AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ರಾಮ್​ ಚರಣ್​: ಶೂಟಿಂಗ್​ ಮೊಟಕುಗೊಳಿಸಿ ಹೈದರಾಬಾದ್​ಗೆ ವಾಪಸ್​ ಹೋಗಿದ್ದು ಯಾಕೆ?

ಟಾಲಿವುಡ್​ ನಟ ರಾಮ್​ ಚರಣ್​ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಮೈಸೂರಿನಿಂದ ಹೈದರಾಬಾದ್​ಗೆ ಅವರು ಖಾಸಗಿ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ಮೈಸೂರಿನಲ್ಲಿ ರಾಮ್​ ಚರಣ್​: ಶೂಟಿಂಗ್​ ಮೊಟಕುಗೊಳಿಸಿ ಹೈದರಾಬಾದ್​ಗೆ ವಾಪಸ್​ ಹೋಗಿದ್ದು ಯಾಕೆ?
ರಾಮ್​ ಚರಣ್​
ಮದನ್​ ಕುಮಾರ್​
|

Updated on: Nov 29, 2023 | 6:14 PM

Share

ಖ್ಯಾತ ನಟ ರಾಮ್​ ಚರಣ್​ (Ram Charan) ಅವರು ಮೈಸೂರಿನಲ್ಲಿ ಶೂಟಿಂಗ್​ ಮಾಡುತ್ತಿದ್ದರು. ಆದರೆ ಅವರು ಸದ್ಯಕ್ಕೆ ಚಿತ್ರೀಕರಣಕ್ಕೆ ಬ್ರೇಕ್​ ನೀಡಿದ್ದಾರೆ. ಖಾಸಗಿ ವಿಮಾನದಲ್ಲಿ ಅವರು ಹೈದರಾಬಾದ್​ಗೆ ವಾಪಸ್​ ಹೋಗಿದ್ದಾರೆ. ಶಂಕರ್​ ನಿರ್ದೇಶನದ ‘ಗೇಮ್​ ಚೇಂಚರ್​’ (Game Changer) ಚಿತ್ರಕ್ಕೆ ಮೈಸೂರಿನಲ್ಲಿ ಶೂಟಿಂಗ್​ ಮಾಡಲಾಗುತ್ತಿರುವುದು ವಿಶೇಷ. ಈ ನಡುವೆ ರಾಮ್​ ಚರಣ್​ ಅವರು ಶೂಟಿಂಗ್​ ಮೊಟಕುಗೊಳಿಸಿ ವಾಪಸ್​ ಹೋಗಿದ್ದಕ್ಕೆ ವಿಶೇಷ ಕಾರಣ ಇದೆ. ನವೆಂಬರ್​ 30ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ (Telangana Election) ಮತ ಚಲಾಯಿಸುವ ಸಲುವಾಗಿ ಅವರು ‘ಗೇಮ್​ ಚೇಂಜರ್​’ ಚಿತ್ರೀಕರಣಕ್ಕೆ ಬ್ರೇಕ್​ ನೀಡಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ರಾಮ್ ಚರಣ್ ಅವರು ಕಾಣಿಸಿಕೊಂಡಿದ್ದಾರೆ. ಖಾಸಗಿ ವಿಮಾನದಲ್ಲಿ ಅವರು ಮೈಸೂರಿನಿಂದ ಪ್ರಯಾಣ ಬೆಳೆಸಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ. ರಾಮ್​ ಚರಣ್​ ಅವರು ವಿಮಾನ ಹತ್ತುವಾಗ ಅವರ ಜೊತೆ ಅಲ್ಲಿನ ಸಿಬ್ಬಂದಿ ಫೋಟೋ ತೆಗೆಸಿಕೊಂಡಿದ್ದಾರೆ. ಗಡಿಬಿಡಿಯಲ್ಲಿ ಇದ್ದರೂ ಕೂಡ ರಾಮ್​ ಚರಣ್​ ಅವರು ಅಭಿಮಾನಿಗಳ ಜೊತೆ ತಾಳ್ಮೆಯಿಂದ ಫೋಟೋಗೆ ಪೋಸ್​ ನೀಡಿದ್ದಾರೆ.

‘ಗೇಮ್​ ಚೇಂಜರ್​’ ಸಿನಿಮಾದಲ್ಲಿ ರಾಜಕೀಯ ಮತ್ತು ಚುನಾವಣೆ ಕುರಿತಾದ ಕಥಾಹಂದರ ಇದೆ ಎಂದು ನಿರೀಕ್ಷಿಸಲಾಗಿದೆ. ಸಿನಿಮಾದಲ್ಲಿ ಜನರಿಗೆ ಸಂದೇಶ ನೀಡುವ ನಟರು ನಿಜ ಜೀವನದಲ್ಲಿಯೂ ತಮ್ಮ ಕರ್ತವ್ಯವನ್ನು ಮರೆಯುವಂತಿಲ್ಲ. ಹಾಗಾಗಿ ರಾಮ್​ ಚರಣ್​ ಅವರು ತಪ್ಪದೇ ಮತ ಚಲಾಯಿಸಲಿದ್ದಾರೆ. ಮತದಾನದ ಜವಾಬ್ದಾರಿ ನಿಭಾಯಿಸುವ ಸಲುವಾಗಿ ಅವರು ಚಿತ್ರೀಕರಣವನ್ನು ಮೊಟಕುಗೊಳಿಸಿದ್ದಾರೆ. ವೈರಲ್ ಆಗಿರುವ ಈ ವಿಡಿಯೋ ಮತ್ತು ಫೋಟೋ ನೋಡಿ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: Ram Charan: ರಾಮ್​ ಚರಣ್​ ಮಗಳಿಗೆ ಅಂಬಾನಿ, 1 ಕೋಟಿ ರೂ. ಬೆಲೆಯ ಚಿನ್ನದ ತೊಟ್ಟಿಲು ಕೊಟ್ಟಿದ್ದು ನಿಜವೇ?

ಗುರುವಾರ (ನವೆಂಬರ್​ 30) ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಿದ ಬಳಿಕ ರಾಮ್​ ಚರಣ್​ ಅವರು ಪುನಃ ಮೈಸೂರಿಗೆ ಬರಲಿದ್ದಾರೆ. ‘ಗೇಮ್​ ಚೇಂಚರ್​’ ಸಿನಿಮಾದ ಶೂಟಿಂಗ್​ ಮುಂದುವರಿಯಲಿದೆ. ‘ಆರ್​ಆರ್​ಆರ್​’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ರಾಮ್​ ಚರಣ್​ ಅವರು ಪ್ಯಾನ್​ ಇಂಡಿಯಾ ಸ್ಟಾರ್ ಆಗಿದ್ದಾರೆ. ಹಾಗಾಗಿ ಅವರ ಮುಂದಿನ ಸಿನಿಮಾಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ‘ಗೇಮ್​ ಚೇಂಚರ್​’ ಸಿನಿಮಾಗೆ ಸ್ಟಾರ್​ ಡೈರೆಕ್ಟರ್​ ಶಂಕರ್​ ಅವರು ನಿರ್ದೇಶನ ಮಾಡುತ್ತಿರುವುದರಿಂದ ಹೈಪ್​ ಜೋರಾಗಿದೆ. ಈ ಸಿನಿಮಾಗೆ ಬಾಲಿವುಡ್​ ಬೆಡಗಿ ಕಿಯಾರಾ ಅಡ್ವಾಣಿ ನಾಯಕಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್