Ram Charan: ನಿಜಕ್ಕೂ ಆಸ್ಕರ್​ ಸಮಾರಂಭದಲ್ಲಿ ನಡೆದಿದ್ದು ಏನು? ಬಹುದಿನಗಳ ಬಳಿಕ ಬಾಯ್ಬಿಟ್ಟ ರಾಮ್ ಚರಣ್​

|

Updated on: Apr 17, 2023 | 3:18 PM

Naatu Naatu Song: ಮಾರ್ಚ್​ 12ರಂದು ಲಾಸ್​ ಏಂಜಲಿಸ್​ನಲ್ಲಿ ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಅಂದು ವೇದಿಕೆಯಲ್ಲಿ ಹೆಜ್ಜೆ ಹಾಕಲು ರಾಮ್​ ಚರಣ್​ ಸಿದ್ಧರಾಗಿದ್ದರು. ಆದರೆ ಅವಕಾಶ ಸಿಗಲಿಲ್ಲ.

Ram Charan: ನಿಜಕ್ಕೂ ಆಸ್ಕರ್​ ಸಮಾರಂಭದಲ್ಲಿ ನಡೆದಿದ್ದು ಏನು? ಬಹುದಿನಗಳ ಬಳಿಕ ಬಾಯ್ಬಿಟ್ಟ ರಾಮ್ ಚರಣ್​
ರಾಮ್ ಚರಣ್
Follow us on

​ಭಾರತದ ಸಿನಿಮಾಗಳು ಆಸ್ಕರ್​ ಗೆಲ್ಲಬೇಕು ಎಂಬುದು ಭಾರತೀಯರ ಬಹು ವರ್ಷಗಳ ಕನಸಾಗಿತ್ತು. ಆ ಕನಸನ್ನು ‘ಆರ್​ಆರ್​ಆರ್​’ ಸಿನಿಮಾ ನನಸು ಮಾಡಿತು. ಈ ಸಿನಿಮಾದ ‘ನಾಟು ನಾಟು..’ ಹಾಡಿಗೆ ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿ (Oscar Awards) ಸಿಕ್ಕಿದ್ದು ಭಾರತೀಯರಿಗೆ ಹೆಮ್ಮೆ ತಂದಿದೆ. ಆದರೆ ಈ ಪ್ರಶಸ್ತಿ ಪಡೆದಿದ್ದರ ಹಿಂದೆ ಲಾಬಿ ಇದೆಯೇ ಎಂದು ಕೂಡ ಕೆಲವರು ಅನುಮಾನ ವ್ಯಕ್ತಪಡಿಸಿದ್ದುಂಟು. ಇನ್ನು, ಆಸ್ಕರ್​ ವೇದಿಕೆಯಲ್ಲಿ ‘ನಾಟು ನಾಟು..’ (Naatu Naatu Song) ಹಾಡಿಗೆ ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅವರು ಡ್ಯಾನ್ಸ್​ ಮಾಡುತ್ತಾರೆ ಎಂದು ಕೂಡ ಹೇಳಲಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಅವರಿಗೆ ಅಲ್ಲಿ ಡ್ಯಾನ್ಸ್​ ಮಾಡಲು ಯಾಕೆ ಅವಕಾಶ ಸಿಗಲಿಲ್ಲ ಎಂಬ ಪ್ರಶ್ನೆ ಎದ್ದಿತ್ತು. ಈಗ ಆ ಪ್ರಶ್ನೆಗೆ ರಾಮ್​ ಚರಣ್​ ಉತ್ತರ ನೀಡಿದ್ದಾರೆ. ‘ನಮ್ಮನ್ನು ಆಸ್ಕರ್​ ವೇದಿಕೆಗೆ ಕರೆಯುತ್ತಾರೆ ಎಂದು ಕಾಯುತ್ತಿದ್ದೆ. ಆದರೆ ಅವರು ಕರೆಯಲೇ ಇಲ್ಲ’ ಎಂದು ರಾಮ್​ ಚರಣ್​ (Ram Charan) ಹೇಳಿದ್ದಾರೆ. ಆದರೆ ಈ ಮೊದಲು ಜೂನಿಯರ್​ ಎನ್​ಟಿಆರ್​ ನೀಡಿದ ಹೇಳಿಕೆಯೇ ಬೇರೆ ರೀತಿ ಇತ್ತು.

‘ಶೇ.100ರಷ್ಟು ರೆಡಿಯಾಗಿದ್ದೆ’ ಎಂದ ರಾಮ್​ ಚರಣ್​:

ಮಾರ್ಚ್​ 12ರಂದು ಲಾಸ್​ ಏಂಜಲಿಸ್​ನ ಡಾಲ್ಬಿ ಥಿಯೇಟರ್​ನಲ್ಲಿ ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಅಂದು ವೇದಿಕೆಯಲ್ಲಿ ಹೆಜ್ಜೆ ಹಾಕಲು ರಾಮ್​ ಚರಣ್​ ಸಿದ್ಧರಾಗಿದ್ದರು. ಆದರೆ ಅಲ್ಲಿ ಆಗಿದ್ದೇ ಬೇರೆ. ‘ಅವರು ನಮ್ಮನ್ನು ಕರೆಯುತ್ತಾರೆ ಅಂತ ನಾನು ಶೇ.100ರಷ್ಟು ರೆಡಿಯಾಗಿದ್ದೆ. ಆದರೆ ನಿಜಕ್ಕೂ ಏನಾಯಿತೋ ನನಗೆ ತಿಳಿದಿಲ್ಲ. ಅವರು ನಮ್ಮನ್ನು ಕರೆಯಲಿಲ್ಲ. ಆ ಬಗ್ಗೆ ಈಗ ಮಾತನಾಡೋದು ಬೇಡ. ವೇದಿಕೆಯಲ್ಲಿ ಡ್ಯಾನ್ಸ್​ ಮಾಡಿದ ತಂಡದವರು ತುಂಬ ಚೆನ್ನಾಗಿ ಮಾಡಿದರು. ನಮಗಿಂತಲೂ ಚೆನ್ನಾಗಿ ಡ್ಯಾನ್ಸ್​ ಮಾಡಿದರು’ ಎಂದು ರಾಮ್​ ಚರಣ್​ ಹೇಳಿದ್ದಾರೆ.

ಇದನ್ನೂ ಓದಿ: Yentamma Song: ಪಂಚೆ ಎತ್ತಿಕಟ್ಟಿ ಕುಣಿದ ಸಲ್ಮಾನ್​ ಖಾನ್​, ರಾಮ್​ ಚರಣ್​, ವೆಂಕಟೇಶ್​; ಧೂಳೆಬ್ಬಿಸಿದ ‘ಯೆಂಟಮ್ಮಾ’ ಹಾಡು

ಇದನ್ನೂ ಓದಿ
ನರ್ತನ್ ಚಿತ್ರಕ್ಕೆ ರಾಮ್​ ಚರಣ್ ಗ್ರೀನ್ ಸಿಗ್ನಲ್​? ಕೇಳಿ ಬರ್ತಿದೆ ಹೊಸ ಸುದ್ದಿ
‘ಆರ್​ಆರ್​ಆರ್​’ನಿಂದ ರಾಮ್​ ಚರಣ್​ಗೆ ಹೆಚ್ಚಿತು ಬೇಡಿಕೆ; ಬಾಲಿವುಡ್​ನಿಂದ ಬಂತು ಎರಡೆರಡು ಆಫರ್​
ನೆಟ್​ಫ್ಲಿಕ್ಸ್​ ಜತೆ ಕೈ ಜೋಡಿಸಲಿರುವ ರಾಮ್​ ಚರಣ್​? ಹೊಸ ಡೀಲ್​ ಸಲುವಾಗಿ ಮುಂಬೈನಲ್ಲಿ ಮಾತುಕತೆ
ವಿವಾದದಲ್ಲಿ ರಾಮ್​ ಚರಣ್​ ಪತ್ನಿ ಉಪಾಸನಾ; ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ

‘ತಯಾರಿ ಮಾಡಿಕೊಂಡಿರಲಿಲ್ಲ’ ಎಂದಿದ್ದ ಜೂ.​ ಎನ್​ಟಿಆರ್​:

ಆಸ್ಕರ್​ ವೇದಿಕೆಯಲ್ಲಿ ‘ನಾಟು ನಾಟು..’ ಹಾಡಿಗೆ ಯಾಕೆ ಡ್ಯಾನ್ಸ್​ ಮಾಡಿಲ್ಲ ಎಂಬುದಕ್ಕೆ ಜ್ಯೂನಿಯರ್​ ಎನ್​ಟಿಆರ್​ ಅವರು ಬೇರೆಯದೇ ಕಾರಣ ನೀಡಿದ್ದರು. ಸೂಕ್ತ ತಯಾರಿ ಮಾಡಿಕೊಳ್ಳದ ಕಾರಣ ತಾವು ಡ್ಯಾನ್ಸ್​ ಮಾಡಿಲ್ಲ ಎಂದು ಅವರು ಹೇಳಿದ್ದರು. ‘ನಾನು ಡ್ಯಾನ್ಸ್​ ಮಾಡಬೇಕು ಅಂತ ಅಂದುಕೊಂಡಿದ್ದೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಯಾಕೆಂದರೆ ರಿಹರ್ಸಲ್​ ಮಾಡಲು ನಮಗೆ ಸಮಯ ಸಿಕ್ಕಿಲ್ಲ. ನಾವು ಸೂಕ್ತ ತಯಾರಿ ಮಾಡಿಕೊಳ್ಳದೇ ಜಗತ್ತಿನ ಅತಿ ದೊಡ್ಡ ವೇದಿಕೆ ಏರಲು ಆಗುವುದಿಲ್ಲ. ನಾನು ಬ್ಯುಸಿ ಆಗಿದ್ದೆ. ರಾಮ್​ ಚರಣ್​ ಕೂಡ ಮೊದಲೇ ಒಪ್ಪಿಕೊಂಡ ಕೆಲಸಗಳ ಕಾರಣದಿಂದ ಬ್ಯುಸಿ ಆಗಿದ್ದರು. ರಿಹರ್ಸಲ್​ ಮಾಡಿಲ್ಲದ ಕಾರಣ ನಾವು ವೇದಿಕೆಯಲ್ಲಿ ನಾಟು ನಾಟು ಹಾಡಿಗೆ ಪರ್ಫಾರ್ಮ್​ ಮಾಡುವುದಿಲ್ಲ’ ಅಂತ ಜೂ.​ ಎನ್​ಟಿಆರ್​ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.