AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ರಾಮ್​ ಚರಣ್​: ಶೂಟಿಂಗ್​ ಮೊಟಕುಗೊಳಿಸಿ ಹೈದರಾಬಾದ್​ಗೆ ವಾಪಸ್​ ಹೋಗಿದ್ದು ಯಾಕೆ?

ಟಾಲಿವುಡ್​ ನಟ ರಾಮ್​ ಚರಣ್​ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಮೈಸೂರಿನಿಂದ ಹೈದರಾಬಾದ್​ಗೆ ಅವರು ಖಾಸಗಿ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ಮೈಸೂರಿನಲ್ಲಿ ರಾಮ್​ ಚರಣ್​: ಶೂಟಿಂಗ್​ ಮೊಟಕುಗೊಳಿಸಿ ಹೈದರಾಬಾದ್​ಗೆ ವಾಪಸ್​ ಹೋಗಿದ್ದು ಯಾಕೆ?
ರಾಮ್​ ಚರಣ್​
ಮದನ್​ ಕುಮಾರ್​
|

Updated on: Nov 29, 2023 | 6:14 PM

Share

ಖ್ಯಾತ ನಟ ರಾಮ್​ ಚರಣ್​ (Ram Charan) ಅವರು ಮೈಸೂರಿನಲ್ಲಿ ಶೂಟಿಂಗ್​ ಮಾಡುತ್ತಿದ್ದರು. ಆದರೆ ಅವರು ಸದ್ಯಕ್ಕೆ ಚಿತ್ರೀಕರಣಕ್ಕೆ ಬ್ರೇಕ್​ ನೀಡಿದ್ದಾರೆ. ಖಾಸಗಿ ವಿಮಾನದಲ್ಲಿ ಅವರು ಹೈದರಾಬಾದ್​ಗೆ ವಾಪಸ್​ ಹೋಗಿದ್ದಾರೆ. ಶಂಕರ್​ ನಿರ್ದೇಶನದ ‘ಗೇಮ್​ ಚೇಂಚರ್​’ (Game Changer) ಚಿತ್ರಕ್ಕೆ ಮೈಸೂರಿನಲ್ಲಿ ಶೂಟಿಂಗ್​ ಮಾಡಲಾಗುತ್ತಿರುವುದು ವಿಶೇಷ. ಈ ನಡುವೆ ರಾಮ್​ ಚರಣ್​ ಅವರು ಶೂಟಿಂಗ್​ ಮೊಟಕುಗೊಳಿಸಿ ವಾಪಸ್​ ಹೋಗಿದ್ದಕ್ಕೆ ವಿಶೇಷ ಕಾರಣ ಇದೆ. ನವೆಂಬರ್​ 30ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ (Telangana Election) ಮತ ಚಲಾಯಿಸುವ ಸಲುವಾಗಿ ಅವರು ‘ಗೇಮ್​ ಚೇಂಜರ್​’ ಚಿತ್ರೀಕರಣಕ್ಕೆ ಬ್ರೇಕ್​ ನೀಡಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ರಾಮ್ ಚರಣ್ ಅವರು ಕಾಣಿಸಿಕೊಂಡಿದ್ದಾರೆ. ಖಾಸಗಿ ವಿಮಾನದಲ್ಲಿ ಅವರು ಮೈಸೂರಿನಿಂದ ಪ್ರಯಾಣ ಬೆಳೆಸಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ. ರಾಮ್​ ಚರಣ್​ ಅವರು ವಿಮಾನ ಹತ್ತುವಾಗ ಅವರ ಜೊತೆ ಅಲ್ಲಿನ ಸಿಬ್ಬಂದಿ ಫೋಟೋ ತೆಗೆಸಿಕೊಂಡಿದ್ದಾರೆ. ಗಡಿಬಿಡಿಯಲ್ಲಿ ಇದ್ದರೂ ಕೂಡ ರಾಮ್​ ಚರಣ್​ ಅವರು ಅಭಿಮಾನಿಗಳ ಜೊತೆ ತಾಳ್ಮೆಯಿಂದ ಫೋಟೋಗೆ ಪೋಸ್​ ನೀಡಿದ್ದಾರೆ.

‘ಗೇಮ್​ ಚೇಂಜರ್​’ ಸಿನಿಮಾದಲ್ಲಿ ರಾಜಕೀಯ ಮತ್ತು ಚುನಾವಣೆ ಕುರಿತಾದ ಕಥಾಹಂದರ ಇದೆ ಎಂದು ನಿರೀಕ್ಷಿಸಲಾಗಿದೆ. ಸಿನಿಮಾದಲ್ಲಿ ಜನರಿಗೆ ಸಂದೇಶ ನೀಡುವ ನಟರು ನಿಜ ಜೀವನದಲ್ಲಿಯೂ ತಮ್ಮ ಕರ್ತವ್ಯವನ್ನು ಮರೆಯುವಂತಿಲ್ಲ. ಹಾಗಾಗಿ ರಾಮ್​ ಚರಣ್​ ಅವರು ತಪ್ಪದೇ ಮತ ಚಲಾಯಿಸಲಿದ್ದಾರೆ. ಮತದಾನದ ಜವಾಬ್ದಾರಿ ನಿಭಾಯಿಸುವ ಸಲುವಾಗಿ ಅವರು ಚಿತ್ರೀಕರಣವನ್ನು ಮೊಟಕುಗೊಳಿಸಿದ್ದಾರೆ. ವೈರಲ್ ಆಗಿರುವ ಈ ವಿಡಿಯೋ ಮತ್ತು ಫೋಟೋ ನೋಡಿ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: Ram Charan: ರಾಮ್​ ಚರಣ್​ ಮಗಳಿಗೆ ಅಂಬಾನಿ, 1 ಕೋಟಿ ರೂ. ಬೆಲೆಯ ಚಿನ್ನದ ತೊಟ್ಟಿಲು ಕೊಟ್ಟಿದ್ದು ನಿಜವೇ?

ಗುರುವಾರ (ನವೆಂಬರ್​ 30) ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಿದ ಬಳಿಕ ರಾಮ್​ ಚರಣ್​ ಅವರು ಪುನಃ ಮೈಸೂರಿಗೆ ಬರಲಿದ್ದಾರೆ. ‘ಗೇಮ್​ ಚೇಂಚರ್​’ ಸಿನಿಮಾದ ಶೂಟಿಂಗ್​ ಮುಂದುವರಿಯಲಿದೆ. ‘ಆರ್​ಆರ್​ಆರ್​’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ರಾಮ್​ ಚರಣ್​ ಅವರು ಪ್ಯಾನ್​ ಇಂಡಿಯಾ ಸ್ಟಾರ್ ಆಗಿದ್ದಾರೆ. ಹಾಗಾಗಿ ಅವರ ಮುಂದಿನ ಸಿನಿಮಾಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ‘ಗೇಮ್​ ಚೇಂಚರ್​’ ಸಿನಿಮಾಗೆ ಸ್ಟಾರ್​ ಡೈರೆಕ್ಟರ್​ ಶಂಕರ್​ ಅವರು ನಿರ್ದೇಶನ ಮಾಡುತ್ತಿರುವುದರಿಂದ ಹೈಪ್​ ಜೋರಾಗಿದೆ. ಈ ಸಿನಿಮಾಗೆ ಬಾಲಿವುಡ್​ ಬೆಡಗಿ ಕಿಯಾರಾ ಅಡ್ವಾಣಿ ನಾಯಕಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ