AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ನಿಂದ ರಾಮ್​ ಚರಣ್​ಗೆ ಹೆಚ್ಚಿತು ಬೇಡಿಕೆ; ಬಾಲಿವುಡ್​ನಿಂದ ಬಂತು ಎರಡೆರಡು ಆಫರ್​

ರಾಮ್​ ಚರಣ್​ ಅವರಿಗೆ ಬಾಲಿವುಡ್ ಹೊಸತಲ್ಲ. ಈ ಮೊದಲೇ ಅವರು ಬಾಲಿವುಡ್​ನಲ್ಲಿ ಅದೃಷ್ಟ ಪರೀಕ್ಷೆ ಮಾಡಿದ್ದರು. 2013ರಲ್ಲಿ ತೆರೆಗೆ ಬಂದ ‘ಝಂಜೀರ್​’ ಸಿನಿಮಾ ಮೂಲಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟರು.

‘ಆರ್​ಆರ್​ಆರ್​’ನಿಂದ ರಾಮ್​ ಚರಣ್​ಗೆ ಹೆಚ್ಚಿತು ಬೇಡಿಕೆ; ಬಾಲಿವುಡ್​ನಿಂದ ಬಂತು ಎರಡೆರಡು ಆಫರ್​
ರಾಮ್ ಚರಣ್
TV9 Web
| Edited By: |

Updated on: Mar 30, 2022 | 4:21 PM

Share

ನಟ ರಾಮ್​ ಚರಣ್ (Ram Charan)​ ಅವರು ‘ಆರ್​ಆರ್​ಆರ್​’ ಸಿನಿಮಾದಲ್ಲಿ (RRR Movie) ಅಲ್ಲುರಿ ಸೀತಾರಾಮ ರಾಜು ಆಗಿ ಕಾಣಿಸಿಕೊಂಡಿದ್ದಾರೆ. ದೆಹಲಿಯ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಅವರು ಮಿಂಚಿದ್ದರು. ಅವರ ಪಾತ್ರ ನೋಡಿ ಮರುಳಾಗದವರೇ ಇಲ್ಲ. ಜ್ಯೂ.ಎನ್​ಟಿಆರ್​ಗಿಂತಲೂ ರಾಮ್​ ಚರಣ್ ಮಾಡಿರುವ ಪಾತ್ರಕ್ಕೆ ಹೆಚ್ಚು ತೂಕ ಇದೆ ಎನ್ನುವ ಅಭಿಪ್ರಾಯ ಸಿನಿ ವಲಯದಿಂದ ವ್ಯಕ್ತವಾಗಿದೆ. ‘ಆರ್​ಆರ್​ಆರ್​’ ಚಿತ್ರವನ್ನು ಬಾಲಿವುಡ್​ ಮಂದಿ ಕೂಡ ಮೆಚ್ಚಿಕೊಂಡಿದ್ದಾರೆ. ವಿಶೇಷ ಎಂದರೆ ಈ ಸಿನಿಮಾದಿಂದ ರಾಮ್​ ಚರಣ್​ ಅವರಿಗೆ ಬಾಲಿವುಡ್​ನಿಂದ (Bollywood) ಆಫರ್​ಗಳು ಹರಿದು ಬರುತ್ತಿವೆ. ಇದರಲ್ಲಿ ಅವರು ಯಾವುದನ್ನು ಒಪ್ಪಿಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ರಾಮ್​ ಚರಣ್​ ಅವರಿಗೆ ಬಾಲಿವುಡ್ ಹೊಸತಲ್ಲ. ಈ ಮೊದಲೇ ಅವರು ಬಾಲಿವುಡ್​ನಲ್ಲಿ ಅದೃಷ್ಟ ಪರೀಕ್ಷೆ ಮಾಡಿದ್ದರು. 2013ರಲ್ಲಿ ತೆರೆಗೆ ಬಂದ ‘ಝಂಜೀರ್​’ ಸಿನಿಮಾ ಮೂಲಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರ ಮೊದಲ ಹಿಂದಿ ಸಿನಿಮಾ ಸೋಲು ಕಂಡಿತ್ತು. ಆ ಬಳಿಕ ಅವರು ಬಾಲಿವುಡ್​ಗೆ ಹೋಗುವ ಪ್ರಯತ್ನವನ್ನು ಮಾಡಿಲ್ಲ. ಈಗ ‘ಆರ್​ಆರ್​ಆರ್’ ಸಿನಿಮಾದಿಂದ ಅವರ ಅದೃಷ್ಟ ಬದಲಾಗಿದೆ. ಬಾಲಿವುಡ್​ನ ಹಲವು ನಿರ್ಮಾಪಕರು ರಾಮ್​ ಚರಣ್​ ಅವರನ್ನು ಅಪ್ರೋಚ್ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ.

ಮೂಲಗಳ ಪ್ರಕಾರ ದೊಡ್ಡ ಪ್ರೊಡಕ್ಷನ್​ ಹೌಸ್​ ರಾಮ್​ ಚರಣ್​ ಅವರನ್ನು ಸಂಪರ್ಕಿಸಿದ್ದು, ಬ್ಯಾಕ್​ ಟು ಬ್ಯಾಕ್​ ಎರಡು ಸಿನಿಮಾಗಳನ್ನು ಮಾಡೋಕೆ ಕಾಲ್​ಶೀಟ್​ ಕೇಳಿದೆ ಎನ್ನಲಾಗಿದೆ. ಎರಡರ ಪೈಕಿ ಒಂದು ಸಿನಿಮಾ ಮಲ್ಟಿ ಸ್ಟಾರರ್​ ಚಿತ್ರ ಎನ್ನಲಾಗುತ್ತಿದೆ. ರಾಮ್ ಚರಣ್ ಕಥೆ ಕೇಳಿದ್ದಾರಾ? ಆ ಪ್ರಶ್ನೆಗೂ ಉತ್ತರವಿದೆ.

ರಾಮ್​ ಚರಣ್​ಗೆ ಸದ್ಯ ಸಿನಿಮಾದ ಒಂದೆಳೆ ಮಾತ್ರ ಹೇಳಲಾಗಿದೆ. ಖ್ಯಾತ ನಿರ್ದೇಶಕರೊಬ್ಬರು ರಾಮ್​ ಚರಣ್​ಗೆ ಕಥೆ ವಿವರಿಸಲಿದ್ದಾರೆ. ಆ ಬಳಿಕ ರಾಮ್​ ಚರಣ್​ ಕಥೆಗೆ ಅಧಿಕೃತ ಒಪ್ಪಿಗೆ ನೀಡಲಿದ್ದಾರೆ. ಒಂದೊಮ್ಮೆ ಇದು ನಿಜವೇ ಆದಲ್ಲಿ ಅವರು ಮತ್ತೆ ಬಾಲಿವುಡ್​ಗೆ ತೆರಳುತ್ತಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ಹಿಂದಿ ವರ್ಷನ್​ನಲ್ಲಿ ರಾಮ್​ ಚರಣ್​ ಪಾತ್ರಕ್ಕೆ ಅವರೇ ಡಬ್​ ಮಾಡಿದ್ದಾರೆ. ಇದು ಅವರಿಗೆ ಪ್ಲಸ್ ಆಗಿದೆ.

ದಕ್ಷಿಣ ಭಾರತದ ಸ್ಟಾರ್​ಗಳು ಬಾಲಿವುಡ್​ಗೆ ಕಾಲಿಡುವ ಪ್ರಯತ್ನ ಮಾಡಿದ್ದು, ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡಿದ್ದು ಇದೇ ಮೊದಲೇನಲ್ಲ. ಈ ಮೊದಲು ಅಲ್ಲು ಅರ್ಜುನ್​ ಅವರ ಬಗ್ಗೆ ಇದೇ ರೀತಿಯ ವರದಿ ಬಿಡುಗಡೆ ಆಗಿತ್ತು. ವಿಜಯ್​ ದೇವರಕೊಂಡ ‘ಲೈಗರ್​’ ಚಿತ್ರದ ಮೂಲಕ ಬಾಲಿವುಡ್​ನಲ್ಲಿ ಅದೃಷ್ಟಪರೀಕ್ಷೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಜತೆ ಕೈ ಜೋಡಿಸಲಿರುವ ರಾಮ್​ ಚರಣ್​? ಹೊಸ ಡೀಲ್​ ಸಲುವಾಗಿ ಮುಂಬೈನಲ್ಲಿ ಮಾತುಕತೆ

ಉಕ್ರೇನ್​ ಸೈನಿಕನಿಗೆ ಹಣ ಸಹಾಯ ಮಾಡಿದ ರಾಮ್​ ಚರಣ್​; ಆ ವ್ಯಕ್ತಿಯ ಜತೆ ಇದೆ ವಿಶೇಷ ನಂಟು

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್