AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Peddi Movie: ರಾಮ್ ಚರಣ್ ಹೊಸ ಚಿತ್ರದ ಟೈಟಲ್ ರಿವೀಲ್; ಮತ್ತೆ ಮಾಸ್ ಲುಕ್​ನಲ್ಲಿ ಗ್ಲೋಬಲ್ ಸ್ಟಾರ್

Ram Charan Birthday: ರಾಮ್‌ಚರಣ್ ಅಭಿನಯದ RC16 ಚಿತ್ರಕ್ಕೆ 'ಪೆದ್ದಿ' ಎಂದು ಶೀರ್ಷಿಕೆ ಇಡಲಾಗಿದೆ. ರಾಮ್‌ಚರಣ್ ಅವರ ಜನ್ಮದಿನದಂದು ಚಿತ್ರದ ಫಸ್ಟ್ ಲುಕ್ ಮತ್ತು ಶೀರ್ಷಿಕೆಯನ್ನು ಬಿಡುಗಡೆ ಮಾಡಲಾಗಿದೆ. ಬುಚಿ ಬಾಬು ನಿರ್ದೇಶನದ ಈ ಚಿತ್ರದಲ್ಲಿ ರಾಮ್‌ಚರಣ್ ಅವರ ಮಾಸ್ ಲುಕ್ ಅಭಿಮಾನಿಗಳನ್ನು ಆಕರ್ಷಿಸಿದೆ.

Peddi Movie: ರಾಮ್ ಚರಣ್ ಹೊಸ ಚಿತ್ರದ ಟೈಟಲ್ ರಿವೀಲ್; ಮತ್ತೆ ಮಾಸ್ ಲುಕ್​ನಲ್ಲಿ ಗ್ಲೋಬಲ್ ಸ್ಟಾರ್
ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on:Mar 27, 2025 | 10:43 AM

Share

ನಟ ರಾಮ್ ಚರಣ್ (Ram Charan) ಹಾಗೂ ನಿರ್ದೇಶಕ ಬುಚಿ ಬಾಬು ಸನಾ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರಕ್ಕೆ ಇಷ್ಟು ದಿನ ತಾತ್ಕಾಲಿಕವಾಗಿ ‘RC16’ ಎನ್ನುವ ಟೈಟಲ್ ಇಡಲಾಗಿತ್ತು. ಈ ಸಿನಿಮಾಗೆ ‘ಪೆದ್ದಿ’ ಟೈಟಲ್ ಫೈನಲ್ ಮಾಡಲಾಗಿದೆ ಎನ್ನುವ ಸುದ್ದಿ ಹಬ್ಬಿತ್ತು. ಈಗ ರಾಮ್ ಚರಣ್ ಬರ್ತ್​ಡೇ ಪ್ರಯುಕ್ತ ಇಂದು (ಮಾರ್ಚ್​ 27) ಸಿನಿಮಾದ ಟೈಟಲ್ ಹಾಗೂ ರಾಮ್ ಚರಣ್ ಲುಕ್ ರಿವೀಲ್ ಆಗಿದೆ. ಇದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ. ಚಿತ್ರಕ್ಕೆ ‘ಪೆದ್ದಿ’ ಎನ್ನುವ ಟೈಟಲ್ ಫೈನಲ್ ಆಗಿದೆ.

ಸಾಮಾನ್ಯವಾಗಿ ಸ್ಟಾರ್ ಹೀರೋಗಳ ಬರ್ತ್​ಡೇ ದಿನ ಸಿನಿಮಾ ತಂಡದ ಕಡೆಯಿಂದ ಪೋಸ್ಟರ್, ಟೀಸರ್ ಅಥವಾ ಟ್ರೇಲರ್ ರಿಲೀಸ್ ಆಗೋದು ವಾಡಿಕೆ. ಅಂತೆಯೇ ರಾಮ್ ಚರಣ್ ಬರ್ತ್​ಡೇ ಪ್ರಯುಕ್ತ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ರಿವೀಲ್ ಆಗಿದೆ. ಚಿತ್ರದಲ್ಲಿ ರಾಮ್ ಚರಣ್ ಲುಕ್ ಗನನ ಸೆಳೆದಿದೆ. ಚಿತ್ರ ಯಾವಾಗ ರಿಲೀಸ್ ಆಗುತ್ತದೆ ಎನ್ನುವ ಮಾಹಿತಿ ಇಲ್ಲ.

ಇದನ್ನೂ ಓದಿ
Image
ಗೆದ್ದಿದ್ದು ಕಡಿಮೆ ಸಿನಿಮಾ ಆದರೂ ರಾಮ್ ಚರಣ್ ಆಸ್ತಿ 1,300 ಕೋಟಿ ರೂಪಾಯಿ
Image
ಐಶ್ವರ್ಯಾ ಕಾರು ಅಪಘಾತಕ್ಕೆ ಒಳಗಾಗಿದ್ದು ಹೇಗೆ? ವಿಡಿಯೋ ವೈರಲ್
Image
ಸಲ್ಲು ನಟಿಸಬೇಕಿದ್ದ 3 ಬಿಗ್ ಬಜೆಟ್ ಚಿತ್ರಗಳಿಗೆ ಬ್ರೇಕ್; ಕುಸಿದ ಮಾರ್ಕೆಟ್?
Image
ಸಲ್ಮಾನ್ ಖಾನ್ ಸಿನಿಮಾದಲ್ಲಿ ಕಂತೆ ಕಂತೆ ನಕಲಿ ನೋಟು ಬಳಕೆ; ಇಲ್ಲಿದೆ ಸಾಕ್ಷಿ

ಇದನ್ನೂ ಓದಿ: ಗೆದ್ದಿದ್ದು ಕಡಿಮೆ ಸಿನಿಮಾ ಆದರೂ ರಾಮ್ ಚರಣ್ ಆಸ್ತಿ 1,300 ಕೋಟಿ ರೂ.; ಸಾಧ್ಯವಾಗಿದ್ದು ಹೇಗೆ?

ರಾಮ್ ಚರಣ್ ಅವರು ಉದ್ದ ಕೂದಲಿನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಬಾಯಲ್ಲಿ ಬೀಡಿ ಇದೆ. ಅವರ ಲುಕ್ ಸಖತ್ ಮಾಸ್ ಆಗಿದೆ. ಈ ಪೋಸ್ಟರ್ ರಾಮ್ ಚರಣ್ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ. ಈ ಚಿತ್ರದಲ್ಲಿ ಕನ್ನಡದ ಶಿವರಾಜ್​ಕುಮಾರ್, ಬಾಲಿವುಡ್​ನ ಜಾನ್ವಿ ಕಪೂರ್ ನಟಿಸುತ್ತಾ ಇದ್ದಾರೆ.

ಬುಚಿ ಬಾಬು ಸನಾ ಅವರು ಈ ಮೊದಲು ‘ಉಪ್ಪೇನಾ’ ಸಿನಿಮಾ ಮಾಡಿದರು. ಈ ಚಿತ್ರ 2021ರಲ್ಲಿ ರಿಲೀಸ್ ಆಯಿತು. ಕೊವಿಡ್ ಸಂದರ್ಭದಲ್ಲಿ ರಿಲೀಸ್ ಆದ ಈ ಚಿತ್ರ ಯಶಸ್ಸು ಕಂಡಿತು. ಕೃತಿ ಶೆಟ್ಟಿ, ವಿಜಯ್ ಸೇತುಪತಿ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದರು. ಇದಾದ ಬಳಿಕ ಅವರು ನಿರ್ದೇಶಿಸುತ್ತಿರುವ ಎರಡನೇ ಸಿನಿಮಾ ಇದು. ಅವರು ಈ ಚಿತ್ರಕ್ಕಾಗಿ ಸಖತ್ ರಾ ಸಬ್ಜೆಕ್ಟ್​ನ ಆಯ್ಕೆ ಮಾಡಿರೋದು ಸ್ಪಷ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:28 am, Thu, 27 March 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ