AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ನಿಂದ ರಾಮ್​ ಚರಣ್​ಗೆ ಹೆಚ್ಚಿತು ಬೇಡಿಕೆ; ಬಾಲಿವುಡ್​ನಿಂದ ಬಂತು ಎರಡೆರಡು ಆಫರ್​

ರಾಮ್​ ಚರಣ್​ ಅವರಿಗೆ ಬಾಲಿವುಡ್ ಹೊಸತಲ್ಲ. ಈ ಮೊದಲೇ ಅವರು ಬಾಲಿವುಡ್​ನಲ್ಲಿ ಅದೃಷ್ಟ ಪರೀಕ್ಷೆ ಮಾಡಿದ್ದರು. 2013ರಲ್ಲಿ ತೆರೆಗೆ ಬಂದ ‘ಝಂಜೀರ್​’ ಸಿನಿಮಾ ಮೂಲಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟರು.

‘ಆರ್​ಆರ್​ಆರ್​’ನಿಂದ ರಾಮ್​ ಚರಣ್​ಗೆ ಹೆಚ್ಚಿತು ಬೇಡಿಕೆ; ಬಾಲಿವುಡ್​ನಿಂದ ಬಂತು ಎರಡೆರಡು ಆಫರ್​
ರಾಮ್ ಚರಣ್
TV9 Web
| Edited By: |

Updated on: Mar 30, 2022 | 4:21 PM

Share

ನಟ ರಾಮ್​ ಚರಣ್ (Ram Charan)​ ಅವರು ‘ಆರ್​ಆರ್​ಆರ್​’ ಸಿನಿಮಾದಲ್ಲಿ (RRR Movie) ಅಲ್ಲುರಿ ಸೀತಾರಾಮ ರಾಜು ಆಗಿ ಕಾಣಿಸಿಕೊಂಡಿದ್ದಾರೆ. ದೆಹಲಿಯ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಅವರು ಮಿಂಚಿದ್ದರು. ಅವರ ಪಾತ್ರ ನೋಡಿ ಮರುಳಾಗದವರೇ ಇಲ್ಲ. ಜ್ಯೂ.ಎನ್​ಟಿಆರ್​ಗಿಂತಲೂ ರಾಮ್​ ಚರಣ್ ಮಾಡಿರುವ ಪಾತ್ರಕ್ಕೆ ಹೆಚ್ಚು ತೂಕ ಇದೆ ಎನ್ನುವ ಅಭಿಪ್ರಾಯ ಸಿನಿ ವಲಯದಿಂದ ವ್ಯಕ್ತವಾಗಿದೆ. ‘ಆರ್​ಆರ್​ಆರ್​’ ಚಿತ್ರವನ್ನು ಬಾಲಿವುಡ್​ ಮಂದಿ ಕೂಡ ಮೆಚ್ಚಿಕೊಂಡಿದ್ದಾರೆ. ವಿಶೇಷ ಎಂದರೆ ಈ ಸಿನಿಮಾದಿಂದ ರಾಮ್​ ಚರಣ್​ ಅವರಿಗೆ ಬಾಲಿವುಡ್​ನಿಂದ (Bollywood) ಆಫರ್​ಗಳು ಹರಿದು ಬರುತ್ತಿವೆ. ಇದರಲ್ಲಿ ಅವರು ಯಾವುದನ್ನು ಒಪ್ಪಿಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ರಾಮ್​ ಚರಣ್​ ಅವರಿಗೆ ಬಾಲಿವುಡ್ ಹೊಸತಲ್ಲ. ಈ ಮೊದಲೇ ಅವರು ಬಾಲಿವುಡ್​ನಲ್ಲಿ ಅದೃಷ್ಟ ಪರೀಕ್ಷೆ ಮಾಡಿದ್ದರು. 2013ರಲ್ಲಿ ತೆರೆಗೆ ಬಂದ ‘ಝಂಜೀರ್​’ ಸಿನಿಮಾ ಮೂಲಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರ ಮೊದಲ ಹಿಂದಿ ಸಿನಿಮಾ ಸೋಲು ಕಂಡಿತ್ತು. ಆ ಬಳಿಕ ಅವರು ಬಾಲಿವುಡ್​ಗೆ ಹೋಗುವ ಪ್ರಯತ್ನವನ್ನು ಮಾಡಿಲ್ಲ. ಈಗ ‘ಆರ್​ಆರ್​ಆರ್’ ಸಿನಿಮಾದಿಂದ ಅವರ ಅದೃಷ್ಟ ಬದಲಾಗಿದೆ. ಬಾಲಿವುಡ್​ನ ಹಲವು ನಿರ್ಮಾಪಕರು ರಾಮ್​ ಚರಣ್​ ಅವರನ್ನು ಅಪ್ರೋಚ್ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ.

ಮೂಲಗಳ ಪ್ರಕಾರ ದೊಡ್ಡ ಪ್ರೊಡಕ್ಷನ್​ ಹೌಸ್​ ರಾಮ್​ ಚರಣ್​ ಅವರನ್ನು ಸಂಪರ್ಕಿಸಿದ್ದು, ಬ್ಯಾಕ್​ ಟು ಬ್ಯಾಕ್​ ಎರಡು ಸಿನಿಮಾಗಳನ್ನು ಮಾಡೋಕೆ ಕಾಲ್​ಶೀಟ್​ ಕೇಳಿದೆ ಎನ್ನಲಾಗಿದೆ. ಎರಡರ ಪೈಕಿ ಒಂದು ಸಿನಿಮಾ ಮಲ್ಟಿ ಸ್ಟಾರರ್​ ಚಿತ್ರ ಎನ್ನಲಾಗುತ್ತಿದೆ. ರಾಮ್ ಚರಣ್ ಕಥೆ ಕೇಳಿದ್ದಾರಾ? ಆ ಪ್ರಶ್ನೆಗೂ ಉತ್ತರವಿದೆ.

ರಾಮ್​ ಚರಣ್​ಗೆ ಸದ್ಯ ಸಿನಿಮಾದ ಒಂದೆಳೆ ಮಾತ್ರ ಹೇಳಲಾಗಿದೆ. ಖ್ಯಾತ ನಿರ್ದೇಶಕರೊಬ್ಬರು ರಾಮ್​ ಚರಣ್​ಗೆ ಕಥೆ ವಿವರಿಸಲಿದ್ದಾರೆ. ಆ ಬಳಿಕ ರಾಮ್​ ಚರಣ್​ ಕಥೆಗೆ ಅಧಿಕೃತ ಒಪ್ಪಿಗೆ ನೀಡಲಿದ್ದಾರೆ. ಒಂದೊಮ್ಮೆ ಇದು ನಿಜವೇ ಆದಲ್ಲಿ ಅವರು ಮತ್ತೆ ಬಾಲಿವುಡ್​ಗೆ ತೆರಳುತ್ತಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ಹಿಂದಿ ವರ್ಷನ್​ನಲ್ಲಿ ರಾಮ್​ ಚರಣ್​ ಪಾತ್ರಕ್ಕೆ ಅವರೇ ಡಬ್​ ಮಾಡಿದ್ದಾರೆ. ಇದು ಅವರಿಗೆ ಪ್ಲಸ್ ಆಗಿದೆ.

ದಕ್ಷಿಣ ಭಾರತದ ಸ್ಟಾರ್​ಗಳು ಬಾಲಿವುಡ್​ಗೆ ಕಾಲಿಡುವ ಪ್ರಯತ್ನ ಮಾಡಿದ್ದು, ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡಿದ್ದು ಇದೇ ಮೊದಲೇನಲ್ಲ. ಈ ಮೊದಲು ಅಲ್ಲು ಅರ್ಜುನ್​ ಅವರ ಬಗ್ಗೆ ಇದೇ ರೀತಿಯ ವರದಿ ಬಿಡುಗಡೆ ಆಗಿತ್ತು. ವಿಜಯ್​ ದೇವರಕೊಂಡ ‘ಲೈಗರ್​’ ಚಿತ್ರದ ಮೂಲಕ ಬಾಲಿವುಡ್​ನಲ್ಲಿ ಅದೃಷ್ಟಪರೀಕ್ಷೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಜತೆ ಕೈ ಜೋಡಿಸಲಿರುವ ರಾಮ್​ ಚರಣ್​? ಹೊಸ ಡೀಲ್​ ಸಲುವಾಗಿ ಮುಂಬೈನಲ್ಲಿ ಮಾತುಕತೆ

ಉಕ್ರೇನ್​ ಸೈನಿಕನಿಗೆ ಹಣ ಸಹಾಯ ಮಾಡಿದ ರಾಮ್​ ಚರಣ್​; ಆ ವ್ಯಕ್ತಿಯ ಜತೆ ಇದೆ ವಿಶೇಷ ನಂಟು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?