Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯ ಜತೆ ಮನ ಬಂದಂತೆ ಡ್ಯಾನ್ಸ್​ ಮಾಡಿ ಕಾಲಿಗೆ ನಮಸ್ಕರಿಸಿದ ಆರ್​ಜಿವಿ; ವಿಡಿಯೋ ವೈರಲ್

ಈ ವಿಡಿಯೋದಲ್ಲಿ ರಾಮ್ ಗೋಪಾಲ್ ವರ್ಮಾ ಅವರು ಇನಾಯಾ ಸುಲ್ತಾನ ಜತೆ ಡಾನ್ಸ್​ ಮಾಡಿದ್ದಾರೆ. ವಿಡಿಯೋದಲ್ಲಿರುವುದು ಇವರಿಬ್ಬರೇ ಅನ್ನೋದು ಸ್ಪಷ್ಟವಾಗಿದೆ.

ನಟಿಯ ಜತೆ ಮನ ಬಂದಂತೆ ಡ್ಯಾನ್ಸ್​ ಮಾಡಿ ಕಾಲಿಗೆ ನಮಸ್ಕರಿಸಿದ ಆರ್​ಜಿವಿ; ವಿಡಿಯೋ ವೈರಲ್
ವೈರಲ್ ಆಗಿದ್ದ ಆರ್​ಜಿವಿ ಹಾಗೂ ಇನಯಾ ನೃತ್ಯದ ವಿಡಿಯೊ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 23, 2021 | 1:12 PM

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸಿನಿಮಾ ಹಾಗೂ ಖಾಸಗಿ ಜೀವನದ ವಿಚಾರದಲ್ಲಿ ಆಗಾಗ ಸುದ್ದಿಯಲ್ಲಿರುತ್ತಾರೆ. ಈ ಬಾರಿ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಅವರು ಹಂಚಿಕೊಂಡ ವಿಡಿಯೋ. ಅವರು ವಿಡಿಯೋದಲ್ಲಿ ಡಾನ್ಸ್​ ಮಾಡಿದ್ದಾರೆ, ನಟಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ನಂತರ, ವಿಡಿಯೋದಲ್ಲಿರುವ ವ್ಯಕ್ತಿ ತಾವಲ್ಲ ಎಂದು ಹೇಳಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ರಾಮ್ ಗೋಪಾಲ್ ವರ್ಮಾ ಅವರು ಇನಾಯಾ ಸುಲ್ತಾನ ಜತೆ ಡಾನ್ಸ್​ ಮಾಡಿದ್ದಾರೆ. ವಿಡಿಯೋದಲ್ಲಿರುವುದು ಇವರಿಬ್ಬರೇ ಅನ್ನೋದು ಸ್ಪಷ್ಟವಾಗಿದೆ. ಆದರೆ, ವಿಡಿಯೋದಲ್ಲಿರುವ ವ್ಯಕ್ತಿ ತಾವಲ್ಲ ಎಂದಿದ್ದಾರೆ ಆರ್​ಜಿವಿ. ‘ಈ ವಿಡಿಯೋದಲ್ಲಿರುವ ವ್ಯಕ್ತಿ ನಾನಲ್ಲ. ಕೆಂಪು ಬಟ್ಟೆ ಧರಿಸಿರುವುದು ಇನಾಯಾ ಅಲ್ಲ. ಬೇಕಿದ್ದರೆ ನಾನು ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಮೇಲೆ ಪ್ರಮಾಣ ಮಾಡುತ್ತೇನೆ’ ಎಂದಿದ್ದಾರೆ ಅವರು.

ವಿಡಿಯೋದಲ್ಲಿ ಕಾಣುವ ವ್ಯಕ್ತಿ ರಾಮ್ ಗೋಪಾಲ್ ಅವರೇ ಅನ್ನೋದು ಅಭಿಮಾನಿಗಳಿಗೆ ಗೊತ್ತಾಗಿದೆ. ಈ ವಿಡಿಯೋ ವಿಚಾರವಾಗಿಟ್ಟುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ರೀತಿಯಲ್ಲಿ ಟೀಕಿಸಲಾಗುತ್ತಿದೆ. ಇನ್ನು, ಆರ್​ಜಿವಿ ನಟಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ.

ಈ ರೀತಿಯ ಚಿತ್ರ ವಿಚಿತ್ರ ಟ್ವೀಟ್​ ಮಾಡುವುದರಲ್ಲಿ ಆರ್​ಜಿವಿ ಎತ್ತಿದ ಕೈ. ಫ್ರೆಂಡ್​ಶಿಪ್​ ಡೆ ಬಗ್ಗೆ ಸರಣಿ ಟ್ವೀಟ್​ ಮಾಡಿದ್ದ ಅವರು, ‘ನೀವು ನಿಮ್ಮ ಗೆಳೆಯರಿಗೆ ಸಹಾಯ ಮಾಡಿದಿರಿ ಎಂದಿಟ್ಟುಕೊಳ್ಳು. ಮುಂದಿನ ಬಾರಿ ಆತ ನಿಮ್ಮ ಬಳಿಯೇ ಬರುತ್ತಾನೆ’ ಎಂದು ಬರೆದುಕೊಂಡು #HappyEnemyshipDay ಎನ್ನುವ ಹ್ಯಾಷ್​ಟ್ಯಾಗ್​ ಹಾಕಿದ್ದರು.

ಇದನ್ನೂ ಓದಿ: ಇದು ಗೆಳೆಯರ ದಿನವಲ್ಲ ವೈರಿಗಳ ದಿನ ಎಂದ ರಾಮ್​ ಗೋಪಾಲ್​ ವರ್ಮಾ

ಆಮೀರ್ ಖಾನ್​​ಗಿಂತ ವೇಯ್ಟರ್​ ಉತ್ತಮವಾಗಿ ಆ್ಯಕ್ಟ್​ ಮಾಡಿದ್ದ; ಆರ್​ಜಿವಿ ಹೀಗೆ ಹೇಳಿದ್ದರ ಹಿಂದಿತ್ತು ಬೇರೆ ಉದ್ದೇಶ

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ