AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ರಾಮ್ ಚರಣ್ ಮೇಲೆ ಬರಲಿದೆ ಡಾಕ್ಯುಮೆಂಟರಿ; ನೆಟ್​ಫ್ಲಿಕ್ಸ್​ನಿಂದ ತೆರೆಮರೆಯಲ್ಲಿ ಸಿದ್ಧತೆ

ರಾಮ್‌ ಚರಣ್ ಅವರ ಜೀವನದ ಮೇಲೆ ನೆಟ್‌ಫ್ಲಿಕ್ಸ್ ಡಾಕ್ಯುಮೆಂಟರಿ ನಿರ್ಮಾಣ ಆಗುತ್ತಿದೆ ಎಂಬ ಸುದ್ದಿ ಹರಡಿದೆ. ಆರು ತಿಂಗಳಿಂದ ಈ ಯೋಜನೆಯ ಮೇಲೆ ಕೆಲಸ ನಡೆಯುತ್ತಿದೆ ಎನ್ನಲಾಗಿದೆ. 'ಆರ್‌ಆರ್‌ಆರ್' ಚಿತ್ರದ ಯಶಸ್ಸು ಮತ್ತು ಇತರ ಚಿತ್ರಗಳ ಬಗ್ಗೆಯೂ ಡಾಕ್ಯುಮೆಂಟರಿಯಲ್ಲಿ ತೋರಿಸಲಾಗುವುದು .

 ರಾಮ್ ಚರಣ್ ಮೇಲೆ ಬರಲಿದೆ ಡಾಕ್ಯುಮೆಂಟರಿ; ನೆಟ್​ಫ್ಲಿಕ್ಸ್​ನಿಂದ ತೆರೆಮರೆಯಲ್ಲಿ ಸಿದ್ಧತೆ
ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: May 13, 2025 | 2:58 PM

Share

ರಾಮ್ ಚರಣ್ (Ram Charan) ಅವರು ತೆಲುಗು ಚಿತ್ರರಂಗದಲ್ಲಿ ಅಪಾರ ಜನಪ್ರಿಯತೆ ಪಡೆದ ನಟ. ಸಿನಿಮಾ ಕುಟುಂಬದ ಹಿನ್ನೆಲೆಯಿಂದ ಬಂದ ಇವರು ಯಾವುದೇ ಕಷ್ಟ ನೋಡಿದವರಲ್ಲ. ಆದರೆ, ಚಿರಂಜೀವಿ ನೆರಳಲ್ಲಿ ಬದುಕದೇ ತಮ್ಮನ್ನು ತಾವು ಸಾಬೀತು ಮಾಡಿಕೊಂಡರು. ಇದು ಅವರ ಹೆಚ್ಚುಗಾರಿಕೆ. ಈಗ ರಾಮ್ ಚರಣ್ ಅವರ ಬಗ್ಗೆ ಒಂದು ಅಚ್ಚರಿಯ ವಿಚಾರ ರಿವೀಲ್ ಆಗಿದೆ. ರಾಮ್ ಚರಣ್ ಹೆಸರಲ್ಲಿ ಡಾಕ್ಯುಮೆಂಟರಿ ಮಾಡಲು ನೆಟ್​ಫ್ಲಿಕ್ಸ್ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿದೆ.

ಲಂಡನ್​ನ ವಿಶ್ವ ವಿಖ್ಯಾತ ಮೇಡಮ್ ಟುಸ್ಸಾಡ್ಸ್ ವ್ಯಾಕ್ಸ್ ಮ್ಯೂಸಿಯಂನಲ್ಲಿ ರಾಮ್ ಚರಣ್ ಸ್ಟ್ಯಾಚ್ಯೂ ಅನಾವರಣಗೊಂಡಿದೆ. ಈ ಅದ್ದೂರಿ ಕಾರ್ಯಕ್ರಮಕ್ಕೆ ರಾಮ್ ಚರಣ್ ಅವರು ಕುಟುಂಬದ ಜೊತೆ ಹಾಜರಿ ಹಾಕಿದ್ದರು. ಇಷ್ಟೇ ಅಲ್ಲ, ಅವರ ಪ್ರೀತಿಯ ಸಾಕು ನಾಯಿ ರೈಮಿ ಕೂಡ ಅವರ ಜೊತೆ ಇತ್ತು. ಈ ಫೋಟೋ ವೈರಲ್ ಆಗಿದೆ. ಈಗ ರಾಮ್ ಚರಣ್ ಬಗ್ಗೆ ಹೊಸ ಅಪ್​ಡೇಟ್ ಒಂದು ಕೇಳಿ ಬಂದಿದೆ.

ರಾಮ್ ಚರಣ್ ಅವರ ಜೀವನ ಆಧರಿಸಿ ಒಂದು ಡಾಕ್ಯುಮೆಂಟರಿ ಮಾಡಲು ನೆಟ್​ಫ್ಲಿಕ್ಸ್ ಸಿದ್ಧತೆ ಮಾಡಿಕೊಂಡಿದೆ. ಇದಕ್ಕೆ ಆರು ತಿಂಗಳಿಂದ ತೆರೆಮರೆಯ ಸಿದ್ಧತೆ ನಡೆದಿದೆ. ಇದಕ್ಕಾಗಿ ಕೆಲವು ದೃಶ್ಯಗಳನ್ನು ಕೂಡ ಶೂಟ್ ಮಾಡಲಾಗಿದೆ ಎನ್ನಲಾಗಿದೆ. ಇದೆಲ್ಲವೂ ನೈಸರ್ಗಿಕವಾಗಿ ಮೂಡಿ ಬರುವಂತೆ ನೋಡಿಕೊಳ್ಳಲಾಗುತ್ತಿದೆ. ‘ಗೇಮ್ ಚೇಂಜರ್’ ಸಿನಿಮಾದ ಮೊದಲ ದಿನದ ಶೋಗೆ ಯಾವ ರೀತಿಯಲ್ಲಿ ಜನರು ನುಗ್ಗಿದ್ದರು ಎಂಬುದನ್ನು ಶೂಟ್ ಮಾಡಿಟ್ಟುಕೊಳ್ಳಲಾಗಿದೆಯಂತೆ.

ಇದನ್ನೂ ಓದಿ
Image
ರಾಜ್​ಕುಮಾರ್ ಸದಾ ಬಿಳಿ ಪಂಚೆ, ಶರ್ಟ್​ನಲ್ಲೇ ಇರುತ್ತಿದ್ದರೇಕೆ?
Image
ನನ್ನ ತಂದೆ ಪಾಕಿಸ್ತಾನದವರು ಎಂದಿದ್ದ ಶಾರುಖ್ ಖಾನ್; ಈ ಕಾರಣಕ್ಕೆ ಮೌನ?
Image
‘ಕೂಲಿ’ ಸಿನಿಮಾದ ಬಹುತೇಕ ಶೂಟ್​ನ ಬಾಡಿ ಡಬಲ್​ ಮೂಲಕವೇ ಮುಗಿಸಿದ ನಿರ್ದೇಶಕ
Image
ಕಲರ್ಸ್​​ ಧಾರಾವಾಹಿಯಲ್ಲಿ ಗೌತಮಿ ಜಾಧವ್; ಪ್ರೋಮೋ ಮೂಲಕ ಬಿಗ್ ಸರ್​ಪ್ರೈಸ್

ಈ ಮೊದಲು ನಯನಾತಾರಾ ಜೀವನ ಆಧರಿಸಿ ಡಾಕ್ಯುಮೆಂಟರಿ ಮೂಡಿ ಬಂದಿತ್ತು. ಇದರಲ್ಲಿ ನಯನತಾರಾ ಅವರ ವೈಯಕ್ತಿಕ ಜೀವನ ಹಾಗೂ ಸಿನಿಮಾ ಜೀವನದ ಬಗ್ಗೆ ತೋರಿಸಲಾಗಿತ್ತು. ಜೊತೆಗೆ ಅವರ ಜೊತೆ ಕೆಲಸ ಮಾಡಿದವರ ಬೈಟ್ ಕೂಡ ಇತ್ತು. ರಾಮ್ ಚರಣ್ ಡಾಕ್ಯುಮೆಂಟರಿ ಕೂಡ ಇದೇ ರೀತಿಯಲ್ಲಿ ಇರಲಿದೆ ಎನ್ನಲಾಗಿದೆ. ಈ ಬಗ್ಗೆ ಶೀಘ್ರವೇ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ಇದರಲ್ಲಿ ನಿಜವಾದ ರಾಮ್ ಚರಣ್ ಯಾರು ಅಂತ ಗುರುತಿಸಲು ಸಾಧ್ಯವೇ?

ರಾಮ್ ಚರಣ್ ನಟನೆಯ ‘ಆರ್​ಆರ್​ಆರ್​’ ಸಿನಿಮಾ 2023ರಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತು. ಆ ಬಳಿಕ ಬಂದ ‘ಆಚಾರ್ಯ’ ಹಾಗೂ ‘ಗೇಮ್ ಚೇಂಜರ್’ ಚಿತ್ರಗಳು ನೆಲಕಚ್ಚಿದವು. ಈಗ ಅವರು ‘ಪೆದ್ದಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ. ಬುಚಿ ಬಾಬು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ