AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ನಿಂದ ರಾಮ್​ ಚರಣ್​ಗೆ ಹೆಚ್ಚಿತು ಬೇಡಿಕೆ; ಬಾಲಿವುಡ್​ನಿಂದ ಬಂತು ಎರಡೆರಡು ಆಫರ್​

ರಾಮ್​ ಚರಣ್​ ಅವರಿಗೆ ಬಾಲಿವುಡ್ ಹೊಸತಲ್ಲ. ಈ ಮೊದಲೇ ಅವರು ಬಾಲಿವುಡ್​ನಲ್ಲಿ ಅದೃಷ್ಟ ಪರೀಕ್ಷೆ ಮಾಡಿದ್ದರು. 2013ರಲ್ಲಿ ತೆರೆಗೆ ಬಂದ ‘ಝಂಜೀರ್​’ ಸಿನಿಮಾ ಮೂಲಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟರು.

‘ಆರ್​ಆರ್​ಆರ್​’ನಿಂದ ರಾಮ್​ ಚರಣ್​ಗೆ ಹೆಚ್ಚಿತು ಬೇಡಿಕೆ; ಬಾಲಿವುಡ್​ನಿಂದ ಬಂತು ಎರಡೆರಡು ಆಫರ್​
ರಾಮ್ ಚರಣ್
TV9 Web
| Edited By: |

Updated on: Mar 30, 2022 | 4:21 PM

Share

ನಟ ರಾಮ್​ ಚರಣ್ (Ram Charan)​ ಅವರು ‘ಆರ್​ಆರ್​ಆರ್​’ ಸಿನಿಮಾದಲ್ಲಿ (RRR Movie) ಅಲ್ಲುರಿ ಸೀತಾರಾಮ ರಾಜು ಆಗಿ ಕಾಣಿಸಿಕೊಂಡಿದ್ದಾರೆ. ದೆಹಲಿಯ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಅವರು ಮಿಂಚಿದ್ದರು. ಅವರ ಪಾತ್ರ ನೋಡಿ ಮರುಳಾಗದವರೇ ಇಲ್ಲ. ಜ್ಯೂ.ಎನ್​ಟಿಆರ್​ಗಿಂತಲೂ ರಾಮ್​ ಚರಣ್ ಮಾಡಿರುವ ಪಾತ್ರಕ್ಕೆ ಹೆಚ್ಚು ತೂಕ ಇದೆ ಎನ್ನುವ ಅಭಿಪ್ರಾಯ ಸಿನಿ ವಲಯದಿಂದ ವ್ಯಕ್ತವಾಗಿದೆ. ‘ಆರ್​ಆರ್​ಆರ್​’ ಚಿತ್ರವನ್ನು ಬಾಲಿವುಡ್​ ಮಂದಿ ಕೂಡ ಮೆಚ್ಚಿಕೊಂಡಿದ್ದಾರೆ. ವಿಶೇಷ ಎಂದರೆ ಈ ಸಿನಿಮಾದಿಂದ ರಾಮ್​ ಚರಣ್​ ಅವರಿಗೆ ಬಾಲಿವುಡ್​ನಿಂದ (Bollywood) ಆಫರ್​ಗಳು ಹರಿದು ಬರುತ್ತಿವೆ. ಇದರಲ್ಲಿ ಅವರು ಯಾವುದನ್ನು ಒಪ್ಪಿಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ರಾಮ್​ ಚರಣ್​ ಅವರಿಗೆ ಬಾಲಿವುಡ್ ಹೊಸತಲ್ಲ. ಈ ಮೊದಲೇ ಅವರು ಬಾಲಿವುಡ್​ನಲ್ಲಿ ಅದೃಷ್ಟ ಪರೀಕ್ಷೆ ಮಾಡಿದ್ದರು. 2013ರಲ್ಲಿ ತೆರೆಗೆ ಬಂದ ‘ಝಂಜೀರ್​’ ಸಿನಿಮಾ ಮೂಲಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರ ಮೊದಲ ಹಿಂದಿ ಸಿನಿಮಾ ಸೋಲು ಕಂಡಿತ್ತು. ಆ ಬಳಿಕ ಅವರು ಬಾಲಿವುಡ್​ಗೆ ಹೋಗುವ ಪ್ರಯತ್ನವನ್ನು ಮಾಡಿಲ್ಲ. ಈಗ ‘ಆರ್​ಆರ್​ಆರ್’ ಸಿನಿಮಾದಿಂದ ಅವರ ಅದೃಷ್ಟ ಬದಲಾಗಿದೆ. ಬಾಲಿವುಡ್​ನ ಹಲವು ನಿರ್ಮಾಪಕರು ರಾಮ್​ ಚರಣ್​ ಅವರನ್ನು ಅಪ್ರೋಚ್ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ.

ಮೂಲಗಳ ಪ್ರಕಾರ ದೊಡ್ಡ ಪ್ರೊಡಕ್ಷನ್​ ಹೌಸ್​ ರಾಮ್​ ಚರಣ್​ ಅವರನ್ನು ಸಂಪರ್ಕಿಸಿದ್ದು, ಬ್ಯಾಕ್​ ಟು ಬ್ಯಾಕ್​ ಎರಡು ಸಿನಿಮಾಗಳನ್ನು ಮಾಡೋಕೆ ಕಾಲ್​ಶೀಟ್​ ಕೇಳಿದೆ ಎನ್ನಲಾಗಿದೆ. ಎರಡರ ಪೈಕಿ ಒಂದು ಸಿನಿಮಾ ಮಲ್ಟಿ ಸ್ಟಾರರ್​ ಚಿತ್ರ ಎನ್ನಲಾಗುತ್ತಿದೆ. ರಾಮ್ ಚರಣ್ ಕಥೆ ಕೇಳಿದ್ದಾರಾ? ಆ ಪ್ರಶ್ನೆಗೂ ಉತ್ತರವಿದೆ.

ರಾಮ್​ ಚರಣ್​ಗೆ ಸದ್ಯ ಸಿನಿಮಾದ ಒಂದೆಳೆ ಮಾತ್ರ ಹೇಳಲಾಗಿದೆ. ಖ್ಯಾತ ನಿರ್ದೇಶಕರೊಬ್ಬರು ರಾಮ್​ ಚರಣ್​ಗೆ ಕಥೆ ವಿವರಿಸಲಿದ್ದಾರೆ. ಆ ಬಳಿಕ ರಾಮ್​ ಚರಣ್​ ಕಥೆಗೆ ಅಧಿಕೃತ ಒಪ್ಪಿಗೆ ನೀಡಲಿದ್ದಾರೆ. ಒಂದೊಮ್ಮೆ ಇದು ನಿಜವೇ ಆದಲ್ಲಿ ಅವರು ಮತ್ತೆ ಬಾಲಿವುಡ್​ಗೆ ತೆರಳುತ್ತಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ಹಿಂದಿ ವರ್ಷನ್​ನಲ್ಲಿ ರಾಮ್​ ಚರಣ್​ ಪಾತ್ರಕ್ಕೆ ಅವರೇ ಡಬ್​ ಮಾಡಿದ್ದಾರೆ. ಇದು ಅವರಿಗೆ ಪ್ಲಸ್ ಆಗಿದೆ.

ದಕ್ಷಿಣ ಭಾರತದ ಸ್ಟಾರ್​ಗಳು ಬಾಲಿವುಡ್​ಗೆ ಕಾಲಿಡುವ ಪ್ರಯತ್ನ ಮಾಡಿದ್ದು, ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡಿದ್ದು ಇದೇ ಮೊದಲೇನಲ್ಲ. ಈ ಮೊದಲು ಅಲ್ಲು ಅರ್ಜುನ್​ ಅವರ ಬಗ್ಗೆ ಇದೇ ರೀತಿಯ ವರದಿ ಬಿಡುಗಡೆ ಆಗಿತ್ತು. ವಿಜಯ್​ ದೇವರಕೊಂಡ ‘ಲೈಗರ್​’ ಚಿತ್ರದ ಮೂಲಕ ಬಾಲಿವುಡ್​ನಲ್ಲಿ ಅದೃಷ್ಟಪರೀಕ್ಷೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಜತೆ ಕೈ ಜೋಡಿಸಲಿರುವ ರಾಮ್​ ಚರಣ್​? ಹೊಸ ಡೀಲ್​ ಸಲುವಾಗಿ ಮುಂಬೈನಲ್ಲಿ ಮಾತುಕತೆ

ಉಕ್ರೇನ್​ ಸೈನಿಕನಿಗೆ ಹಣ ಸಹಾಯ ಮಾಡಿದ ರಾಮ್​ ಚರಣ್​; ಆ ವ್ಯಕ್ತಿಯ ಜತೆ ಇದೆ ವಿಶೇಷ ನಂಟು

Follow Us
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?