AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Gopal Varma: ರಾಮ್​ ಗೋಪಾಲ್ ವರ್ಮಾ ವಿರುದ್ಧ ವಂಚನೆ ಪ್ರಕರಣ ದಾಖಲು; ಚಿತ್ರ ನಿರ್ಮಿಸುತ್ತಿದ್ದೇನೆಂದು ಹೇಳಿ ಮೋಸ ಮಾಡಿದ್ರಾ ನಿರ್ದೇಶಕ?

Ram Gopal Varma cheating Case: ನಿರ್ದೇಶಕ ರಾಮ್​ ಗೋಪಾಲ್ ವರ್ಮಾ ವಿರುದ್ಧ ಹೈದರಾಬಾದ್‌ನಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ನಿರ್ಮಾಣ ಸಂಸ್ಥೆಯ ಮಾಲಿಕರೋರ್ವರು ಈ ಬಗ್ಗೆ ದೂರು ನೀಡಿದ್ದು, ₹56 ಲಕ್ಷ ಸಾಲ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Ram Gopal Varma: ರಾಮ್​ ಗೋಪಾಲ್ ವರ್ಮಾ ವಿರುದ್ಧ ವಂಚನೆ ಪ್ರಕರಣ ದಾಖಲು; ಚಿತ್ರ ನಿರ್ಮಿಸುತ್ತಿದ್ದೇನೆಂದು ಹೇಳಿ ಮೋಸ ಮಾಡಿದ್ರಾ ನಿರ್ದೇಶಕ?
ರಾಮ್ ಗೋಪಾಲ್ ವರ್ಮಾImage Credit source: IMDB
TV9 Web
| Edited By: |

Updated on:May 25, 2022 | 12:06 PM

Share

ನಿರ್ದೇಶಕ ರಾಮ್​ ಗೋಪಾಲ್ ವರ್ಮಾ (Ram Gopal Varma) ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ಹೈದರಾಬಾದ್‌ನಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ನಿರ್ಮಾಣ ಸಂಸ್ಥೆಯ ಮಾಲಿಕರೋರ್ವರು ಈ ಬಗ್ಗೆ ದೂರು ನೀಡಿದ್ದು, ಆರ್‌ಜಿವಿ ₹56 ಲಕ್ಷ ಸಾಲ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಿಯಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮ್ ಗೋಪಾಲ್ ವರ್ಮಾ ಅವರ ಸ್ನೇಹಿತರ ಮೂಲಕ 2019ರಲ್ಲಿ ದೂರುದಾರರು ಅವರನ್ನು ಭೇಟಿಯಾಗಿದ್ದರು. ಮರು ವರ್ಷ ಆರ್​ಜಿವಿ 2020ರ ತೆಲುಗು ಚಿತ್ರ ‘ದಿಶಾ’ಗಾಗಿ 8 ಲಕ್ಷ ರೂ ಸಾಲವನ್ನು ಪಡೆದಿದ್ದರು. 2020ರ ಜನವರಿ 22ಕ್ಕೆ ಚೆಕ್ ಮೂಲಕ ರಾಮ್ ಗೋಪಾಲ್ ವರ್ಮಾ ಮತ್ತೆ ₹20 ಲಕ್ಷ ಕೇಳಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನಿರ್ದೇಶಕ ಆರು ತಿಂಗಳೊಳಗೆ ಮರುಪಾವತಿ ಮಾಡುವುದಾಗಿ ಭರವಸೆ ನೀಡಿದ್ದರು.

ಇದನ್ನೂ ಓದಿ: ‘ಮತ್ತೊಂದು ದೊಡ್ಡ ಚಿತ್ರ ಬರ್ತಿದೆ’: ‘ವಿಕ್ರಾಂತ್​ ರೋಣ’ ಬಗ್ಗೆ ಪರಭಾಷೆ ಮಂದಿಗೆ ಮೊದಲೇ ಎಚ್ಚರಿಕೆ ನೀಡಿದ ಆರ್​ಜಿವಿ

ನಂತರದಲ್ಲಿ ಚಿತ್ರಕ್ಕೆ ಹಣ ಸಹಾಯ ಬೇಕಾಗಿದೆ ಎಂದು ಮುಂದಿನ ತಿಂಗಳು ಮತ್ತೆ 28 ಲಕ್ಷ ರೂ ಹಣ ಕೇಳಿದ್ದರು ಎಂದು ದೂರುದಾರರು ಆರೋಪಿಸಿದ್ದಾರೆ. ರಾಮ್ ಗೋಪಾಲ್ ವರ್ಮಾರನ್ನು ನಂಬಿ 28 ಲಕ್ಷ ರೂಗಳನ್ನು ವರ್ಗಾಯಿಸಲಾಗಿತ್ತು. ದಿಶಾ ಚಿತ್ರದ ರಿಲೀಸ್​ಗೂ ಮುನ್ನ ಒಟ್ಟು 56 ಲಕ್ಷ ರೂಗಳನ್ನು ಮರಳಿಸುವುದಾಗಿ ಆರ್​ಜಿವಿ ಒಪ್ಪಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಆದರೆ ‘ದಿಶಾ’ ಚಿತ್ರದ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಆಗಿರಲಿಲ್ಲ ಎಂದು ಸಾಲ ನೀಡಿದ್ದ ವ್ಯಕ್ತಿಗೆ 2021ರಲ್ಲಿ ತಿಳಿಯಿತು. ಅವರು ನಿರ್ಮಾಪಕರೆಂದು ಸುಳ್ಳು ಹೇಳಿ ಸಾಲ ಪಡೆದಿದ್ದರು ಎಂದೂ ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ
Image
Prithviraj Movie: ಅಕ್ಷಯ್ ಕುಮಾರ್ ಅಭಿನಯದ ‘ಪೃಥ್ವಿರಾಜ್’ ಚಿತ್ರವನ್ನು ವೀಕ್ಷಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ
Image
Love Birds Movie: ‘ಲವ್ ಬರ್ಡ್ಸ್​’ನಲ್ಲಿ ತೆರೆ ಹಂಚಿಕೊಳ್ಳಲಿರುವ ಡಾರ್ಲಿಂಗ್ ಕೃಷ್ಣ- ಮಿಲನಾ ನಾಗರಾಜ್
Image
Karan Johar: 50ನೇ ವಸಂತಕ್ಕೆ ಕಾಲಿಟ್ಟ ಕರಣ್ ಜೋಹರ್; ಸ್ಟಾರ್ ನಿರ್ಮಾಪಕನ ಪಾರ್ಟಿಯಲ್ಲಿ ಯಶ್?
Image
ಒಂದು ಆ್ಯಕ್ಷನ್ ದೃಶ್ಯಕ್ಕೆ 35 ಲಕ್ಷ ರೂ. ವೆಚ್ಛ ಮಾಡಿದ ‘ಗೌಳಿ’ ತಂಡ; ಶ್ರೀನಗರ ಕಿಟ್ಟಿ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​

ಇದನ್ನೂ ಓದಿ: I am R Movie: ಉಪೇಂದ್ರ- ಆರ್​ಜಿವಿ ಕಾಂಬಿನೇಷನ್​ನ ಹೊಸ ಚಿತ್ರ ‘ಐ ಆ್ಯಮ್​ ಆರ್’ ಫಸ್ಟ್​​ ಲುಕ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

ಆರ್​ಜಿವಿ ಕ್ರೈಮ್ ಡ್ರಾಮಾ ಚಿತ್ರವಾದ ‘ಸತ್ಯ’, ಥ್ರಿಲ್ಲರ್ ಚಿತ್ರ ‘ಕೌನ್’, ಗ್ಯಾಂಗ್‌ಸ್ಟರ್ ಚಿತ್ರಗಳಾದ ‘ಕಂಪನಿ’ ಮತ್ತು ‘ಸರ್ಕಾರ್’ ಮತ್ತು ಹಾರರ್ ಮಾದರಿಯ ‘ಭೂತ್‌’ನಂತಹ ಚಲನಚಿತ್ರಗಳಿಂದ ಖ್ಯಾತಿ ಗಳಿಸಿದ್ದಾರೆ. ಕನ್ನಡದ ‘ಕಿಲ್ಲಿಂಗ್ ವೀರಪ್ಪನ್’ ಚಿತ್ರವನ್ನೂ ಅವರು ನಿರ್ದೇಶಿಸಿದ್ದರು. ಉಪೇಂದ್ರ ನಟನೆಯ ‘ಐ ಆ್ಯಮ್​ ಆರ್​’ ಚಿತ್ರವನ್ನು ಆರ್​ಜಿವಿ ನಿರ್ದೇಶಿಸಬೇಕಿದೆ. ಅದು ಇತ್ತೀಚೆಗೆ ಅನೌನ್ಸ್ ಆಗಿತ್ತು. ಗ್ಯಾಂಗ್​ಸ್ಟರ್ ಕತೆಯನ್ನು ಚಿತ್ರ ಹೊಂದಿದೆ.

ಪ್ರಸ್ತುತ ದಾಖಲಾಗಿರುವ ವಂಚನೆ ಪ್ರಕರಣದ ಬಗ್ಗೆ ರಾಮ್​ ಗೋಪಾಲ್ ವರ್ಮಾ ಇನ್ನಷ್ಟೇ ಪ್ರತಿಕ್ರಿಯಿಸಬೇಕಿದೆ. ಟ್ವಿಟರ್​ನಲ್ಲಿ ಸಖತ್ ಸಕ್ರಿಯರಾಗಿರುವ ನಿರ್ದೇಶಕ ಈ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಇದುವರೆಗೆ ಯಾವುದೇ ಪ್ರತಿಕ್ರಿಯೆ ಹಂಚಿಕೊಂಡಿಲ್ಲ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:41 am, Wed, 25 May 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು