ಚಾಮುಂಡೇಶ್ವರಿ ದರ್ಶನ ಪಡೆದ ರಾಮ್​ ಚರಣ್​; ಮೈಸೂರಿನಲ್ಲಿ ‘ಗೇಮ್​ ಚೇಂಜರ್​’ ಚಿತ್ರೀಕರಣ

|

Updated on: Dec 03, 2023 | 9:13 AM

ಬಹುನಿರೀಕ್ಷಿತ ‘ಗೇಮ್​ ಚೇಂಜರ್​’ ಸಿನಿಮಾ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ಶೂಟಿಂಗ್ ನಡುವೆ ಬಿಡುವು ಮಾಡಿಕೊಂಡ ನಟ ರಾಮ್​ ಚರಣ್​ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾರೆ. ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಅವರ ಜೊತೆ ‘ಗೇಮ್​ ಚೇಂಜರ್​’ ಚಿತ್ರತಂಡದವರು ಕೂಡ ಸಾಥ್​ ನೀಡಿದ್ದಾರೆ.

ಚಾಮುಂಡೇಶ್ವರಿ ದರ್ಶನ ಪಡೆದ ರಾಮ್​ ಚರಣ್​; ಮೈಸೂರಿನಲ್ಲಿ ‘ಗೇಮ್​ ಚೇಂಜರ್​’ ಚಿತ್ರೀಕರಣ
ರಾಮ್​ ಚರಣ್​
Follow us on

ಮೈಸೂರು: ತೆಲುಗು ಚಿತ್ರರಂಗದ ಖ್ಯಾತ ನಟ ರಾಮ್​ ಚರಣ್​ (Ram Charan) ಅವರ ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಭಾನುವಾರ (ಡಿಸೆಂಬರ್​ 3) ಮುಂಜಾನೆ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ‘ಗೇಮ್​ ಚೇಂಜರ್​’ (Ram Charan) ಸಿನಿಮಾದ ಶೂಟಿಂಗ್​ ಸಲುವಾಗಿ ರಾಮ್​ ಚರಣ್​ ಅವರು ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಚಿತ್ರತಂಡದ ಜೊತೆ ಬಂದು ದೇವರ ದರ್ಶನ ಪಡೆದಿದ್ದಾರೆ. ನಾಡದೇವತೆಗೆ ನಮಿಸಲು ಬಂದಿರುವ ರಾಮ್ ಚರಣ್​ ಅವರ ವಿಡಿಯೋ ವೈರಲ್​ ಆಗಿದೆ. ‘ಗೇಮ್​ ಚೇಂಜರ್​’ ಸಿನಿಮಾದ ಶೂಟಿಂಗ್​ ಮೈಸೂರಿನಲ್ಲಿ ನಡೆಯುತ್ತಿರುವುದರಿಂದ ಈ ಸಿನಿಮಾ ಮೇಲೆ ಕನ್ನಡದ ಸಿನಿಪ್ರಿಯರು ಕೂಡ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹಲವು ದಿನಗಳಿಂದ ರಾಮ್​ ಚರಣ್​ ಅವರು ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಆದರೆ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಸಲುವಾಗಿ ಅವರು ಸಣ್ಣ ಬ್ರೇಕ್​ ಪಡೆದುಕೊಂಡಿದ್ದರು. ಮೈಸೂರಿನಲ್ಲಿ ನಡೆಯುತ್ತಿದ್ದ ‘ಗೇಮ್​ ಚೇಂಜರ್​’ ಸಿನಿಮಾದ ಶೂಟಿಂಗ್​ ಮೊಟಕುಗೊಳಿಸಿ ಅವರು ಹೈದರಾಬಾದ್​ಗೆ ತೆರಳಿದ್ದರು. ವಿಮಾನ ನಿಲ್ದಾಣದಲ್ಲಿ ಅವರು ಕಾಣಿಸಿಕೊಂಡಿದ್ದರು. ಆ ಸಂದರ್ಭದ ವಿಡಿಯೋ ವೈರಲ್​ ಆಗಿತ್ತು. ನವೆಂಬರ್​ 30ರಂದು ಮತದಾನ ಮಾಡಿದ ಬಳಿಕ ಅವರು ಮೈಸೂರಿಗೆ ವಾಪಸ್ಸಾಗಿದ್ದಾರೆ.

ಇದನ್ನೂ ಓದಿ: ಬರಿಗಾಲಲ್ಲಿ ಬಂದು ಮುಂಬೈ ಸಿದ್ಧಿ ನಿನಾಯಕನ ದರ್ಶನ ಪಡೆದ ರಾಮ್ ಚರಣ್

‘ಆರ್​ಆರ್​ಆರ್​’ ಸಿನಿಮಾಗೆ 2022ರಲ್ಲಿ ಅಭೂತಪೂರ್ವ ಗೆಲುವು ಸಿಕ್ಕಿತು. ಆ ಸಿನಿಮಾದ ಹಾಡಿಗೆ ಆಸ್ಕರ್​ ಪ್ರಶಸ್ತಿ ಕೂಡ ಒಲಿದುಬಂತು. ಆ ಬಳಿಕ ರಾಮ್​ ಚರಣ್​ ಅವರು ಕೈಗೆತ್ತಿಕೊಂಡ ಸಿನಿಮಾವೇ ‘ಗೇಮ್​ ಚೇಂಜರ್​’. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಶಂಕರ್​ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ದಿಲ್​ ರಾಜು ಅವರು ಬಂಡವಾಳ ಹೂಡಿದ್ದಾರೆ. ರಾಮ್​ ಚರಣ್​ ಅವರಿಗೆ ಜೋಡಿಯಾಗಿ ಬಾಲಿವುಡ್​ ಬೆಡಗಿ ಕಿಯಾರಾ ಅಡ್ವಾಣಿ ಅವರು ನಟಿಸುತ್ತಿದ್ದಾರೆ. ಮೈಸೂರಿನಲ್ಲಿ ಶೂಟಿಂಗ್​ ಮಾಡುತ್ತಿರುವುದರಿಂದ ಈ ಸಿನಿಮಾದ ಕಥೆಗೆ ಕರ್ನಾಟಕದ ಕನೆಕ್ಷನ್​ ಏನಿರಬಹುದು ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಸಿನಿಮಾ ಶೂಟಿಂಗ್ ಮುಗಿಸಿ ಕುಟುಂಬ ಸಮೇತ ಇಟಲಿಗೆ ಹೊರಟ ರಾಮ್ ಚರಣ್

‘ಗೇಮ್​ ಚೇಂಜರ್​’ ಸಿನಿಮಾದಲ್ಲಿ ರಾಜಕೀಯ ಮತ್ತು ಎಲೆಕ್ಷನ್​ ಕುರಿತಾದ ಕಥೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಬಿಡುಗಡೆ ಆಗಿರುವ ಫಸ್ಟ್​ ಲುಕ್​ ಗಮನ ಸೆಳೆದಿದೆ. ಈ ಸಿನಿಮಾದ ಮುಹೂರ್ತ ಸಮಾರಂಭ ಹೈದರಾಬಾದ್​ನ ಅನ್ನಪೂರ್ಣ ಸ್ಟುಡಿಯೋದಲ್ಲಿ ನಡೆದಿತ್ತು. ಅದರಲ್ಲಿ ಮೆಗಾ ಸ್ಟಾರ್​ ಚಿರಂಜೀವಿ, ರಣವೀರ್​ ಸಿಂಗ್​, ಎಸ್​.ಎಸ್​. ರಾಜಮೌಳಿ ಮುಂತಾದ ಗಣ್ಯರು ಭಾಗಿ ಆಗಿದ್ದರು. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಥಮನ್​ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:12 am, Sun, 3 December 23