AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Game Changer: ಮೂರು ವರ್ಷಗಳ ಬಳಿಕ ಪೂರ್ಣಗೊಂಡಿತು ‘ಗೇಮ್ ಚೇಂಜರ್’ ಶೂಟಿಂಗ್

ತೆಲುಗು ನಟ ರಾಮ್ ಚರಣ್ ಅವರು ಯಾವುದೇ ಸಿನಿಮಾ ಒಪ್ಪಿಕೊಂಡರೂ ಅದರ ಕೆಲಸಗಳನ್ನು ಪೂರ್ಣಗೊಳಿಸಲು ತರಾತುರಿ ತೋರುವುದಿಲ್ಲ. ಶೂಟಿಂಗ್ ಮಧ್ಯೆ ಸಾಕಷ್ಟು ಬ್ರೇಕ್ ತೆಗೆದುಕೊಂಡು ನಿಧಾನವಾಗಿ ಸಿನಿಮಾ ಮಾಡುತ್ತಾರೆ. ಈ ಕಾರಣದಿಂದಲೇ ‘ಗೇಮ್ ಚೇಂಜರ್’ ಶೂಟಿಂಗ್ ಪೂರ್ಣಗೊಳ್ಳಲು ಬರೋಬ್ಬರಿ 3 ವರ್ಷಗಳು ಹಿಡಿದಿವೆ.

Game Changer: ಮೂರು ವರ್ಷಗಳ ಬಳಿಕ ಪೂರ್ಣಗೊಂಡಿತು ‘ಗೇಮ್ ಚೇಂಜರ್’ ಶೂಟಿಂಗ್
ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Jul 08, 2024 | 7:25 AM

Share

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಸೆಟ್ಟೇರಿ ಮೂರು ವರ್ಷಗಳ ಮೇಲಾಗಿದೆ. ಎಸ್​. ಶಂಕರ್ ನಿರ್ದೇಶನದ ಈ ಚಿತ್ರಕ್ಕೆ ಶೂಟಿಂಗ್ ಮಾಡುತ್ತಲೇ ಬರಲಾಗುತ್ತಿದೆ. ಈ ಸಿನಿಮಾಗೆ ಅದೆಷ್ಟು ಹಂತದಲ್ಲಿ ಶೂಟಿಂಗ್ ಮಾಡಿದರು ಎಂಬುದಕ್ಕೆ ಲೆಕ್ಕವೇ ಇಲ್ಲ. ಅಂತೂ-ಇಂತೂ ಈಗ ಸಿನಿಮಾಗೆ ಶೂಟಿಂಗ್ ಪೂರ್ಣಗೊಂಡಿದೆ ಎನ್ನುವ ಮಾಹಿತಿ ಹೊರ ಬಿದ್ದಿದೆ. ಈ ವಿಚಾರ ಕೇಳಿ ಫ್ಯಾನ್ಸ್ ನಿಟ್ಟುಸಿರುವ ಬಿಟ್ಟಿದ್ದಾರೆ. ಈ ವರ್ಷವಾದರೂ ಸಿನಿಮಾ ರಿಲೀಸ್ ಆಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

‘ಆರ್​ಆರ್​ಆರ್’ ಸಿನಿಮಾ ರಿಲೀಸ್​ಗೂ ಮೊದಲೇ ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಚಿತ್ರದಲ್ಲಿ ತೊಡಗಿಕೊಂಡರು. ‘ಆರ್​ಆರ್​ಆರ್​’ ರಿಲೀಸ್ ಬಳಿಕ ಅವರ ಗಮನ ಸಂಪೂರ್ಣವಾಗಿ ‘ಗೇಮ್ ಚೇಂಜರ್’ ಮೇಲೆ ಇತ್ತು. ಈಗ ‘ಆರ್​ಆರ್​ಆರ್’ ಸಿನಿಮಾ ರಿಲೀಸ್ ಆಗಿಯೇ ಎರಡು ವರ್ಷಗಳ ಮೇಲಾಗಿದೆ. ಆದಾಗ್ಯೂ ‘ಗೇಮ್ ಚೇಂಜರ್’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿರಲಿಲ್ಲ. ಅಂತೂ-ಇಂತೂ ಶೂಟಿಂಗ್ ಈಗ ಪೂರ್ಣಗೊಂಡಂತೆ ಆಗಿದೆ.

‘ಗೇಮ್ ಚೇಂಜರ್’ ಸಿನಿಮಾದ ಕೆಲವು ಪೋಸ್ಟರ್​ಗಳು ರಿಲೀಸ್ ಆಗಿ ಗಮನ ಸೆಳೆದವು. ಚಿತ್ರದ ಸಾಂಗ್ ಕೂಡ ರಿಲೀಸ್ ಆಗಿದೆ. ಈ ಸಿನಿಮಾ ಚುನಾವಣೆಗೆ ಸಂಬಂಧಿಸಿದ್ದು ಎನ್ನುವ ಮಾತಿದೆ. ಈ ಚಿತ್ರದಲ್ಲಿ ರಾಮ್ ಚರಣ್ ಅವರು ಚುನಾವಣಾ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಶೀಘ್ರವೇ ಅವರು ಡಬ್ಬಿಂಗ್ ಕೆಸಲ ಪೂರ್ಣಗೊಳಿಸಲಿದ್ದಾರಂತೆ.

ಇದನ್ನೂ ಓದಿ: ಅಕ್ಟೋಬರ್​ನಲ್ಲಿ ರಿಲೀಸ್ ಆಗಲಿದೆ ‘ಗೇಮ್ ಚೇಂಜರ್’? ನಡೆಯಲಿದೆ ಬಿಗ್ ಕ್ಲ್ಯಾಶ್ 

‘ಗೇಮ್ ಚೇಂಜರ್’ ಶೂಟಿಂಗ್ ಬಳಿಕ ರಾಮ್ ಚರಣ್ ಅವರು ಸಣ್ಣ ಬ್ರೇಕ್ ಪಡೆಯಬಹುದು ಎನ್ನಲಾಗುತ್ತಿದೆ. ಆ ಬಳಿಕ ಅವರು ‘ಉಪ್ಪೇನಾ’ ಖ್ಯಾತಿಯ ಬುಚ್ಚಿ ಬಾಬು ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರಕ್ಕೆ ನಿರ್ದೇಶನ ಮಾಡಿದ ಶಂಕರ್ ಅವರು ‘ಇಂಡಿಯನ್ 2’ ಚಿತ್ರವನ್ನೂ ನಿರ್ದೇಶನ ಮಾಡಿದ್ದಾರೆ. ಜುಲೈ 12ರಂದು ರಿಲೀಸ್ ಆಗಲಿರೋ ಈ ಸಿನಿಮಾದಿಂದಲೂ ‘ಗೇಮ್ ಚೇಂಜರ್’ ಕೆಲಸ ವಿಳಂಬ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!