AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್’, ‘ಸಲಾರ್’ ರೀತಿ ಎರಡು ಪಾರ್ಟ್​ನಲ್ಲಿ ಬರಲಿದೆ ‘ಗೇಮ್ ಚೇಂಜರ್’ ಸಿನಿಮಾ?

‘ಬಾಹುಬಲಿ 2’ ರಿಲೀಸ್ ಆದ ಬಳಿಕ ಒಂದು ಕಥೆಯನ್ನು ಎರಡು ಪಾರ್ಟ್​ನಲ್ಲಿ ಹೇಳುವ ಟ್ರೆಂಡ್ ಜೋರಾಗಿದೆ. ‘ಸಪ್ತ ಸಾಗರದಾಚೆ ಎಲ್ಲೋ’, ‘ಕೆಜಿಎಫ್’ ಸೇರಿ ಅನೇಕ ಸಿನಿಮಾಗಳು ಎರಡು ಭಾಗದಲ್ಲಿ ಬಂದಿವೆ. ಈಗ ‘ಗೇಮ್ ಚೇಂಜರ್’ ಸಿನಿಮಾ ಎರಡು ಪಾರ್ಟ್​​ನಲ್ಲಿ ಬರಲಿದೆ.

‘ಕೆಜಿಎಫ್’, ‘ಸಲಾರ್’ ರೀತಿ ಎರಡು ಪಾರ್ಟ್​ನಲ್ಲಿ ಬರಲಿದೆ ‘ಗೇಮ್ ಚೇಂಜರ್’ ಸಿನಿಮಾ?
ಕಿಯಾರಾ, ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Dec 13, 2023 | 3:07 PM

Share

ರಾಮ್ ಚರಣ್ (Ram Charan) ನಟನೆಯ, ಎಸ್​ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಶೂಟಿಂಗ್ ಸಾಕಷ್ಟು ವಿಳಂಬ ಆಗುತ್ತಲೇ ಇದೆ. ಈ ಕಾರಣದಿಂದ ಅಭಿಮಾನಿಗಳು ಸಾಕಷ್ಟು ಬೇಸರಗೊಂಡಿದ್ದಾರೆ. ಈಗ ಸಿನಿಮಾ ಬಗ್ಗೆ ಹೊಸ ಸುದ್ದಿ ಒಂದು ಹರಿದಾಡಿದೆ. ಈ ಚಿತ್ರ ಎರಡು ಭಾಗದಲ್ಲಿ ರಿಲೀಸ್ ಆಗಲಿದೆಯಂತೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

‘ಆರ್​ಆರ್​ಆರ್’ ಸೂಪರ್ ಹಿಟ್ ಆದ ಬಳಿಕ ರಾಮ್ ಚರಣ್ ಅವರು ಸಿನಿಮಾ ಆಯ್ಕೆಯಲ್ಲಿ ಆತುರ ತೋರಿಲ್ಲ. ಅವರು ಸಾಕಷ್ಟು ಆಸಕ್ತಿ ವಹಿಸಿ ‘ಗೇಮ್ ಚೇಂಜರ್’ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಇತ್ತೀಚೆಗೆ ಮೈಸೂರಿನಲ್ಲಿ ನಡೆದಿದೆ. ಚಿತ್ರದ ಕಥೆಗೂ ಮೈಸೂರಿಗೂ ಯಾವ ರೀತಿಯ ಕನೆಕ್ಷನ್ ಇದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಮಧ್ಯೆ ಸಿನಿಮಾ ಬಗ್ಗೆ ಹೊಸ ಸುದ್ದಿ ಹುಟ್ಟಿಕೊಂಡಿದೆ.

‘ಬಾಹುಬಲಿ 2’ ರಿಲೀಸ್ ಆದ ಬಳಿಕ ಒಂದು ಕಥೆಯನ್ನು ಎರಡು ಪಾರ್ಟ್​ನಲ್ಲಿ ಹೇಳುವ ಟ್ರೆಂಡ್ ಜೋರಾಗಿದೆ. ‘ಸಪ್ತ ಸಾಗರದಾಚೆ ಎಲ್ಲೋ’, ‘ಕೆಜಿಎಫ್’ ಸೇರಿ ಅನೇಕ ಸಿನಿಮಾಗಳು ಎರಡು ಭಾಗದಲ್ಲಿ ಬಂದಿವೆ. ‘ಪುಷ್ಪ’, ‘ಸಲಾರ್’ ಸಿನಿಮಾಗಳು ಕೂಡ ಎರಡು ಪಾರ್ಟ್​ನಲ್ಲಿ ರಿಲೀಸ್ ಆಗಲಿವೆ. ಈಗ ನಿರ್ಮಾಪಕ ದಿಲ್ ರಾಜು ಕೂಡ ಇದೇ ತಂತ್ರ ಉಪಯೋಗಿಸುತ್ತಿದ್ದಾರೆ. ‘ಗೇಮ್​ ಚೇಂಜರ್’ ಚಿತ್ರವನ್ನು ಎರಡು ಪಾರ್ಟ್​ನಲ್ಲಿ ತರಲು ಅವರು ಮುಂದಾಗಿದ್ದಾರೆ ಎಂದು ವರದಿ ಆಗಿದೆ.

ಶಂಕರ್ ಅವರು ‘ಗೇಮ್ ಚೇಂಜರ್’ ಜೊತೆ ‘ಇಂಡಿಯನ್ 2’ ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಇದ್ದಾರೆ. ಎರಡೂ ಸಿನಿಮಾ ಕೆಲಸಗಳನ್ನು ಅವರು ಸಂಭಾಳಿಸಿಕೊಂಡು ಹೋಗಬೇಕಾಗಿದೆ. ಈ ಕಾರಣಕ್ಕೆ ‘ಗೇಮ್ ಚೇಂಜರ್’ ಸಿನಿಮಾ ಕೆಲಸ ವಿಳಂಬ ಆಗುತ್ತಿದೆ.

ಇದನ್ನೂ ಓದಿ: ಚಾಮುಂಡೇಶ್ವರಿ ದರ್ಶನ ಪಡೆದ ರಾಮ್​ ಚರಣ್​; ಮೈಸೂರಿನಲ್ಲಿ ‘ಗೇಮ್​ ಚೇಂಜರ್​’ ಚಿತ್ರೀಕರಣ

‘ಗೇಮ್ ಚೇಂಜರ್’ ಸಿನಿಮಾದಲ್ಲಿ ರಾಮ್ ಚರಣ್​ಗೆ ಜೊತೆಯಾಗಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ನಟಿಸುತ್ತಿದ್ದಾರೆ. ಈ ಸಿನಿಮಾ ಎಲೆಕ್ಷನ್​ಗೆ ಸಂಬಂಧಿಸಿದ್ದು ಎನ್ನಲಾಗಿದೆ. ಈ ಚಿತ್ರದಲ್ಲಿ ರಾಮ್ ಚರಣ್ ಐಎಎಸ್ ಅಧಿಕಾರ ಪಾತ್ರ ಮಾಡುತ್ತಿದ್ದಾರಂತೆ. ಈ ಸಿನಿಮಾ 2025ರಲ್ಲಿ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ