AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವಾರಕ್ಕೆ ಪಾತಾಳಕ್ಕೆ ಕುಸಿದ ಗೇಮ್ ಚೇಂಜರ್ ಕಲೆಕ್ಷನ್

Game Changer: ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಭಾರಿ ನಿರೀಕ್ಷೆಗಳನ್ನು ಹುಟ್ಟಿಸಿ ಬಿಡುಗಡೆ ಆಗಿತ್ತು. ಸಿನಿಮಾ ಬಿಡುಗಡೆ ಆಗಿ ಒಂದು ವಾರ ಪೂರ್ಣಗೊಂಡಿದ್ದು, ಈ ಸಿನಿಮಾ ಹಿಟ್ ಆಯ್ತಾ? ಫ್ಲಾಪ್ ಎನಿಸಿಕೊಂಡಿತಾ. ಒಂದು ವಾರಕ್ಕೆ ಈ ಸಿನಿಮಾ ಗಳಿಸಿದ ಹಣವೆಷ್ಟು? ಇನ್ನಿತರೆ ಮಾಹಿತಿಗಳು ಇಲ್ಲಿವೆ...

ಒಂದೇ ವಾರಕ್ಕೆ ಪಾತಾಳಕ್ಕೆ ಕುಸಿದ ಗೇಮ್ ಚೇಂಜರ್ ಕಲೆಕ್ಷನ್
Game Changer
ಮಂಜುನಾಥ ಸಿ.
|

Updated on: Jan 17, 2025 | 11:32 AM

Share

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿತ್ತು. ಜನವರಿ 10 ರಂದು ಸಿನಿಮಾ ಬಿಡುಗಡೆ ಆಗಿದ್ದು, ಇಂದಿಗೆ ಸರಿಯಾಗಿ ಒಂದು ವಾರವಾಗಿದೆ. ಭಾರಿ ಬಜೆಟ್​ನ ಈ ಸಿನಿಮಾ, ಕಿಯಾರಾ ಅಡ್ವಾಣಿ, ಎಸ್​ಜೆ ಸೂರ್ಯ, ಸುನಿಲ್ ಅಂಥಹಾ ದೊಡ್ಡ ನಟರ ದಂಡು ಒಳಗೊಂಡಿತ್ತು. ‘ರೋಬೋ’ ಸೇರಿದಂತೆ ಹಲವು ಬ್ಲಾಕ್ ಬಸ್ಟರ್ ಸಿನಿಮಾ ನಿಡಿರುವ ಶಂಕರ್ ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಭಾರಿ ನಿರೀಕ್ಷೆಗಳಿಂದ ಬಿಡುಗಡೆ ಆದ ಈ ಸಿನಿಮಾ ಮೊದಲ ದಿನದ ಹೊರತಾಗಿ ಆ ನಂತರ ಒಳ್ಳೆಯ ಕಲೆಕ್ಷನ್ ಮಾಡಿಲ್ಲ.

ಮೊದಲ ದಿನ ಈ ಸಿನಿಮಾ 50 ಕೋಟಿಗೂ ಹೆಚ್ಚು ಮೊತ್ತ ಕಲೆಕ್ಷನ್ ಮಾಡಿತ್ತು. ಕೆಲವರಂತೂ ‘ಗೇಮ್ ಚೇಂಜರ್’ ಸಿನಿಮಾ ಮೊದಲ ದಿನ 86 ಕೋಟಿ ಗಳಿಸಿದೆ ಎಂಬ ಸುದ್ದಿಯನ್ನು ಸಹ ಹಂಚಿಕೊಳ್ಳಲಾಗಿತ್ತು. ಆದರೆ ಮೊದಲ ದಿನ ಹಬ್ಬಿದ ಮಿಶ್ರ ಪ್ರತಿಕ್ರಿಯೆಗಳಿಂದಾಗಿ ಸಿನಿಮಾ ಕಲೆಕ್ಷನ್ ಕುಸಿಯುತ್ತಾ ಸಾಗಿತ್ತು. ಒಂದು ವಾರದ ಬಳಿಕ ಸಿನಿಮಾದ ಕಲೆಕ್ಷನ್ ಧಾರುಣವಾಗಿ ಕುಸಿದಿದೆ.

ಸಿನಿಮಾ ಬಿಡುಗಡೆ ಆದ ಏಳನೇ ದಿನ ಸಿನಿಮಾ ಗಳಿಕೆ ಎರಡು ಕೋಟಿಯನ್ನು ದಾಟಿಲ್ಲ. ಭಾರಿ ಬಜೆಟ್ ಸಿನಿಮಾಕ್ಕೆ ಇದು ಕಡಿಮೆ ಮೊತ್ತ ಎನ್ನಲಾಗುತ್ತದೆ. ಏಳನೇ ದಿನಕ್ಕೆ ಈ ಸಿನಿಮಾ ಹಿಂದಿ ಪ್ರದೇಶದಲ್ಲಿ 1.15 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆಯಂತೆ. ತೆಲುಗು ಪ್ರದೇಶದಲ್ಲಿ ಸಿನಿಮಾದ ಕಲೆಕ್ಷನ್ ಈಗಾಗಲೇ ಕುಂಠಿತವಾಗಿದ್ದು, ಏಳನೇ ದಿನಕ್ಕೆ ಒಟ್ಟು ಕಲೆಕ್ಷನ್ ಎರಡು ಕೋಟಿ ದಾಟಿಲ್ಲ. ಸಿನಿಮಾ ಇನ್ನೊಂದು ವಾರದಲ್ಲಿ ತಮ್ಮ ಬಾಕ್ಸ್ ಆಫೀಸ್ ಪಯಣವನ್ನು ಮುಗಿಸುವ ದಟ್ಟ ಸಾಧ್ಯತೆ ಇದೆ.

ಇದನ್ನೂ ಓದಿ:ಗೇಮ್​ ಚೇಂಜರ್​ ಬಿಡುಗಡೆ: ಹೇಗಿದೆ ರಾಮ್ ಚರಣ್ ಸಿನಿಮಾದ ಫಸ್ಟ್​ ಹಾಫ್​?

ಒಂದು ವಾರದಲ್ಲಿ ಒಟ್ಟಾಗಿ ‘ಗೇಮ್ ಚೇಂಜರ್’ ಸಿನಿಮಾ ಗಳಿಸಿರುವುದು 100 ಕೋಟಿ ರೂಪಾಯಿಗಳು. ಕೇವಲ ಹಿಂದಿ ಪ್ರದೇಶದಲ್ಲಿ ಒಂದು ವಾರದಲ್ಲಿ ಈ ಸಿನಿಮಾ 27 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಆದರೆ ತೆಲುಗು ಹಾಗೂ ತಮಿಳು ರಾಜ್ಯಗಳಲ್ಲಿ ನಿರೀಕ್ಷಿಸಿದ ಮಟ್ಟಿಗೆ ಕಲೆಕ್ಷನ್ ಬಂದಿಲ್ಲ. ಸಿನಿಮಾದ ಒಟ್ಟು ಬಜೆಟ್​ 300 ರಿಂದ 400 ಕೋಟಿ ಎನ್ನಲಾಗುತ್ತಿದ್ದು, ಬಾಕ್ಸ್ ಆಫೀಸ್​ನಿಂದ 100 ಕೋಟಿ ಅಷ್ಟೆ ರಿಕವರಿ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ