AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್​ ಅದೆಷ್ಟು ಕಡಿಮೆ ಮೊಬೈಲ್ ಬಳಕೆ ಮಾಡುತ್ತಾರೆ? ಈ ಘಟನೆಯೇ ಸಾಕ್ಷಿ

ವರುಣ್ ತೇಜ್ ಅವರು ತಮ್ಮ ಸೋದರ ಸಂಬಂಧಿ ರಾಮ್ ಚರಣ್ ಅವರ ಅತ್ಯಂತ ಕಡಿಮೆ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ ಬಳಕೆಯ ಬಗ್ಗೆ ಮಾತನಾಡಿದ್ದಾರೆ. ರಾಮ್ ಚರಣ್ ಮೆಸೇಜ್​ಗಳನ್ನು ನೋಡುವುದಿಲ್ಲ ಎಂದು ಹೇಳಿದ್ದಾರೆ.

ರಾಮ್ ಚರಣ್​ ಅದೆಷ್ಟು ಕಡಿಮೆ ಮೊಬೈಲ್ ಬಳಕೆ ಮಾಡುತ್ತಾರೆ? ಈ ಘಟನೆಯೇ ಸಾಕ್ಷಿ
ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Nov 08, 2024 | 2:22 PM

Share

ಅನೇಕ ಹೀರೋ ಹಾಗೂ ಹೀರೋಯಿನ್​ಗಳು ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ಇದೇ ಕಾರಣಕ್ಕೆ ಅವರು ಹೆಚ್ಚು ಹೊತ್ತು ಮೊಬೈಲ್​ನಲ್ಲಿಯೇ ಸಮಯ ಕಳೆಯುತ್ತಾರೆ. ಆದರೆ, ಕೆಲವೇ ಕೆಲವು ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾ ಹಾಗೂ ಮೊಬೈಲ್​​ನ ಕಡಿಮೆ ಬಳಕೆ ಮಾಡುತ್ತಾರೆ. ಈ ಸಾಲಿನಲ್ಲಿ ರಾಮ್ ಚರಣ್ ಕೂಡ ಇದ್ದಾರೆ. ಅವರು ಅದೆಷ್ಟು ಕಡಿಮೆ ಮೊಬೈಲ್ ಬಳಕೆ ಮಾಡುತ್ತಾರೆ ಎಂದರೆ ಅವರಿಗೆ ಮೆಸೇಜ್ ಮಾಡಿದ ಬಳಿಕ ಅದನ್ನು ನೋಡಿ ಎನ್ನಲು ಫೋನ್​ ಮಾಡಬೇಕು.

ರಾಮ್ ಚರಣ್ ಅವರ ಸೋದರ ಸಂಬಂಧಿ ವರುಣ್ ತೇಜ್ ಅವರು ಈ ವಿಚಾರ ರಿವೀಲ್ ಮಾಡಿದ್ದಾರೆ. ರಾಮ್ ಚರಣ್ ಹಾಗೂ ವರುಣ್ ತೇಜ್ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇಬ್ಬರೂ ಆಗಾಗ ಭೇಟಿ ಆಗುತ್ತಾ ಇರುತ್ತಾರೆ. ರಾಮ್ ಚರಣ್ ಅವರನ್ನು ವರುಣ್ ಅತಿ ಹತ್ತಿರದಿಂದ ಕಂಡಿದ್ದಾರೆ. ಇತ್ತೀಚಿನ ಸಂದರ್ಶನ ಒಂದರಲ್ಲಿ ಅವರು ಹಲವು ವಿಚಾರ ರಿವೀಲ್ ಮಾಡಿದ್ದಾರೆ. ರಾಮ್ ಚರಣ್ ಸರಿಯಾಗಿ ಮೆಸೇಜ್​ಗಳನ್ನೂ ನೋಡುವುದಿಲ್ಲ ಎಂದಿದ್ದಾರೆ ವರುಣ್.

‘ನನ್ನ ಸಿನಿಮಾದ ಟೀಸರ್ ಅಥವಾ ಟ್ರೇಲರ್ ರಿಲೀಸ್ ಆದರೆ ನಾನು ಮೊದಲು ರಾಮ್​ ಚರಣ್​ ಅವರಿಗೆ ಕರೆ ಮಾಡಬೇಕು. ನಾನು ಮೆಸೇಜ್ ಕಳುಹಿಸಿದ್ದೇನೆ ನೋಡಿ ಎಂದು ಹೇಳಬೇಕು. ನಾನು ಕೇವಲ ಮೆಸೇಜ್ ಕಳಿಸಿ ಅವರಿಂದ ಉತ್ತರ ಬರುತ್ತದೆ ಎಂದು ನಿರೀಕ್ಷಿಸಬಾರದು’ ಎಂದಿದ್ದಾರೆ ವರುಣ್ ತೇಜ್. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಎನಿಸಿದೆ.

ರಾಮ್ ಚರಣ್ ಸೋಶಿಯಲ್ ಮೀಡಿಯಾ ಖಾತೆಗಳನ್ನು ಹೊಂದಿದ್ದಾರೆ. ಆದರೆ, ಅದರಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ರಾಮ್ ಚರಣ್ ಅವರು ಈವರೆಗೆ ಇನ್​ಸ್ಟಾಗ್ರಾಮ್​ನಲ್ಲಿ 307 ಪೋಸ್ಟ್​ಗಳನ್ನು ಮಾತ್ರ ಹಂಚಿಕೊಂಡಿದ್ದಾರೆ. ಅವರಿಗೆ ಎರಡೂವರೆ ಕೋಟಿ ಹಿಂಬಾಲಕರು ಇದ್ದಾರೆ.

ಇದನ್ನೂ ಓದಿ: ಪ್ರೀತಿ ವಿಚಾರ ಹೇಳದ ವರುಣ್ ತೇಜ್ ಮೇಲೆ ಚಿರಂಜೀವಿಗೆ ಇನ್ನೂ ಇದೆ ಕೋಪ

ವರುಣ್ ತೇಜ್ ಅವರು ‘ಮಟ್ಕಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಈ ಸಿನಿಮಾ ಯಶಸ್ಸು ಕಾಣುವ ನಿರೀಕ್ಷೆಯಲ್ಲಿದ್ದಾರೆ. ನವೆಂಬರ್ 14ರಂದು ಸಿನಿಮಾ ರಿಲೀಸ್ ಆಗಲಿದೆ. ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದಾದ ಬಳಿಕ ಅವರು ‘RC 16’ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್