AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್​ ಅದೆಷ್ಟು ಕಡಿಮೆ ಮೊಬೈಲ್ ಬಳಕೆ ಮಾಡುತ್ತಾರೆ? ಈ ಘಟನೆಯೇ ಸಾಕ್ಷಿ

ವರುಣ್ ತೇಜ್ ಅವರು ತಮ್ಮ ಸೋದರ ಸಂಬಂಧಿ ರಾಮ್ ಚರಣ್ ಅವರ ಅತ್ಯಂತ ಕಡಿಮೆ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ ಬಳಕೆಯ ಬಗ್ಗೆ ಮಾತನಾಡಿದ್ದಾರೆ. ರಾಮ್ ಚರಣ್ ಮೆಸೇಜ್​ಗಳನ್ನು ನೋಡುವುದಿಲ್ಲ ಎಂದು ಹೇಳಿದ್ದಾರೆ.

ರಾಮ್ ಚರಣ್​ ಅದೆಷ್ಟು ಕಡಿಮೆ ಮೊಬೈಲ್ ಬಳಕೆ ಮಾಡುತ್ತಾರೆ? ಈ ಘಟನೆಯೇ ಸಾಕ್ಷಿ
ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Nov 08, 2024 | 2:22 PM

Share

ಅನೇಕ ಹೀರೋ ಹಾಗೂ ಹೀರೋಯಿನ್​ಗಳು ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ಇದೇ ಕಾರಣಕ್ಕೆ ಅವರು ಹೆಚ್ಚು ಹೊತ್ತು ಮೊಬೈಲ್​ನಲ್ಲಿಯೇ ಸಮಯ ಕಳೆಯುತ್ತಾರೆ. ಆದರೆ, ಕೆಲವೇ ಕೆಲವು ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾ ಹಾಗೂ ಮೊಬೈಲ್​​ನ ಕಡಿಮೆ ಬಳಕೆ ಮಾಡುತ್ತಾರೆ. ಈ ಸಾಲಿನಲ್ಲಿ ರಾಮ್ ಚರಣ್ ಕೂಡ ಇದ್ದಾರೆ. ಅವರು ಅದೆಷ್ಟು ಕಡಿಮೆ ಮೊಬೈಲ್ ಬಳಕೆ ಮಾಡುತ್ತಾರೆ ಎಂದರೆ ಅವರಿಗೆ ಮೆಸೇಜ್ ಮಾಡಿದ ಬಳಿಕ ಅದನ್ನು ನೋಡಿ ಎನ್ನಲು ಫೋನ್​ ಮಾಡಬೇಕು.

ರಾಮ್ ಚರಣ್ ಅವರ ಸೋದರ ಸಂಬಂಧಿ ವರುಣ್ ತೇಜ್ ಅವರು ಈ ವಿಚಾರ ರಿವೀಲ್ ಮಾಡಿದ್ದಾರೆ. ರಾಮ್ ಚರಣ್ ಹಾಗೂ ವರುಣ್ ತೇಜ್ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇಬ್ಬರೂ ಆಗಾಗ ಭೇಟಿ ಆಗುತ್ತಾ ಇರುತ್ತಾರೆ. ರಾಮ್ ಚರಣ್ ಅವರನ್ನು ವರುಣ್ ಅತಿ ಹತ್ತಿರದಿಂದ ಕಂಡಿದ್ದಾರೆ. ಇತ್ತೀಚಿನ ಸಂದರ್ಶನ ಒಂದರಲ್ಲಿ ಅವರು ಹಲವು ವಿಚಾರ ರಿವೀಲ್ ಮಾಡಿದ್ದಾರೆ. ರಾಮ್ ಚರಣ್ ಸರಿಯಾಗಿ ಮೆಸೇಜ್​ಗಳನ್ನೂ ನೋಡುವುದಿಲ್ಲ ಎಂದಿದ್ದಾರೆ ವರುಣ್.

‘ನನ್ನ ಸಿನಿಮಾದ ಟೀಸರ್ ಅಥವಾ ಟ್ರೇಲರ್ ರಿಲೀಸ್ ಆದರೆ ನಾನು ಮೊದಲು ರಾಮ್​ ಚರಣ್​ ಅವರಿಗೆ ಕರೆ ಮಾಡಬೇಕು. ನಾನು ಮೆಸೇಜ್ ಕಳುಹಿಸಿದ್ದೇನೆ ನೋಡಿ ಎಂದು ಹೇಳಬೇಕು. ನಾನು ಕೇವಲ ಮೆಸೇಜ್ ಕಳಿಸಿ ಅವರಿಂದ ಉತ್ತರ ಬರುತ್ತದೆ ಎಂದು ನಿರೀಕ್ಷಿಸಬಾರದು’ ಎಂದಿದ್ದಾರೆ ವರುಣ್ ತೇಜ್. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಎನಿಸಿದೆ.

ರಾಮ್ ಚರಣ್ ಸೋಶಿಯಲ್ ಮೀಡಿಯಾ ಖಾತೆಗಳನ್ನು ಹೊಂದಿದ್ದಾರೆ. ಆದರೆ, ಅದರಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ರಾಮ್ ಚರಣ್ ಅವರು ಈವರೆಗೆ ಇನ್​ಸ್ಟಾಗ್ರಾಮ್​ನಲ್ಲಿ 307 ಪೋಸ್ಟ್​ಗಳನ್ನು ಮಾತ್ರ ಹಂಚಿಕೊಂಡಿದ್ದಾರೆ. ಅವರಿಗೆ ಎರಡೂವರೆ ಕೋಟಿ ಹಿಂಬಾಲಕರು ಇದ್ದಾರೆ.

ಇದನ್ನೂ ಓದಿ: ಪ್ರೀತಿ ವಿಚಾರ ಹೇಳದ ವರುಣ್ ತೇಜ್ ಮೇಲೆ ಚಿರಂಜೀವಿಗೆ ಇನ್ನೂ ಇದೆ ಕೋಪ

ವರುಣ್ ತೇಜ್ ಅವರು ‘ಮಟ್ಕಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಈ ಸಿನಿಮಾ ಯಶಸ್ಸು ಕಾಣುವ ನಿರೀಕ್ಷೆಯಲ್ಲಿದ್ದಾರೆ. ನವೆಂಬರ್ 14ರಂದು ಸಿನಿಮಾ ರಿಲೀಸ್ ಆಗಲಿದೆ. ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದಾದ ಬಳಿಕ ಅವರು ‘RC 16’ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ