AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ರಾಮ್​ ಚರಣ್​: ಶೂಟಿಂಗ್​ ಮೊಟಕುಗೊಳಿಸಿ ಹೈದರಾಬಾದ್​ಗೆ ವಾಪಸ್​ ಹೋಗಿದ್ದು ಯಾಕೆ?

ಟಾಲಿವುಡ್​ ನಟ ರಾಮ್​ ಚರಣ್​ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಮೈಸೂರಿನಿಂದ ಹೈದರಾಬಾದ್​ಗೆ ಅವರು ಖಾಸಗಿ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ಮೈಸೂರಿನಲ್ಲಿ ರಾಮ್​ ಚರಣ್​: ಶೂಟಿಂಗ್​ ಮೊಟಕುಗೊಳಿಸಿ ಹೈದರಾಬಾದ್​ಗೆ ವಾಪಸ್​ ಹೋಗಿದ್ದು ಯಾಕೆ?
ರಾಮ್​ ಚರಣ್​
ಮದನ್​ ಕುಮಾರ್​
|

Updated on: Nov 29, 2023 | 6:14 PM

Share

ಖ್ಯಾತ ನಟ ರಾಮ್​ ಚರಣ್​ (Ram Charan) ಅವರು ಮೈಸೂರಿನಲ್ಲಿ ಶೂಟಿಂಗ್​ ಮಾಡುತ್ತಿದ್ದರು. ಆದರೆ ಅವರು ಸದ್ಯಕ್ಕೆ ಚಿತ್ರೀಕರಣಕ್ಕೆ ಬ್ರೇಕ್​ ನೀಡಿದ್ದಾರೆ. ಖಾಸಗಿ ವಿಮಾನದಲ್ಲಿ ಅವರು ಹೈದರಾಬಾದ್​ಗೆ ವಾಪಸ್​ ಹೋಗಿದ್ದಾರೆ. ಶಂಕರ್​ ನಿರ್ದೇಶನದ ‘ಗೇಮ್​ ಚೇಂಚರ್​’ (Game Changer) ಚಿತ್ರಕ್ಕೆ ಮೈಸೂರಿನಲ್ಲಿ ಶೂಟಿಂಗ್​ ಮಾಡಲಾಗುತ್ತಿರುವುದು ವಿಶೇಷ. ಈ ನಡುವೆ ರಾಮ್​ ಚರಣ್​ ಅವರು ಶೂಟಿಂಗ್​ ಮೊಟಕುಗೊಳಿಸಿ ವಾಪಸ್​ ಹೋಗಿದ್ದಕ್ಕೆ ವಿಶೇಷ ಕಾರಣ ಇದೆ. ನವೆಂಬರ್​ 30ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ (Telangana Election) ಮತ ಚಲಾಯಿಸುವ ಸಲುವಾಗಿ ಅವರು ‘ಗೇಮ್​ ಚೇಂಜರ್​’ ಚಿತ್ರೀಕರಣಕ್ಕೆ ಬ್ರೇಕ್​ ನೀಡಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ರಾಮ್ ಚರಣ್ ಅವರು ಕಾಣಿಸಿಕೊಂಡಿದ್ದಾರೆ. ಖಾಸಗಿ ವಿಮಾನದಲ್ಲಿ ಅವರು ಮೈಸೂರಿನಿಂದ ಪ್ರಯಾಣ ಬೆಳೆಸಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ. ರಾಮ್​ ಚರಣ್​ ಅವರು ವಿಮಾನ ಹತ್ತುವಾಗ ಅವರ ಜೊತೆ ಅಲ್ಲಿನ ಸಿಬ್ಬಂದಿ ಫೋಟೋ ತೆಗೆಸಿಕೊಂಡಿದ್ದಾರೆ. ಗಡಿಬಿಡಿಯಲ್ಲಿ ಇದ್ದರೂ ಕೂಡ ರಾಮ್​ ಚರಣ್​ ಅವರು ಅಭಿಮಾನಿಗಳ ಜೊತೆ ತಾಳ್ಮೆಯಿಂದ ಫೋಟೋಗೆ ಪೋಸ್​ ನೀಡಿದ್ದಾರೆ.

‘ಗೇಮ್​ ಚೇಂಜರ್​’ ಸಿನಿಮಾದಲ್ಲಿ ರಾಜಕೀಯ ಮತ್ತು ಚುನಾವಣೆ ಕುರಿತಾದ ಕಥಾಹಂದರ ಇದೆ ಎಂದು ನಿರೀಕ್ಷಿಸಲಾಗಿದೆ. ಸಿನಿಮಾದಲ್ಲಿ ಜನರಿಗೆ ಸಂದೇಶ ನೀಡುವ ನಟರು ನಿಜ ಜೀವನದಲ್ಲಿಯೂ ತಮ್ಮ ಕರ್ತವ್ಯವನ್ನು ಮರೆಯುವಂತಿಲ್ಲ. ಹಾಗಾಗಿ ರಾಮ್​ ಚರಣ್​ ಅವರು ತಪ್ಪದೇ ಮತ ಚಲಾಯಿಸಲಿದ್ದಾರೆ. ಮತದಾನದ ಜವಾಬ್ದಾರಿ ನಿಭಾಯಿಸುವ ಸಲುವಾಗಿ ಅವರು ಚಿತ್ರೀಕರಣವನ್ನು ಮೊಟಕುಗೊಳಿಸಿದ್ದಾರೆ. ವೈರಲ್ ಆಗಿರುವ ಈ ವಿಡಿಯೋ ಮತ್ತು ಫೋಟೋ ನೋಡಿ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: Ram Charan: ರಾಮ್​ ಚರಣ್​ ಮಗಳಿಗೆ ಅಂಬಾನಿ, 1 ಕೋಟಿ ರೂ. ಬೆಲೆಯ ಚಿನ್ನದ ತೊಟ್ಟಿಲು ಕೊಟ್ಟಿದ್ದು ನಿಜವೇ?

ಗುರುವಾರ (ನವೆಂಬರ್​ 30) ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಿದ ಬಳಿಕ ರಾಮ್​ ಚರಣ್​ ಅವರು ಪುನಃ ಮೈಸೂರಿಗೆ ಬರಲಿದ್ದಾರೆ. ‘ಗೇಮ್​ ಚೇಂಚರ್​’ ಸಿನಿಮಾದ ಶೂಟಿಂಗ್​ ಮುಂದುವರಿಯಲಿದೆ. ‘ಆರ್​ಆರ್​ಆರ್​’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ರಾಮ್​ ಚರಣ್​ ಅವರು ಪ್ಯಾನ್​ ಇಂಡಿಯಾ ಸ್ಟಾರ್ ಆಗಿದ್ದಾರೆ. ಹಾಗಾಗಿ ಅವರ ಮುಂದಿನ ಸಿನಿಮಾಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ‘ಗೇಮ್​ ಚೇಂಚರ್​’ ಸಿನಿಮಾಗೆ ಸ್ಟಾರ್​ ಡೈರೆಕ್ಟರ್​ ಶಂಕರ್​ ಅವರು ನಿರ್ದೇಶನ ಮಾಡುತ್ತಿರುವುದರಿಂದ ಹೈಪ್​ ಜೋರಾಗಿದೆ. ಈ ಸಿನಿಮಾಗೆ ಬಾಲಿವುಡ್​ ಬೆಡಗಿ ಕಿಯಾರಾ ಅಡ್ವಾಣಿ ನಾಯಕಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​