AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Game Changer: ಮೂರು ವರ್ಷಗಳ ಬಳಿಕ ಪೂರ್ಣಗೊಂಡಿತು ‘ಗೇಮ್ ಚೇಂಜರ್’ ಶೂಟಿಂಗ್

ತೆಲುಗು ನಟ ರಾಮ್ ಚರಣ್ ಅವರು ಯಾವುದೇ ಸಿನಿಮಾ ಒಪ್ಪಿಕೊಂಡರೂ ಅದರ ಕೆಲಸಗಳನ್ನು ಪೂರ್ಣಗೊಳಿಸಲು ತರಾತುರಿ ತೋರುವುದಿಲ್ಲ. ಶೂಟಿಂಗ್ ಮಧ್ಯೆ ಸಾಕಷ್ಟು ಬ್ರೇಕ್ ತೆಗೆದುಕೊಂಡು ನಿಧಾನವಾಗಿ ಸಿನಿಮಾ ಮಾಡುತ್ತಾರೆ. ಈ ಕಾರಣದಿಂದಲೇ ‘ಗೇಮ್ ಚೇಂಜರ್’ ಶೂಟಿಂಗ್ ಪೂರ್ಣಗೊಳ್ಳಲು ಬರೋಬ್ಬರಿ 3 ವರ್ಷಗಳು ಹಿಡಿದಿವೆ.

Game Changer: ಮೂರು ವರ್ಷಗಳ ಬಳಿಕ ಪೂರ್ಣಗೊಂಡಿತು ‘ಗೇಮ್ ಚೇಂಜರ್’ ಶೂಟಿಂಗ್
ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Jul 08, 2024 | 7:25 AM

Share

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಸೆಟ್ಟೇರಿ ಮೂರು ವರ್ಷಗಳ ಮೇಲಾಗಿದೆ. ಎಸ್​. ಶಂಕರ್ ನಿರ್ದೇಶನದ ಈ ಚಿತ್ರಕ್ಕೆ ಶೂಟಿಂಗ್ ಮಾಡುತ್ತಲೇ ಬರಲಾಗುತ್ತಿದೆ. ಈ ಸಿನಿಮಾಗೆ ಅದೆಷ್ಟು ಹಂತದಲ್ಲಿ ಶೂಟಿಂಗ್ ಮಾಡಿದರು ಎಂಬುದಕ್ಕೆ ಲೆಕ್ಕವೇ ಇಲ್ಲ. ಅಂತೂ-ಇಂತೂ ಈಗ ಸಿನಿಮಾಗೆ ಶೂಟಿಂಗ್ ಪೂರ್ಣಗೊಂಡಿದೆ ಎನ್ನುವ ಮಾಹಿತಿ ಹೊರ ಬಿದ್ದಿದೆ. ಈ ವಿಚಾರ ಕೇಳಿ ಫ್ಯಾನ್ಸ್ ನಿಟ್ಟುಸಿರುವ ಬಿಟ್ಟಿದ್ದಾರೆ. ಈ ವರ್ಷವಾದರೂ ಸಿನಿಮಾ ರಿಲೀಸ್ ಆಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

‘ಆರ್​ಆರ್​ಆರ್’ ಸಿನಿಮಾ ರಿಲೀಸ್​ಗೂ ಮೊದಲೇ ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಚಿತ್ರದಲ್ಲಿ ತೊಡಗಿಕೊಂಡರು. ‘ಆರ್​ಆರ್​ಆರ್​’ ರಿಲೀಸ್ ಬಳಿಕ ಅವರ ಗಮನ ಸಂಪೂರ್ಣವಾಗಿ ‘ಗೇಮ್ ಚೇಂಜರ್’ ಮೇಲೆ ಇತ್ತು. ಈಗ ‘ಆರ್​ಆರ್​ಆರ್’ ಸಿನಿಮಾ ರಿಲೀಸ್ ಆಗಿಯೇ ಎರಡು ವರ್ಷಗಳ ಮೇಲಾಗಿದೆ. ಆದಾಗ್ಯೂ ‘ಗೇಮ್ ಚೇಂಜರ್’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿರಲಿಲ್ಲ. ಅಂತೂ-ಇಂತೂ ಶೂಟಿಂಗ್ ಈಗ ಪೂರ್ಣಗೊಂಡಂತೆ ಆಗಿದೆ.

‘ಗೇಮ್ ಚೇಂಜರ್’ ಸಿನಿಮಾದ ಕೆಲವು ಪೋಸ್ಟರ್​ಗಳು ರಿಲೀಸ್ ಆಗಿ ಗಮನ ಸೆಳೆದವು. ಚಿತ್ರದ ಸಾಂಗ್ ಕೂಡ ರಿಲೀಸ್ ಆಗಿದೆ. ಈ ಸಿನಿಮಾ ಚುನಾವಣೆಗೆ ಸಂಬಂಧಿಸಿದ್ದು ಎನ್ನುವ ಮಾತಿದೆ. ಈ ಚಿತ್ರದಲ್ಲಿ ರಾಮ್ ಚರಣ್ ಅವರು ಚುನಾವಣಾ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಶೀಘ್ರವೇ ಅವರು ಡಬ್ಬಿಂಗ್ ಕೆಸಲ ಪೂರ್ಣಗೊಳಿಸಲಿದ್ದಾರಂತೆ.

ಇದನ್ನೂ ಓದಿ: ಅಕ್ಟೋಬರ್​ನಲ್ಲಿ ರಿಲೀಸ್ ಆಗಲಿದೆ ‘ಗೇಮ್ ಚೇಂಜರ್’? ನಡೆಯಲಿದೆ ಬಿಗ್ ಕ್ಲ್ಯಾಶ್ 

‘ಗೇಮ್ ಚೇಂಜರ್’ ಶೂಟಿಂಗ್ ಬಳಿಕ ರಾಮ್ ಚರಣ್ ಅವರು ಸಣ್ಣ ಬ್ರೇಕ್ ಪಡೆಯಬಹುದು ಎನ್ನಲಾಗುತ್ತಿದೆ. ಆ ಬಳಿಕ ಅವರು ‘ಉಪ್ಪೇನಾ’ ಖ್ಯಾತಿಯ ಬುಚ್ಚಿ ಬಾಬು ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರಕ್ಕೆ ನಿರ್ದೇಶನ ಮಾಡಿದ ಶಂಕರ್ ಅವರು ‘ಇಂಡಿಯನ್ 2’ ಚಿತ್ರವನ್ನೂ ನಿರ್ದೇಶನ ಮಾಡಿದ್ದಾರೆ. ಜುಲೈ 12ರಂದು ರಿಲೀಸ್ ಆಗಲಿರೋ ಈ ಸಿನಿಮಾದಿಂದಲೂ ‘ಗೇಮ್ ಚೇಂಜರ್’ ಕೆಲಸ ವಿಳಂಬ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ