AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ರಾಮ್​ ಚರಣ್​: ಶೂಟಿಂಗ್​ ಮೊಟಕುಗೊಳಿಸಿ ಹೈದರಾಬಾದ್​ಗೆ ವಾಪಸ್​ ಹೋಗಿದ್ದು ಯಾಕೆ?

ಟಾಲಿವುಡ್​ ನಟ ರಾಮ್​ ಚರಣ್​ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಮೈಸೂರಿನಿಂದ ಹೈದರಾಬಾದ್​ಗೆ ಅವರು ಖಾಸಗಿ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ಮೈಸೂರಿನಲ್ಲಿ ರಾಮ್​ ಚರಣ್​: ಶೂಟಿಂಗ್​ ಮೊಟಕುಗೊಳಿಸಿ ಹೈದರಾಬಾದ್​ಗೆ ವಾಪಸ್​ ಹೋಗಿದ್ದು ಯಾಕೆ?
ರಾಮ್​ ಚರಣ್​
ಮದನ್​ ಕುಮಾರ್​
|

Updated on: Nov 29, 2023 | 6:14 PM

Share

ಖ್ಯಾತ ನಟ ರಾಮ್​ ಚರಣ್​ (Ram Charan) ಅವರು ಮೈಸೂರಿನಲ್ಲಿ ಶೂಟಿಂಗ್​ ಮಾಡುತ್ತಿದ್ದರು. ಆದರೆ ಅವರು ಸದ್ಯಕ್ಕೆ ಚಿತ್ರೀಕರಣಕ್ಕೆ ಬ್ರೇಕ್​ ನೀಡಿದ್ದಾರೆ. ಖಾಸಗಿ ವಿಮಾನದಲ್ಲಿ ಅವರು ಹೈದರಾಬಾದ್​ಗೆ ವಾಪಸ್​ ಹೋಗಿದ್ದಾರೆ. ಶಂಕರ್​ ನಿರ್ದೇಶನದ ‘ಗೇಮ್​ ಚೇಂಚರ್​’ (Game Changer) ಚಿತ್ರಕ್ಕೆ ಮೈಸೂರಿನಲ್ಲಿ ಶೂಟಿಂಗ್​ ಮಾಡಲಾಗುತ್ತಿರುವುದು ವಿಶೇಷ. ಈ ನಡುವೆ ರಾಮ್​ ಚರಣ್​ ಅವರು ಶೂಟಿಂಗ್​ ಮೊಟಕುಗೊಳಿಸಿ ವಾಪಸ್​ ಹೋಗಿದ್ದಕ್ಕೆ ವಿಶೇಷ ಕಾರಣ ಇದೆ. ನವೆಂಬರ್​ 30ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ (Telangana Election) ಮತ ಚಲಾಯಿಸುವ ಸಲುವಾಗಿ ಅವರು ‘ಗೇಮ್​ ಚೇಂಜರ್​’ ಚಿತ್ರೀಕರಣಕ್ಕೆ ಬ್ರೇಕ್​ ನೀಡಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ರಾಮ್ ಚರಣ್ ಅವರು ಕಾಣಿಸಿಕೊಂಡಿದ್ದಾರೆ. ಖಾಸಗಿ ವಿಮಾನದಲ್ಲಿ ಅವರು ಮೈಸೂರಿನಿಂದ ಪ್ರಯಾಣ ಬೆಳೆಸಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ. ರಾಮ್​ ಚರಣ್​ ಅವರು ವಿಮಾನ ಹತ್ತುವಾಗ ಅವರ ಜೊತೆ ಅಲ್ಲಿನ ಸಿಬ್ಬಂದಿ ಫೋಟೋ ತೆಗೆಸಿಕೊಂಡಿದ್ದಾರೆ. ಗಡಿಬಿಡಿಯಲ್ಲಿ ಇದ್ದರೂ ಕೂಡ ರಾಮ್​ ಚರಣ್​ ಅವರು ಅಭಿಮಾನಿಗಳ ಜೊತೆ ತಾಳ್ಮೆಯಿಂದ ಫೋಟೋಗೆ ಪೋಸ್​ ನೀಡಿದ್ದಾರೆ.

‘ಗೇಮ್​ ಚೇಂಜರ್​’ ಸಿನಿಮಾದಲ್ಲಿ ರಾಜಕೀಯ ಮತ್ತು ಚುನಾವಣೆ ಕುರಿತಾದ ಕಥಾಹಂದರ ಇದೆ ಎಂದು ನಿರೀಕ್ಷಿಸಲಾಗಿದೆ. ಸಿನಿಮಾದಲ್ಲಿ ಜನರಿಗೆ ಸಂದೇಶ ನೀಡುವ ನಟರು ನಿಜ ಜೀವನದಲ್ಲಿಯೂ ತಮ್ಮ ಕರ್ತವ್ಯವನ್ನು ಮರೆಯುವಂತಿಲ್ಲ. ಹಾಗಾಗಿ ರಾಮ್​ ಚರಣ್​ ಅವರು ತಪ್ಪದೇ ಮತ ಚಲಾಯಿಸಲಿದ್ದಾರೆ. ಮತದಾನದ ಜವಾಬ್ದಾರಿ ನಿಭಾಯಿಸುವ ಸಲುವಾಗಿ ಅವರು ಚಿತ್ರೀಕರಣವನ್ನು ಮೊಟಕುಗೊಳಿಸಿದ್ದಾರೆ. ವೈರಲ್ ಆಗಿರುವ ಈ ವಿಡಿಯೋ ಮತ್ತು ಫೋಟೋ ನೋಡಿ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: Ram Charan: ರಾಮ್​ ಚರಣ್​ ಮಗಳಿಗೆ ಅಂಬಾನಿ, 1 ಕೋಟಿ ರೂ. ಬೆಲೆಯ ಚಿನ್ನದ ತೊಟ್ಟಿಲು ಕೊಟ್ಟಿದ್ದು ನಿಜವೇ?

ಗುರುವಾರ (ನವೆಂಬರ್​ 30) ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಿದ ಬಳಿಕ ರಾಮ್​ ಚರಣ್​ ಅವರು ಪುನಃ ಮೈಸೂರಿಗೆ ಬರಲಿದ್ದಾರೆ. ‘ಗೇಮ್​ ಚೇಂಚರ್​’ ಸಿನಿಮಾದ ಶೂಟಿಂಗ್​ ಮುಂದುವರಿಯಲಿದೆ. ‘ಆರ್​ಆರ್​ಆರ್​’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ರಾಮ್​ ಚರಣ್​ ಅವರು ಪ್ಯಾನ್​ ಇಂಡಿಯಾ ಸ್ಟಾರ್ ಆಗಿದ್ದಾರೆ. ಹಾಗಾಗಿ ಅವರ ಮುಂದಿನ ಸಿನಿಮಾಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ‘ಗೇಮ್​ ಚೇಂಚರ್​’ ಸಿನಿಮಾಗೆ ಸ್ಟಾರ್​ ಡೈರೆಕ್ಟರ್​ ಶಂಕರ್​ ಅವರು ನಿರ್ದೇಶನ ಮಾಡುತ್ತಿರುವುದರಿಂದ ಹೈಪ್​ ಜೋರಾಗಿದೆ. ಈ ಸಿನಿಮಾಗೆ ಬಾಲಿವುಡ್​ ಬೆಡಗಿ ಕಿಯಾರಾ ಅಡ್ವಾಣಿ ನಾಯಕಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?