AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಆಸ್ಪತ್ರೆ ಫೋಟೋ ವೈರಲ್; 8 ವಾರ ವಿಶ್ರಾಂತಿ ಕಡ್ಡಾಯ

'ಪೆದ್ದಿ' ಚಿತ್ರದ ಶೂಟಿಂಗ್ ವೇಳೆ ಗಾಯಗೊಂಡಿದ್ದ ನಟ ರಾಮ್ ಚರಣ್ ಅವರ ಬಲಗೈ ಮಣಿಕಟ್ಟಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ ಸರ್ಜರಿ ನಡೆದಿದ್ದು ವೈದ್ಯರು ಎಂಟು ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ. ಸದ್ಯ ಚಿರಂಜೀವಿ ಕುಟುಂಬ ನಟನ ಜೊತೆಯಲ್ಲಿದ್ದು ಅಭಿಮಾನಿಗಳು ಶೀಘ್ರ ಗುಣಮುಖರಾಗಲು ಹಾರೈಸುತ್ತಿದ್ದಾರೆ.

ರಾಮ್ ಚರಣ್ ಆಸ್ಪತ್ರೆ ಫೋಟೋ ವೈರಲ್;  8 ವಾರ ವಿಶ್ರಾಂತಿ ಕಡ್ಡಾಯ
ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Jul 29, 2026 | 11:54 AM

Share

ಮುಖ್ಯಾಂಶಗಳು

  • ಕೊಯಮತ್ತೂರಿನ ಆಸ್ಪತ್ರೆಯಲ್ಲಿ ನಟ ರಾಮ್ ಚರಣ್ ಮಣಿಕೈ ಸರ್ಜರಿ ಸಕ್ಸಸ್
  • ನೋವಿನ ನಡುವೆಯೂ 'ಪೆದ್ದಿ' ಚಿತ್ರದ ಶೂಟಿಂಗ್ ಮುಗಿಸಿದ್ದ ಮೆಗಾ ಹೀರೋ
  • ಅಮೆರಿಕ ವೈದ್ಯರ ನೇತೃತ್ವದಲ್ಲಿ ಚಿಕಿತ್ಸೆ: ಎಂಟು ವಾರಗಳ ಕಾಲ ಶೂಟಿಂಗ್‌ನಿಂದ ಬ್ರೇಕ್

ಟಾಲಿವುಡ್‌ನ ಖ್ಯಾತ ನಟ ರಾಮ್ ಚರಣ್  (Ram Charan) ಬಲಗೈ ಮಣಿಕಟ್ಟಿನ ಶಸ್ತ್ರಚಿಕಿತ್ಸೆ ಭಾನುವಾರ ಯಶಸ್ವಿಯಾಗಿದೆ. ತಮಿಳುನಾಡಿನ ಕೊಯಮತ್ತೂರಿನ ಗಂಗಾ ಆಸ್ಪತ್ರೆಯಲ್ಲಿ ಈ ಆಪರೇಷನ್ ನಡೆದಿದೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ತಂದೆ ಚಿರಂಜೀವಿ, ತಾಯಿ ಸುರೇಖಾ ಮತ್ತು ಪತ್ನಿ ಉಪಾಸನಾ ಕೊನಿಡೇಲ ಅವರು ನಟನ ಜೊತೆಯಲ್ಲಿದ್ದಾರೆ. ರಾಮ್ ಚರಣ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಹೀಗಿರುವಾಗಲೇ ಅವರ ಆಸ್ಪತ್ರೆ ಫೋಟೋ ವೈರಲ್ ಆಗಿದೆ.

ಮಿಯಾಮಿ ವೈದ್ಯರ ತಂಡದಿಂದ ಚಿಕಿತ್ಸೆ

ರಾಮ್ ಚರಣ್ ಅವರಿಗೆ ಗಾಯದ ತೀವ್ರತೆ ಹೆಚ್ಚಾಗಿದ್ದರಿಂದ ಖ್ಯಾತ ವೈದ್ಯ ಡಾ. ಎಸ್. ರಾಜಶೇಖರನ್ ನೇತೃತ್ವದಲ್ಲಿ ಸರ್ಜರಿ ನಡೆಸಲಾಯಿತು. ಇದಕ್ಕಾಗಿ ಮಿಯಾಮಿಯಿಂದ ಅಂತರರಾಷ್ಟ್ರೀಯ ಪ್ರಸಿದ್ಧ ಕೈ ಮತ್ತು ಮಣಿಕಟ್ಟು ತಜ್ಞ ಡಾ. ಅಲೆಜಾಂಡ್ರೋ ಬಾಡಿಯಾ ಅವರನ್ನು ಕರೆಸಲಾಗಿತ್ತು. ಶಸ್ತ್ರಚಿಕಿತ್ಸೆ ಸಂಪೂರ್ಣ ಯಶಸ್ವಿಯಾಗಿದೆ ಎಂದು ಆಸ್ಪತ್ರೆ ಮಂಡಳಿ ತಿಳಿಸಿದೆ. ಚಿಕಿತ್ಸೆಯ ಫಲಿತಾಂಶದ ಬಗ್ಗೆ ವೈದ್ಯರ ತಂಡ ತೃಪ್ತಿ ವ್ಯಕ್ತಪಡಿಸಿದೆ. ಸದ್ಯ ರಾಮ್ ಚರಣ್ ಅವರಿಗೆ ಎಂಟು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ. ಅಲ್ಲಿಯವರೆಗೆ ಅವರು ಯಾವುದೇ ಶೂಟಿಂಗ್‌ನಲ್ಲಿ ಭಾಗವಹಿಸುವಂತಿಲ್ಲ.

ನೋವಿನಲ್ಲೇ ಶೂಟಿಂಗ್ ಮುಗಿಸಿದ್ದ ಚರಣ್

ಬುಚ್ಚಿ ಬಾಬು ಸನಾ ನಿರ್ದೇಶನದ ‘ಪೆದ್ದಿ’ ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಈ ಗಾಯವಾಗಿತ್ತು. ಕುಸ್ತಿ ದೃಶ್ಯದ ಶೂಟಿಂಗ್ ಸಮಯದಲ್ಲಿ ಚರಣ್ ಮಣಿಕಟ್ಟು ಜಖಂಗೊಂಡಿತ್ತು. ಆದರೂ ಅವರು ಶೂಟಿಂಗ್ ನಿಲ್ಲಿಸದೆ ನೋವಿನಲ್ಲೇ ನಟಿಸಿದ್ದರು. ಚಿತ್ರದ ಪ್ರಚಾರದ ಕೆಲಸಗಳನ್ನೂ ಮುಗಿಸಿಕೊಟ್ಟಿದ್ದರು. ನಟನ ಈ ವೃತ್ತಿಪರತೆಗೆ ‘ಪೆದ್ದಿ’ ನಿರ್ಮಾಣ ಸಂಸ್ಥೆ ವೃದ್ಧಿ ಸಿನಿಮಾಸ್ ಧನ್ಯವಾದ ತಿಳಿಸಿದೆ. ಚಿತ್ರರಂಗದ ಹಲವರು ರಾಮ್ ಚರಣ್ ಅವರ ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ‘ರಾಮ್ ಚರಣ್ ಹೊಸ ತಲೆಮಾರಿನ ಮೆಗಾಸ್ಟಾರ್’; ತಮ್ಮ ಬಿರುದನ್ನು ಮಗನಿಗೆ ಕೊಟ್ಟ ಚಿರಂಜೀವಿ

ಸಿನಿಮಾ ರಿಲೀಸ್ ಬಳಿಕ ಆಪರೇಷನ್

ಈ ವರ್ಷದ ಆರಂಭದಲ್ಲೂ ‘ಪೆದ್ದಿ’ ಸೆಟ್‌ನಲ್ಲಿ ಚರಣ್ ಅವರ ಹಣೆಗೆ ಗಂಭೀರ ಗಾಯವಾಗಿತ್ತು. ಆಗ ಹೈದರಾಬಾದ್‌ನ ಅಪೊಲೊ ಆಸ್ಪತ್ರೆಯಲ್ಲಿ ಸರ್ಜರಿ ಮಾಡಲಾಗಿತ್ತು. ಆ ಸಮಯದಲ್ಲಿಯೇ ಮಣಿಕಟ್ಟಿಗೂ ಸರ್ಜರಿ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದರು. ಆದರೆ ರಾಮ್ ಚರಣ್ ಸಿನಿಮಾ ಬಿಡುಗಡೆಯಾಗುವವರೆಗೆ ಶಸ್ತ್ರಚಿಕಿತ್ಸೆಯನ್ನು ಮುಂದೂಡಿದ್ದರು. ಜೂನ್ 4 ರಂದು 350 ಕೋಟಿ ಬಜೆಟ್‌ನ ‘ಪೆದ್ದಿ’ ಸಿನಿಮಾ ಅದ್ಧೂರಿಯಾಗಿ ತೆರೆಕಂಡಿತ್ತು. ಚಿತ್ರದಲ್ಲಿ ಶಿವರಾಜ್‌ಕುಮಾರ್, ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಗುಣಮುಖರಾದ ಬಳಿಕ ಚರಣ್ ನಿರ್ದೇಶಕ ಸುಕುಮಾರ್ ಅವರ ‘RC17’ ಚಿತ್ರದ ಕೆಲಸ ಆರಂಭಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್