AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವಾರಕ್ಕೆ ಪಾತಾಳಕ್ಕೆ ಕುಸಿದ ಗೇಮ್ ಚೇಂಜರ್ ಕಲೆಕ್ಷನ್

Game Changer: ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಭಾರಿ ನಿರೀಕ್ಷೆಗಳನ್ನು ಹುಟ್ಟಿಸಿ ಬಿಡುಗಡೆ ಆಗಿತ್ತು. ಸಿನಿಮಾ ಬಿಡುಗಡೆ ಆಗಿ ಒಂದು ವಾರ ಪೂರ್ಣಗೊಂಡಿದ್ದು, ಈ ಸಿನಿಮಾ ಹಿಟ್ ಆಯ್ತಾ? ಫ್ಲಾಪ್ ಎನಿಸಿಕೊಂಡಿತಾ. ಒಂದು ವಾರಕ್ಕೆ ಈ ಸಿನಿಮಾ ಗಳಿಸಿದ ಹಣವೆಷ್ಟು? ಇನ್ನಿತರೆ ಮಾಹಿತಿಗಳು ಇಲ್ಲಿವೆ...

ಒಂದೇ ವಾರಕ್ಕೆ ಪಾತಾಳಕ್ಕೆ ಕುಸಿದ ಗೇಮ್ ಚೇಂಜರ್ ಕಲೆಕ್ಷನ್
Game Changer
ಮಂಜುನಾಥ ಸಿ.
|

Updated on: Jan 17, 2025 | 11:32 AM

Share

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿತ್ತು. ಜನವರಿ 10 ರಂದು ಸಿನಿಮಾ ಬಿಡುಗಡೆ ಆಗಿದ್ದು, ಇಂದಿಗೆ ಸರಿಯಾಗಿ ಒಂದು ವಾರವಾಗಿದೆ. ಭಾರಿ ಬಜೆಟ್​ನ ಈ ಸಿನಿಮಾ, ಕಿಯಾರಾ ಅಡ್ವಾಣಿ, ಎಸ್​ಜೆ ಸೂರ್ಯ, ಸುನಿಲ್ ಅಂಥಹಾ ದೊಡ್ಡ ನಟರ ದಂಡು ಒಳಗೊಂಡಿತ್ತು. ‘ರೋಬೋ’ ಸೇರಿದಂತೆ ಹಲವು ಬ್ಲಾಕ್ ಬಸ್ಟರ್ ಸಿನಿಮಾ ನಿಡಿರುವ ಶಂಕರ್ ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಭಾರಿ ನಿರೀಕ್ಷೆಗಳಿಂದ ಬಿಡುಗಡೆ ಆದ ಈ ಸಿನಿಮಾ ಮೊದಲ ದಿನದ ಹೊರತಾಗಿ ಆ ನಂತರ ಒಳ್ಳೆಯ ಕಲೆಕ್ಷನ್ ಮಾಡಿಲ್ಲ.

ಮೊದಲ ದಿನ ಈ ಸಿನಿಮಾ 50 ಕೋಟಿಗೂ ಹೆಚ್ಚು ಮೊತ್ತ ಕಲೆಕ್ಷನ್ ಮಾಡಿತ್ತು. ಕೆಲವರಂತೂ ‘ಗೇಮ್ ಚೇಂಜರ್’ ಸಿನಿಮಾ ಮೊದಲ ದಿನ 86 ಕೋಟಿ ಗಳಿಸಿದೆ ಎಂಬ ಸುದ್ದಿಯನ್ನು ಸಹ ಹಂಚಿಕೊಳ್ಳಲಾಗಿತ್ತು. ಆದರೆ ಮೊದಲ ದಿನ ಹಬ್ಬಿದ ಮಿಶ್ರ ಪ್ರತಿಕ್ರಿಯೆಗಳಿಂದಾಗಿ ಸಿನಿಮಾ ಕಲೆಕ್ಷನ್ ಕುಸಿಯುತ್ತಾ ಸಾಗಿತ್ತು. ಒಂದು ವಾರದ ಬಳಿಕ ಸಿನಿಮಾದ ಕಲೆಕ್ಷನ್ ಧಾರುಣವಾಗಿ ಕುಸಿದಿದೆ.

ಸಿನಿಮಾ ಬಿಡುಗಡೆ ಆದ ಏಳನೇ ದಿನ ಸಿನಿಮಾ ಗಳಿಕೆ ಎರಡು ಕೋಟಿಯನ್ನು ದಾಟಿಲ್ಲ. ಭಾರಿ ಬಜೆಟ್ ಸಿನಿಮಾಕ್ಕೆ ಇದು ಕಡಿಮೆ ಮೊತ್ತ ಎನ್ನಲಾಗುತ್ತದೆ. ಏಳನೇ ದಿನಕ್ಕೆ ಈ ಸಿನಿಮಾ ಹಿಂದಿ ಪ್ರದೇಶದಲ್ಲಿ 1.15 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆಯಂತೆ. ತೆಲುಗು ಪ್ರದೇಶದಲ್ಲಿ ಸಿನಿಮಾದ ಕಲೆಕ್ಷನ್ ಈಗಾಗಲೇ ಕುಂಠಿತವಾಗಿದ್ದು, ಏಳನೇ ದಿನಕ್ಕೆ ಒಟ್ಟು ಕಲೆಕ್ಷನ್ ಎರಡು ಕೋಟಿ ದಾಟಿಲ್ಲ. ಸಿನಿಮಾ ಇನ್ನೊಂದು ವಾರದಲ್ಲಿ ತಮ್ಮ ಬಾಕ್ಸ್ ಆಫೀಸ್ ಪಯಣವನ್ನು ಮುಗಿಸುವ ದಟ್ಟ ಸಾಧ್ಯತೆ ಇದೆ.

ಇದನ್ನೂ ಓದಿ:ಗೇಮ್​ ಚೇಂಜರ್​ ಬಿಡುಗಡೆ: ಹೇಗಿದೆ ರಾಮ್ ಚರಣ್ ಸಿನಿಮಾದ ಫಸ್ಟ್​ ಹಾಫ್​?

ಒಂದು ವಾರದಲ್ಲಿ ಒಟ್ಟಾಗಿ ‘ಗೇಮ್ ಚೇಂಜರ್’ ಸಿನಿಮಾ ಗಳಿಸಿರುವುದು 100 ಕೋಟಿ ರೂಪಾಯಿಗಳು. ಕೇವಲ ಹಿಂದಿ ಪ್ರದೇಶದಲ್ಲಿ ಒಂದು ವಾರದಲ್ಲಿ ಈ ಸಿನಿಮಾ 27 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಆದರೆ ತೆಲುಗು ಹಾಗೂ ತಮಿಳು ರಾಜ್ಯಗಳಲ್ಲಿ ನಿರೀಕ್ಷಿಸಿದ ಮಟ್ಟಿಗೆ ಕಲೆಕ್ಷನ್ ಬಂದಿಲ್ಲ. ಸಿನಿಮಾದ ಒಟ್ಟು ಬಜೆಟ್​ 300 ರಿಂದ 400 ಕೋಟಿ ಎನ್ನಲಾಗುತ್ತಿದ್ದು, ಬಾಕ್ಸ್ ಆಫೀಸ್​ನಿಂದ 100 ಕೋಟಿ ಅಷ್ಟೆ ರಿಕವರಿ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ