Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್’, ‘ಸಲಾರ್’ ರೀತಿ ಎರಡು ಪಾರ್ಟ್​ನಲ್ಲಿ ಬರಲಿದೆ ‘ಗೇಮ್ ಚೇಂಜರ್’ ಸಿನಿಮಾ?

‘ಬಾಹುಬಲಿ 2’ ರಿಲೀಸ್ ಆದ ಬಳಿಕ ಒಂದು ಕಥೆಯನ್ನು ಎರಡು ಪಾರ್ಟ್​ನಲ್ಲಿ ಹೇಳುವ ಟ್ರೆಂಡ್ ಜೋರಾಗಿದೆ. ‘ಸಪ್ತ ಸಾಗರದಾಚೆ ಎಲ್ಲೋ’, ‘ಕೆಜಿಎಫ್’ ಸೇರಿ ಅನೇಕ ಸಿನಿಮಾಗಳು ಎರಡು ಭಾಗದಲ್ಲಿ ಬಂದಿವೆ. ಈಗ ‘ಗೇಮ್ ಚೇಂಜರ್’ ಸಿನಿಮಾ ಎರಡು ಪಾರ್ಟ್​​ನಲ್ಲಿ ಬರಲಿದೆ.

‘ಕೆಜಿಎಫ್’, ‘ಸಲಾರ್’ ರೀತಿ ಎರಡು ಪಾರ್ಟ್​ನಲ್ಲಿ ಬರಲಿದೆ ‘ಗೇಮ್ ಚೇಂಜರ್’ ಸಿನಿಮಾ?
ಕಿಯಾರಾ, ರಾಮ್ ಚರಣ್
Follow us
ರಾಜೇಶ್ ದುಗ್ಗುಮನೆ
|

Updated on: Dec 13, 2023 | 3:07 PM

ರಾಮ್ ಚರಣ್ (Ram Charan) ನಟನೆಯ, ಎಸ್​ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಶೂಟಿಂಗ್ ಸಾಕಷ್ಟು ವಿಳಂಬ ಆಗುತ್ತಲೇ ಇದೆ. ಈ ಕಾರಣದಿಂದ ಅಭಿಮಾನಿಗಳು ಸಾಕಷ್ಟು ಬೇಸರಗೊಂಡಿದ್ದಾರೆ. ಈಗ ಸಿನಿಮಾ ಬಗ್ಗೆ ಹೊಸ ಸುದ್ದಿ ಒಂದು ಹರಿದಾಡಿದೆ. ಈ ಚಿತ್ರ ಎರಡು ಭಾಗದಲ್ಲಿ ರಿಲೀಸ್ ಆಗಲಿದೆಯಂತೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

‘ಆರ್​ಆರ್​ಆರ್’ ಸೂಪರ್ ಹಿಟ್ ಆದ ಬಳಿಕ ರಾಮ್ ಚರಣ್ ಅವರು ಸಿನಿಮಾ ಆಯ್ಕೆಯಲ್ಲಿ ಆತುರ ತೋರಿಲ್ಲ. ಅವರು ಸಾಕಷ್ಟು ಆಸಕ್ತಿ ವಹಿಸಿ ‘ಗೇಮ್ ಚೇಂಜರ್’ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಇತ್ತೀಚೆಗೆ ಮೈಸೂರಿನಲ್ಲಿ ನಡೆದಿದೆ. ಚಿತ್ರದ ಕಥೆಗೂ ಮೈಸೂರಿಗೂ ಯಾವ ರೀತಿಯ ಕನೆಕ್ಷನ್ ಇದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಮಧ್ಯೆ ಸಿನಿಮಾ ಬಗ್ಗೆ ಹೊಸ ಸುದ್ದಿ ಹುಟ್ಟಿಕೊಂಡಿದೆ.

‘ಬಾಹುಬಲಿ 2’ ರಿಲೀಸ್ ಆದ ಬಳಿಕ ಒಂದು ಕಥೆಯನ್ನು ಎರಡು ಪಾರ್ಟ್​ನಲ್ಲಿ ಹೇಳುವ ಟ್ರೆಂಡ್ ಜೋರಾಗಿದೆ. ‘ಸಪ್ತ ಸಾಗರದಾಚೆ ಎಲ್ಲೋ’, ‘ಕೆಜಿಎಫ್’ ಸೇರಿ ಅನೇಕ ಸಿನಿಮಾಗಳು ಎರಡು ಭಾಗದಲ್ಲಿ ಬಂದಿವೆ. ‘ಪುಷ್ಪ’, ‘ಸಲಾರ್’ ಸಿನಿಮಾಗಳು ಕೂಡ ಎರಡು ಪಾರ್ಟ್​ನಲ್ಲಿ ರಿಲೀಸ್ ಆಗಲಿವೆ. ಈಗ ನಿರ್ಮಾಪಕ ದಿಲ್ ರಾಜು ಕೂಡ ಇದೇ ತಂತ್ರ ಉಪಯೋಗಿಸುತ್ತಿದ್ದಾರೆ. ‘ಗೇಮ್​ ಚೇಂಜರ್’ ಚಿತ್ರವನ್ನು ಎರಡು ಪಾರ್ಟ್​ನಲ್ಲಿ ತರಲು ಅವರು ಮುಂದಾಗಿದ್ದಾರೆ ಎಂದು ವರದಿ ಆಗಿದೆ.

ಶಂಕರ್ ಅವರು ‘ಗೇಮ್ ಚೇಂಜರ್’ ಜೊತೆ ‘ಇಂಡಿಯನ್ 2’ ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಇದ್ದಾರೆ. ಎರಡೂ ಸಿನಿಮಾ ಕೆಲಸಗಳನ್ನು ಅವರು ಸಂಭಾಳಿಸಿಕೊಂಡು ಹೋಗಬೇಕಾಗಿದೆ. ಈ ಕಾರಣಕ್ಕೆ ‘ಗೇಮ್ ಚೇಂಜರ್’ ಸಿನಿಮಾ ಕೆಲಸ ವಿಳಂಬ ಆಗುತ್ತಿದೆ.

ಇದನ್ನೂ ಓದಿ: ಚಾಮುಂಡೇಶ್ವರಿ ದರ್ಶನ ಪಡೆದ ರಾಮ್​ ಚರಣ್​; ಮೈಸೂರಿನಲ್ಲಿ ‘ಗೇಮ್​ ಚೇಂಜರ್​’ ಚಿತ್ರೀಕರಣ

‘ಗೇಮ್ ಚೇಂಜರ್’ ಸಿನಿಮಾದಲ್ಲಿ ರಾಮ್ ಚರಣ್​ಗೆ ಜೊತೆಯಾಗಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ನಟಿಸುತ್ತಿದ್ದಾರೆ. ಈ ಸಿನಿಮಾ ಎಲೆಕ್ಷನ್​ಗೆ ಸಂಬಂಧಿಸಿದ್ದು ಎನ್ನಲಾಗಿದೆ. ಈ ಚಿತ್ರದಲ್ಲಿ ರಾಮ್ ಚರಣ್ ಐಎಎಸ್ ಅಧಿಕಾರ ಪಾತ್ರ ಮಾಡುತ್ತಿದ್ದಾರಂತೆ. ಈ ಸಿನಿಮಾ 2025ರಲ್ಲಿ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ