: Aug 23, 2023 | 12:52 PM

ರಾಮ್ ಚರಣ್ ನಟನೆಯ ಗೇಮ್ ಚೇಂಜರ್’ (Game Changer Movie) ಸಿನಿಮಾದ ಶೂಟಿಂಗ್ ಭರ್ಜರಿಯಾಗಿ ಸಾಗುತ್ತಿದೆ. ಶಂಕರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಾಮ್ ಚರಣ್​ಗೆ ಜೊತೆಯಾಗಿ ಕಿಯಾರಾ ಅಡ್ವಾಣಿ (Kiara Advani) ನಟಿಸುತ್ತಿದ್ದಾರೆ. ಈ ಸಿನಿಮಾಗೆ ಈ ಸೋರಿಕೆ ಕಾಟ ಶುರುವಾಗಿದೆ. ಸಾಕಷ್ಟು ಎಚ್ಚರಿಕೆ ವಹಿಸಿದ ಹೊರತಾಗಿಯೂ ಸಿನಿಮಾ ಸೆಟ್​ನ ಫೋಟೋ ಲೀಕ್ ಆಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚುವ ಕಾರ್ಯ ಆಗುತ್ತಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

‘ಗೇಮ್ ಚೇಂಜರ್’ ಚಿತ್ರದ ಕೆಲವು ಪೋಸ್ಟರ್ ರಿಲೀಸ್ ಆಗಿದ್ದು ಹೊರತಪಡಿಸಿದರೆ ಮತ್ತಾವುದೇ ಅಪ್​ಡೇಟ್ ಸಿನಿಮಾ ಬಗ್ಗೆ ಸಿಕ್ಕಿಲ್ಲ. ವಿಶೇಷ ದಿನದಂದು ಈ ಬಗ್ಗೆ ಮಾಹಿತಿ ನೀಡಲು ಸಿನಿಮಾ ತಂಡ ಪ್ಲ್ಯಾನ್ ಮಾಡಿಕೊಂಡಿದೆ. ಆದರೆ, ಅದಕ್ಕೂ ಮೊದಲೇ ಸಿನಿಮಾ ಶೂಟಿಂಗ್ ಸ್ಥಳದ ಫೋಟೋ ಲೀಕ್ ಆಗಿದೆ.

ಸಮುದ್ರ ತೀರದಲ್ಲಿ ರಾಮ್ ಚರಣ್ ಅವರು ಶೂಟ್ ಮಾಡುತ್ತಿದ್ದಾರೆ. ಕಿಯಾರಾ ಅಡ್ವಾಣಿ ಕೂಡ ಇದರಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಚಿತ್ರತಂಡದವರದ್ದೇ ಕೆಲಸ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಮೊದಲು ಸಿನಿಮಾ ಸೆಟ್​​ನಲ್ಲಿ ಮೊಬೈಲ್ ತರದಂತೆ ತಂಡದವರು ಪ್ರಕಟಣೆ ಹೊರಡಿಸಿದ್ದರು.

ಇದನ್ನೂ ಓದಿ: ‘ಮಗು ರಾಮ್ ಚರಣ್ ರೀತಿಯೇ ಇದೆ’; ಕ್ಲಿನ್​ಕಾರ ಫೋಟೋ ನೋಡಿ ಘೋಷಿಸಿದ ಫ್ಯಾನ್ಸ್

ರಾಮ್ ಚರಣ್ ಅವರು ‘ಆರ್​ಆರ್​ಆರ್​’ ಸಿನಿಮಾ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಆ ಸಿನಿಮಾ ಹಿಟ್ ಆದ ಬಳಿಕ ರಿಲೀಸ್ ಆಗುತ್ತಿರುವ ಮುಂದಿನ ಸಿನಿಮಾ ಇದು. ಈ ಕಾರಣದಿಂದಲೂ ಚಿತ್ರದ ಬಗ್ಗೆ ನಿರೀಕ್ಷೆ ಇದೆ. ಇನ್ನು, ಕಿಯಾರಾ ಅಡ್ವಾಣಿ ಅವರು ಬ್ಯಾಕ್ ಟು ಬ್ಯಾಕ್ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರದ ಮೂಲಕ ಅವರು ಮತ್ತೊಂದು ಗೆಲುವು ಕಾಣುವ ನಿರೀಕ್ಷೆಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?