Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಪತ್ನಿಯಿಂದ ಜಾನ್ವಿ ಕಪೂರ್​ಗೆ ಸಿಕ್ತು ವಿಶೇಷ ಗಿಫ್ಟ್

Ram Charan-Upasana Konidela: ರಾಮ್ ಚರಣ್ ಮತ್ತು ಬಾಲಿವುಡ್ ಬೆಡಗಿ ಜಾನ್ಹವಿ ಕಪೂರ್ ಹೊಸ ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ. ಇದೇ ಸಿನಿಮಾನಲ್ಲಿ ಶಿವರಾಜ್ ಕುಮಾರ್ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ನಾಯಕಿ ಜಾನ್ಹವಿ ಕಪೂರ್​ಗೆ ರಾಮ್ ಚರಣ್ ಪತ್ನಿ, ಉದ್ಯಮಿ ಉಪಾಸನಾ ಕೋನಿಡೆಲ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಏನು ಆ ಉಡುಗೊರೆ ಇಲ್ಲಿದೆ ನೋಡಿ ಮಾಹಿತಿ...

ರಾಮ್ ಚರಣ್ ಪತ್ನಿಯಿಂದ ಜಾನ್ವಿ ಕಪೂರ್​ಗೆ ಸಿಕ್ತು ವಿಶೇಷ ಗಿಫ್ಟ್
Ram Charan Upasana Konidela
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on: Mar 20, 2025 | 11:17 PM

ರಾಮ್ ಚರಣ್ ನಟನೆಯ ‘ಆರ್​ಸಿ 16’ ಚಿತ್ರದ ಶೂಟ್ ಭರದಿಂದ ಸಾಗುತ್ತಿದೆ. ಬುಚಿ ಬಾಬು ಸನಾ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಾ ಇದ್ದಾರೆ. ಜಾನ್ವಿ ಕಪೂರ್ ಅವರು ಈ ಚಿತ್ರಕ್ಕೆ ನಾಯಕಿ. ಸದ್ಯ ಹೈದರಾಬಾದ್​ನಲ್ಲಿ ಚಿತ್ರದ ಶೂಟ್ ಭರದಿಂದ ಸಾಗುತ್ತಿದೆ ಎನ್ನಲಾಗಿದೆ. ರಾಮ್ ಚರಣ್ ಸಿನಿಮಾ ಸೆಟ್​​ನಲ್ಲಿ ಜಾನ್ವಿ ಕಪೂರ್ ಅವರಿಗೆ ಈಗ ವಿಶೇಷ ಗಿಫ್ಟ್ ಸಿಕ್ಕಿದೆ. ರಾಮ್ ಚರಣ್ ಪತ್ನಿ ಉಪಾಸನಾ ಅವರು ಈ ಉಡುಗೊರೆಯನ್ನು ಕೊಟ್ಟಿದ್ದಾರೆ.

ಸೆಟ್​ನ ಬ್ರೇಕ್ ಸಂದರ್ಭದಲ್ಲಿ ಜಾನ್ವಿ ಅವರನ್ನು ಉಪಾಸನಾ ಅವರು ಭೇಟಿ ಆಗಿದ್ದಾರೆ. ಈ ವೇಳೆ ‘ಅತ್ತಮ್ಮಾ ಕಿಚನ್’ ಕಡೆಯಿಂದ ಬಾಕ್ಸ್ ನೀಡಲಾಗಿದೆ. ರಾಮ್ ಚರಣ್ ತಾಯಿ ಸುರೇಖಾ ಕೊನಿಡೆಲಾ ಅವರು ಮಾಡಿರುವ ವಿಶೇಷ ರೆಸಿಪಿ ಇದಾಗಿದೆ. ಈ ಕ್ಲೌಡ್ ಕಿಚನ್ ಕಡೆಯಿಂದ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ಹಂಚಿಕೊಳ್ಳಲಾಗಿದೆ.

ಜಾನ್ವಿ ಕಪೂರ್ ಅವರು ಅನೇಕ ಬ್ರ್ಯಾಂಡ್​ಗಳ ಪ್ರಚಾರ ಮಾಡುತ್ತಾ ಇದ್ದಾರೆ. ಈಗ ಅವರು ಈ ಬ್ರ್ಯಾಂಡ್​ನ ಪ್ರಚಾರವನ್ನು ಕೂಡ ಮಾಡುತ್ತಾರಾ ಎನ್ನುವ ಕುತೂಹಲ ಮೂಡಿದೆ. ಆ ಬಗ್ಗೆಯೂ ಮುಂದಿನ ದಿನಗಳಲ್ಲು ಮಾತುಕತೆ ನಡೆಯಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಬಯಸುತ್ತಾ ಇದ್ದಾರೆ.

ಇದನ್ನೂ ಓದಿ:ರಾಮ್ ಚರಣ್ ಮುಂದಿನ ಚಿತ್ರದಲ್ಲಿ ನಟಿಸಲಿದ್ದಾರೆ ಎಂಎಸ್ ಧೋನಿ?

‘ಆರ್​ಸಿ 16’ ಶೂಟಿಂಗ್ ಭರದಿಂದ ಸಾಗುತ್ತಿದೆ. ಶೀಘ್ರವೇ ತಂಡ ದೆಹಲಿಗೆ ಹಾರಲಿದೆ. ಜಮಾ ಮಸೀದಿಯಲ್ಲಿ ಶೂಟ್ ನಡೆಯಲಿದೆ. ಇದರ ಜೊತೆಗೆ ಸಂಸತ್ತಿನಲ್ಲೂ ಶೂಟಿಂಗ್ ನಡೆಯಲಿದೆ ಎಂದು ಹೇಳಲಾಗುತ್ತಿದೆಯಾದರೂ ಇದರ ಮಾಹಿತಿ ಇನ್ನೂ ರಿವೀಲ್ ಆಗಿಲ್ಲ.

ರಾಮ್ ಚರಣ್ ಅವರು ಸಾಲು ಸಾಲು ಸೋಲು ಕಂಡಿದ್ದಾರೆ. ಅವರ ನಟನೆಯ ‘ಆರ್​ಆರ್​ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಆ ಬಳಿಕ ರಿಲೀಸ್ ಆದ ‘ಆಚಾರ್ಯ’ ಹೀನಾಯ ಸೋಲು ಕಂಡರೆ, ‘ಗೇಮ್ ಚೇಂಜರ್’ ಕೂಡ ಸಾಧಾರಣ ಎನಿಸಿಕೊಂಡಿತು. ಈಗ ಅವರ ಮುಂದಿನ ಚಿತ್ರ ಗೆಲ್ಲಲೇಬೇಕಿದೆ. ಮೈತ್ರಿ ಮೂವೀ ಮೇಕರ್ಸ್​ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ. ಈ ಚಿತ್ರಕ್ಕೆ ಎಆರ್​ ರೆಹಮಾನ್ ಅವರು ಸಂಗೀತ ಸಂಯೋಜನೆ ಮಾಡುತ್ತಾ ಇದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ವಿಧಾನಸಭೆಯಲ್ಲಿ ಹೈಡ್ರಾಮಾ: ಸ್ಪೀಕರ್ ಮೇಲೆ ಕಾಗದ ಚೂರು ಎಸೆದ ಶಾಸಕರು!
ವಿಧಾನಸಭೆಯಲ್ಲಿ ಹೈಡ್ರಾಮಾ: ಸ್ಪೀಕರ್ ಮೇಲೆ ಕಾಗದ ಚೂರು ಎಸೆದ ಶಾಸಕರು!
ಹನಿ ಟ್ರ್ಯಾಪ್, ಸಿಡಿ ಫ್ಯಾಕ್ಟರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಲ್ಲ: ಶಾಸಕ
ಹನಿ ಟ್ರ್ಯಾಪ್, ಸಿಡಿ ಫ್ಯಾಕ್ಟರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಲ್ಲ: ಶಾಸಕ
ಮುನಿರತ್ನ ನಿನ್ನೆ ಮಾಡಿದ ಹಲವು ಅರೋಪಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಮುನಿರತ್ನ ನಿನ್ನೆ ಮಾಡಿದ ಹಲವು ಅರೋಪಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಬೆಂಗಳೂರು ಹೋಟೆಲ್​ನಲ್ಲಿ ಹಿಂದಿ ಹೇರಿಕೆ, ವಿಡಿಯೋ ವೈರಲ್
ಬೆಂಗಳೂರು ಹೋಟೆಲ್​ನಲ್ಲಿ ಹಿಂದಿ ಹೇರಿಕೆ, ವಿಡಿಯೋ ವೈರಲ್