AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡೇಶ್ವರಿ ದರ್ಶನ ಪಡೆದ ರಾಮ್​ ಚರಣ್​; ಮೈಸೂರಿನಲ್ಲಿ ‘ಗೇಮ್​ ಚೇಂಜರ್​’ ಚಿತ್ರೀಕರಣ

ಬಹುನಿರೀಕ್ಷಿತ ‘ಗೇಮ್​ ಚೇಂಜರ್​’ ಸಿನಿಮಾ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ಶೂಟಿಂಗ್ ನಡುವೆ ಬಿಡುವು ಮಾಡಿಕೊಂಡ ನಟ ರಾಮ್​ ಚರಣ್​ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾರೆ. ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಅವರ ಜೊತೆ ‘ಗೇಮ್​ ಚೇಂಜರ್​’ ಚಿತ್ರತಂಡದವರು ಕೂಡ ಸಾಥ್​ ನೀಡಿದ್ದಾರೆ.

ಚಾಮುಂಡೇಶ್ವರಿ ದರ್ಶನ ಪಡೆದ ರಾಮ್​ ಚರಣ್​; ಮೈಸೂರಿನಲ್ಲಿ ‘ಗೇಮ್​ ಚೇಂಜರ್​’ ಚಿತ್ರೀಕರಣ
ರಾಮ್​ ಚರಣ್​
ಮದನ್​ ಕುಮಾರ್​
|

Updated on:Dec 03, 2023 | 9:13 AM

Share

ಮೈಸೂರು: ತೆಲುಗು ಚಿತ್ರರಂಗದ ಖ್ಯಾತ ನಟ ರಾಮ್​ ಚರಣ್​ (Ram Charan) ಅವರ ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಭಾನುವಾರ (ಡಿಸೆಂಬರ್​ 3) ಮುಂಜಾನೆ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ‘ಗೇಮ್​ ಚೇಂಜರ್​’ (Ram Charan) ಸಿನಿಮಾದ ಶೂಟಿಂಗ್​ ಸಲುವಾಗಿ ರಾಮ್​ ಚರಣ್​ ಅವರು ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಚಿತ್ರತಂಡದ ಜೊತೆ ಬಂದು ದೇವರ ದರ್ಶನ ಪಡೆದಿದ್ದಾರೆ. ನಾಡದೇವತೆಗೆ ನಮಿಸಲು ಬಂದಿರುವ ರಾಮ್ ಚರಣ್​ ಅವರ ವಿಡಿಯೋ ವೈರಲ್​ ಆಗಿದೆ. ‘ಗೇಮ್​ ಚೇಂಜರ್​’ ಸಿನಿಮಾದ ಶೂಟಿಂಗ್​ ಮೈಸೂರಿನಲ್ಲಿ ನಡೆಯುತ್ತಿರುವುದರಿಂದ ಈ ಸಿನಿಮಾ ಮೇಲೆ ಕನ್ನಡದ ಸಿನಿಪ್ರಿಯರು ಕೂಡ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹಲವು ದಿನಗಳಿಂದ ರಾಮ್​ ಚರಣ್​ ಅವರು ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಆದರೆ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಸಲುವಾಗಿ ಅವರು ಸಣ್ಣ ಬ್ರೇಕ್​ ಪಡೆದುಕೊಂಡಿದ್ದರು. ಮೈಸೂರಿನಲ್ಲಿ ನಡೆಯುತ್ತಿದ್ದ ‘ಗೇಮ್​ ಚೇಂಜರ್​’ ಸಿನಿಮಾದ ಶೂಟಿಂಗ್​ ಮೊಟಕುಗೊಳಿಸಿ ಅವರು ಹೈದರಾಬಾದ್​ಗೆ ತೆರಳಿದ್ದರು. ವಿಮಾನ ನಿಲ್ದಾಣದಲ್ಲಿ ಅವರು ಕಾಣಿಸಿಕೊಂಡಿದ್ದರು. ಆ ಸಂದರ್ಭದ ವಿಡಿಯೋ ವೈರಲ್​ ಆಗಿತ್ತು. ನವೆಂಬರ್​ 30ರಂದು ಮತದಾನ ಮಾಡಿದ ಬಳಿಕ ಅವರು ಮೈಸೂರಿಗೆ ವಾಪಸ್ಸಾಗಿದ್ದಾರೆ.

ಇದನ್ನೂ ಓದಿ: ಬರಿಗಾಲಲ್ಲಿ ಬಂದು ಮುಂಬೈ ಸಿದ್ಧಿ ನಿನಾಯಕನ ದರ್ಶನ ಪಡೆದ ರಾಮ್ ಚರಣ್

‘ಆರ್​ಆರ್​ಆರ್​’ ಸಿನಿಮಾಗೆ 2022ರಲ್ಲಿ ಅಭೂತಪೂರ್ವ ಗೆಲುವು ಸಿಕ್ಕಿತು. ಆ ಸಿನಿಮಾದ ಹಾಡಿಗೆ ಆಸ್ಕರ್​ ಪ್ರಶಸ್ತಿ ಕೂಡ ಒಲಿದುಬಂತು. ಆ ಬಳಿಕ ರಾಮ್​ ಚರಣ್​ ಅವರು ಕೈಗೆತ್ತಿಕೊಂಡ ಸಿನಿಮಾವೇ ‘ಗೇಮ್​ ಚೇಂಜರ್​’. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಶಂಕರ್​ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ದಿಲ್​ ರಾಜು ಅವರು ಬಂಡವಾಳ ಹೂಡಿದ್ದಾರೆ. ರಾಮ್​ ಚರಣ್​ ಅವರಿಗೆ ಜೋಡಿಯಾಗಿ ಬಾಲಿವುಡ್​ ಬೆಡಗಿ ಕಿಯಾರಾ ಅಡ್ವಾಣಿ ಅವರು ನಟಿಸುತ್ತಿದ್ದಾರೆ. ಮೈಸೂರಿನಲ್ಲಿ ಶೂಟಿಂಗ್​ ಮಾಡುತ್ತಿರುವುದರಿಂದ ಈ ಸಿನಿಮಾದ ಕಥೆಗೆ ಕರ್ನಾಟಕದ ಕನೆಕ್ಷನ್​ ಏನಿರಬಹುದು ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಸಿನಿಮಾ ಶೂಟಿಂಗ್ ಮುಗಿಸಿ ಕುಟುಂಬ ಸಮೇತ ಇಟಲಿಗೆ ಹೊರಟ ರಾಮ್ ಚರಣ್

‘ಗೇಮ್​ ಚೇಂಜರ್​’ ಸಿನಿಮಾದಲ್ಲಿ ರಾಜಕೀಯ ಮತ್ತು ಎಲೆಕ್ಷನ್​ ಕುರಿತಾದ ಕಥೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಬಿಡುಗಡೆ ಆಗಿರುವ ಫಸ್ಟ್​ ಲುಕ್​ ಗಮನ ಸೆಳೆದಿದೆ. ಈ ಸಿನಿಮಾದ ಮುಹೂರ್ತ ಸಮಾರಂಭ ಹೈದರಾಬಾದ್​ನ ಅನ್ನಪೂರ್ಣ ಸ್ಟುಡಿಯೋದಲ್ಲಿ ನಡೆದಿತ್ತು. ಅದರಲ್ಲಿ ಮೆಗಾ ಸ್ಟಾರ್​ ಚಿರಂಜೀವಿ, ರಣವೀರ್​ ಸಿಂಗ್​, ಎಸ್​.ಎಸ್​. ರಾಜಮೌಳಿ ಮುಂತಾದ ಗಣ್ಯರು ಭಾಗಿ ಆಗಿದ್ದರು. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಥಮನ್​ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:12 am, Sun, 3 December 23

Follow Us
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!