AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಜೀವನ ಆಧರಿಸಿ ಸಿನಿಮಾ ಘೋಷಿಸಿದ ಆರ್​ಜಿವಿ

ಮುಂಬೈ ಅಂಡರ್‌ವರ್ಲ್ಡ್ ಹಿನ್ನೆಲೆಯಲ್ಲಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ 'ಪೋಲಿಸ್ ಕಂಪನಿ' ಎಂಬ ಹೊಸ ಸಿನಿಮಾ ಘೋಷಿಸಿದ್ದಾರೆ. 300ಕ್ಕೂ ಹೆಚ್ಚು ಗ್ಯಾಂಗ್‌ಸ್ಟರ್‌ಗಳನ್ನು ಎನ್‌ಕೌಂಟರ್ ಮಾಡಿದ ವಿಶೇಷ ಪೋಲಿಸ್ ಪಡೆಯ ಕಥೆಯನ್ನು ಈ ಚಿತ್ರ ಒಳಗೊಂಡಿದ್ದು, ನಟ ಹರ್ಷವರ್ಧನ್ ರಾಣೆ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಪಾತ್ರದಲ್ಲಿ ನಟಿಸಲಿದ್ದಾರೆ.

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಜೀವನ ಆಧರಿಸಿ ಸಿನಿಮಾ ಘೋಷಿಸಿದ ಆರ್​ಜಿವಿ
ಆರ್​ಜಿವಿ
ರಾಜೇಶ್ ದುಗ್ಗುಮನೆ
|

Updated on: Aug 11, 2026 | 7:35 AM

Share

ಮುಖ್ಯಾಂಶಗಳು

  • 300 ಗ್ಯಾಂಗ್‌ಸ್ಟರ್‌ಗಳ ಎನ್‌ಕೌಂಟರ್ ಕಥೆ
  • 'ಪೋಲಿಸ್ ಕಂಪನಿ' ಸಿನಿಮಾ ಘೋಷಣೆ
  • ದಯಾ ನಾಯಕ್ ಪಾತ್ರದಲ್ಲಿ ಹರ್ಷವರ್ಧನ್ ನಟನೆ

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಮತ್ತೆ ಮುಂಬೈ ಅಂಡರ್‌ವರ್ಲ್ಡ್ ಕಥೆಯನ್ನು ತೆರೆಗೆ ತರಲು ಸಿದ್ಧರಾಗಿದ್ದಾರೆ. ‘ಡಿ ಕಂಪನಿ’ಗಿಂತಲೂ ಅತ್ಯಂತ ಅಪಾಯಕಾರಿಯಾದ ಪಡೆಯೊಂದರ ಕಥೆಯನ್ನು ಅವರು ಹೇಳಲಿದ್ದಾರೆ. ತಮ್ಮ ಹೊಸ ಸಿನಿಮಾಗೆ ‘ಪೋಲಿಸ್ ಕಂಪನಿ’ ಎಂದು ಹೆಸರಿಟ್ಟಿದ್ದಾರೆ. ಪ್ರಸಿದ್ಧ ನಟ ಹರ್ಷವರ್ಧನ್ ರಾಣೆ ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಆರ್​​ಜಿವಿ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದ್ದಾರೆ.

ಅಂಡರ್‌ವರ್ಲ್ಡ್ ಮತ್ತು ಪೋಲಿಸ್ ಕಂಪನಿ

ಸಿನಿಮಾ ಶೀರ್ಷಿಕೆಯ ಹಿನ್ನೆಲೆಯನ್ನು ವರ್ಮಾ ಸ್ಪಷ್ಟವಾಗಿ ವಿವರಿಸಿದ್ದಾರೆ. ‘ಪೋಲಿಸ್ ಎನ್ನುವುದು ಒಂದು ಜವಾಬ್ದಾರಿಯುತ ಸರ್ಕಾರಿ ಸಂಸ್ಥೆಯಾಗಿದೆ. ಅಂಡರ್‌ವರ್ಲ್ಡ್ ಕಂಪನಿಯು ಹಣ ಸಂಪಾದಿಸುವ ಅಕ್ರಮ ಜಾಲವಾಗಿದೆ. ಆದರೆ ಸಂಸ್ಥೆಗೆ ಹೆಚ್ಚಿನ ಅಧಿಕಾರ ಸಿಕ್ಕಾಗ ಅದು ಕಂಪನಿಯಾಗುತ್ತದೆ. ದಾವೂದ್ ಇಬ್ರಾಹಿಂ ತನ್ನ ವಿರೋಧಿಗಳನ್ನು ಮಟ್ಟಹಾಕಿ ದುಬೈಗೆ ಓಡಿಹೋಗಿದ್ದ. ನಂತರ ಛೋಟಾ ರಾಜನ್ ಜೊತೆ ಆತನಿಗೆ ಭಿನ್ನಾಭಿಪ್ರಾಯ ಮೂಡಿತು’ ಎಂದು ಬರೆದುಕೊಂಡಿದ್ದಾರೆ ಆರ್​​ಜಿವಿ.

300 ಗ್ಯಾಂಗ್‌ಸ್ಟರ್‌ಗಳ ಎನ್‌ಕೌಂಟರ್

‘ದಾವೂದ್ ಮತ್ತು ರಾಜನ್ ನಡುವಿನ ವೈರತ್ವದಿಂದ ಮುಂಬೈನಲ್ಲಿ ಅಪರಾಧ ಹೆಚ್ಚಾಯಿತು. ಅಪರಾಧ ಜಗತ್ತಿನ ಕತ್ತಲಿಗೆ ಅನೇಕ ಯುವಕರು ಬಲಿಯಾಗುತ್ತಿದ್ದರು. ರೌಡಿಗಳನ್ನು ತಡೆಯಲು ಪೋಲಿಸ್ ವ್ಯವಸ್ಥೆ ಸಂಪೂರ್ಣವಾಗಿ ಸೋತಿತ್ತು. ಆ ಸಮಯದಲ್ಲಿ ಸರ್ಕಾರ ಒಂದು ವಿಶೇಷ ಪೋಲಿಸ್ ಪಡೆಯನ್ನು ರಚಿಸಿತು. ಈ ಪಡೆ 1997 ರಿಂದ 2004 ರ ನಡುವೆ ಕಾರ್ಯಾಚರಣೆ ನಡೆಸಿತು. ಕೇವಲ ಏಳು ವರ್ಷಗಳಲ್ಲಿ 300 ಕ್ಕೂ ಹೆಚ್ಚು ಗ್ಯಾಂಗ್‌ಸ್ಟರ್‌ಗಳನ್ನು ಹೊಡೆದುರುಳಿಸಿತು’ ಎಂದಿದ್ದಾರೆ ಆರ್​ಜಿವಿ.

ಇದನ್ನೂ ಓದಿ: ರಾಮ್ ಗೋಪಾಲ್ ವರ್ಮಾ ಜೊತೆ ಗುಟ್ಟಾಗಿ ಮದುವೆ ಆಗಿದ್ದರು ಬಾಲಿವುಡ್ ಸ್ಟಾರ್ ನಟಿ

ದಯಾ ನಾಯಕ್ ಪಾತ್ರದಲ್ಲಿ ಹರ್ಷವರ್ಧನ್

ಈ ಎನ್‌ಕೌಂಟರ್ ಪಡೆಯ ರೋಮಾಂಚಕ ಕಥೆಯೇ ‘ಪೋಲಿಸ್ ಕಂಪನಿ’. ಖ್ಯಾತ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಅವರ ರಿಯಲ್ ಜೀವನದ ಪಾತ್ರದಿಂದ ಈ ಕಥೆ ಪ್ರೇರಿತವಾಗಿದೆ. ದಯಾ ನಾಯಕ್ ಪಾತ್ರದಲ್ಲಿ ನಟ ಹರ್ಷವರ್ಧನ್ ರಾಣೆ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ದೊಡ್ಡ ತಾರಾಗಣ ಇರಲಿದೆ. ‘ಪೋಲಿಸ್ ಸ್ಟೇಷನ್ ಮೇಂ ಭೂತ್’ ಚಿತ್ರದಲ್ಲೂ ಹರ್ಷವರ್ಧನ್ ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ