Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಿಗಾಲಲ್ಲಿ ಬಂದು ಮುಂಬೈ ಸಿದ್ಧಿ ನಿನಾಯಕನ ದರ್ಶನ ಪಡೆದ ರಾಮ್ ಚರಣ್

Ram Charan Teja: ನಟ ರಾಮ್ ಚರಣ್ ತೇಜ ಅಯ್ಯಪ್ಪ ಮಾಲಧಾರಿಯಾಗಿ ಮುಂಬೈಗೆ ಆಗಮಿಸಿ ಸಿದ್ಧಿ ವಿನಾಯಕನ ದರ್ಶನ ಪಡೆದು ವೃತವನ್ನು ಅಂತ್ಯಗೊಳಿಸಿದ್ದಾರೆ.

ಬರಿಗಾಲಲ್ಲಿ ಬಂದು ಮುಂಬೈ ಸಿದ್ಧಿ ನಿನಾಯಕನ ದರ್ಶನ ಪಡೆದ ರಾಮ್ ಚರಣ್
ರಾಮ್ ಚರಣ್ ತೇಜ
Follow us
ಮಂಜುನಾಥ ಸಿ.
|

Updated on: Oct 04, 2023 | 3:46 PM

ನಟ ರಾಮ್ ಚರಣ್ ತೇಜ (Ram Charan Teja) ದೊಡ್ಡ ಸೂಪರ್ ಸ್ಟಾರ್ ಆಗಿರುವ ಜೊತೆಗೆ ಮಹಾನ್ ದೈವ ಭಕ್ತ. ದೇವರ ಪ್ರತಿಯಾಗಿ ಅಪಾರ ಭಕ್ತಿ, ನಂಬಿಕೆ ಮತ್ತು ಶ್ರದ್ಧೆ ಹೊಂದಿದ್ದಾರೆ. ವ್ರತ ಆಚರಣೆ ಇತ್ಯಾದಿಗಳಲ್ಲಿ ಅಪಾರವಾದ ನಂಬಿಕೆ ಹೊಂದಿದ್ದಾರೆ. ಅದರಲ್ಲಿಯೂ ಶಬರಿಮಲೆ ಅಯ್ಯಪ್ಪನ ಕಟ್ಟಾ ಭಕ್ತರಾಗಿರುವ ರಾಮ್ ಚರಣ್ ತೇಜ ಹಲವು ದಿನಗಳ ಕಾಲ ಮಾಲಧಾರಿಯಾಗಿದ್ದ ವ್ರತ ಆಚರಿಸಿ ಮಲೆ ಏರಿಹಯೋಗಿ ಅಯ್ಯಪ್ಪನ ದರ್ಶನ ಪಡೆಯುತ್ತಾರೆ. ಕಳೆದ ವರ್ಷ ಮಾಲಧಾರಣೆ ಮಾಡಿದ್ದ ನಟ ರಾಮ್ ಚರಣ್ ಈಗಲೂ ಮಾಲ ಧಾರಣೆ ಮಾಡಿದ್ದಾರೆ.

ಸಾಮಾನ್ಯವಾಗಿ ದುಬಾರಿ ಸೂಟು ಅಥವಾ ದುಬಾರಿ ಕಾಸ್ಟೂಮ್, ಕಪ್ಪು ಕನ್ನಡಕ, ವಿದೇಶಿ ಬ್ರ್ಯಾಂಡ್​ನ ವಾಚು, ವಿದೇಶಿ ಬ್ರ್ಯಾಂಡ್​ನ ಮಿರಿ ಮಿರಿ ಮಿಂಚುವ ಶೂ ಧರಿಸಿ ಕಾಣಿಸಿಕೊಳ್ಳುತ್ತಿದ್ದ ರಾಮ್ ಚರಣ್, ಇದೀಗ ಮಾಲಧಾರಿಯಾಗಿರುವ ಕಾರಣ ಕಪ್ಪು ಬಣ್ಣದ ಸಾಧಾರಣ ಕುರ್ತಾ ಶರ್ಟ್ ಧರಿಸಿ, ಬರಿಗಾಲಲ್ಲಿ ಓಡಾಡುತ್ತಿದ್ದಾರೆ. ಇದೀಗ ಮುಂಬೈಗೆ ಬಂದಿರುವ ರಾಮ್ ಚರಣ್ ತೇಜ ಕೆಲವು ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಮಾಲಧಾರಿಯಾಗಿರುವ ಕಾರಣ ಕಪ್ಪು ಬಣ್ಣದ ಸರಳ ಉಡುಗೆ ಧರಿಸಿ, ನಿಯಮದಂತೆ ಚಪ್ಪಲಿ ತ್ಯಜಿಸಿ ಬರಿಗಾಲಲ್ಲಿ ಓಡುತ್ತಿದ್ದಾರೆ. ನಿನ್ನೆ (ಅಕ್ಟೋಬರ್ 03) ಮುಂಬೈನ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಯ್ಯಪ್ಪ ದೀಕ್ಷೆಯನ್ನು ಮುಗಿಸಿದ್ದಾರೆ. ಮಗಳು ಕ್ಲಿನ್ ಕ್ಲಾರ್ ಜನಿಸಿದ ಬಳಿಕ ಅಯ್ಯಪ್ಪ ಮಾಲೆ ಧರಿಸಿದ್ದ ರಾಮ್ ನಿನ್ನ ದೀಕ್ಷೆಯನ್ನು ಮುಕ್ತಾಯಗೊಳಿಸಿದ್ದಾರೆ.

ಇದನ್ನೂ ಓದಿ: ರಾಮ್ ಚರಣ್ ಜೊತೆ ರೊಮ್ಯಾನ್ಸ್ ಮಾಡ್ತಾರೆ ರವೀನಾ ಟಂಡನ್ ಮಗಳು?

ತ್ರಿಬಲ್ ಆರ್ ಸೂಪರ್ ಡೂಪರ್ ಹಿಟ್ ಆದ ಬಳಿಕವೂ ರಾಮ್ ಚರಣ್ ಮಾಲೆ ಧರಿಸಿದ್ದರು. ಆಗಲೂ ಕೂಡ ಕೇವಲ ಒಂದೆರಡು ದಿನಗಳಿಗಾಗಿ ಮಾಲೆ ಧರಿಸಿರಲಿಲ್ಲ. ಬದಲಿಗೆ ಬರೋಬ್ಬರಿ 41 ದಿನಗಳ ಕಾಲ ಅವರು ಮಾಲಾಧಾರಿಯಾಗಿ ಅಯ್ಯಪ್ಪನ ಸ್ಮರಣೆ ಮಾಡಿದ್ದರು. ಮಾಲಾಧಾರಿ ಪಾಲಿಸಬೇಕಾದ ಕಠಿಣ ನಿಯಮಗಳು 41 ದಿನಗಳ ವರೆಗೆ ಪಾಲಿಸಿದ್ದರು, ಇದೀಗ ಮಗಳ ಹುಟ್ಟಿದ ಬಳಿಕ ಮಾಲೆ ಧರಿಸಿದ್ದ ರಾಮ್ ಚರಣ್ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನದ ಬಳಿಕ ಅಯ್ಯಪ್ಪ ದೀಕ್ಷೆಯನ್ನು ಮುಗಿಸಿದ್ದಾರೆ. ದೇಗುಲಕ್ಕೆ ರಾಮ್ ಚರಣ್ ಆಗಮಿಸಿದ ಸಂದರ್ಭದಲ್ಲಿ ಅಭಿಮಾನಿಗಳು ಫೋಟೋಗಾಗಿ ಮುಗಿಬಿದ್ದರು.

ರಾಮ್ ಚರಣ್ ಪ್ರಸ್ತುತ ತಮಿಳಿನ ಸ್ಟಾರ್ ನಿರ್ದೇಶಕ ಶಂಕರ್ ನಿರ್ದೇಶನದ ‘ಗೇಮ್ ಚೇಂಜರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಸಿನಿಮಾದ ಬಳಿಕ ಬಾಲಿವುಡ್​ನ ಸಿನಿಮಾ ಒಂದರಲ್ಲಿ ನಟಿಸುವ ಸಾಧ್ಯತೆ ಇದೆ. ಈ ನಡುವೆ ಕೆಲವು ಸಿನಿಮಾಗಳ ನಿರ್ಮಾಣವನ್ನೂ ರಾಮ್ ಚರಣ್ ಮಾಡುತ್ತಿದ್ದಾರೆ. ತಂದೆ ಚಿರಂಜೀವಿ ನಟನೆಯ ಒಂದು ಸಿನಿಮಾಕ್ಕೆ ಬಂಡವಾಳ ಹೂಡುವವರಿದ್ದಾರೆ. ಜೊತೆಗೆ ತೆಲುಗಿನ ನಟ ನಿಖಿಲ್ ಅಭಿನಯದ ಐತಿಹಾಸಿಕ ಸಿನಿಮಾ ಒಂದಕ್ಕೂ ರಾಮ್ ಚರಣ್ ಬಂಡವಾಳ ಹೂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ