AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯ ಜತೆ ಮನ ಬಂದಂತೆ ಡ್ಯಾನ್ಸ್​ ಮಾಡಿ ಕಾಲಿಗೆ ನಮಸ್ಕರಿಸಿದ ಆರ್​ಜಿವಿ; ವಿಡಿಯೋ ವೈರಲ್

ಈ ವಿಡಿಯೋದಲ್ಲಿ ರಾಮ್ ಗೋಪಾಲ್ ವರ್ಮಾ ಅವರು ಇನಾಯಾ ಸುಲ್ತಾನ ಜತೆ ಡಾನ್ಸ್​ ಮಾಡಿದ್ದಾರೆ. ವಿಡಿಯೋದಲ್ಲಿರುವುದು ಇವರಿಬ್ಬರೇ ಅನ್ನೋದು ಸ್ಪಷ್ಟವಾಗಿದೆ.

ನಟಿಯ ಜತೆ ಮನ ಬಂದಂತೆ ಡ್ಯಾನ್ಸ್​ ಮಾಡಿ ಕಾಲಿಗೆ ನಮಸ್ಕರಿಸಿದ ಆರ್​ಜಿವಿ; ವಿಡಿಯೋ ವೈರಲ್
ವೈರಲ್ ಆಗಿದ್ದ ಆರ್​ಜಿವಿ ಹಾಗೂ ಇನಯಾ ನೃತ್ಯದ ವಿಡಿಯೊ
TV9 Web
| Edited By: |

Updated on: Aug 23, 2021 | 1:12 PM

Share

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸಿನಿಮಾ ಹಾಗೂ ಖಾಸಗಿ ಜೀವನದ ವಿಚಾರದಲ್ಲಿ ಆಗಾಗ ಸುದ್ದಿಯಲ್ಲಿರುತ್ತಾರೆ. ಈ ಬಾರಿ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಅವರು ಹಂಚಿಕೊಂಡ ವಿಡಿಯೋ. ಅವರು ವಿಡಿಯೋದಲ್ಲಿ ಡಾನ್ಸ್​ ಮಾಡಿದ್ದಾರೆ, ನಟಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ನಂತರ, ವಿಡಿಯೋದಲ್ಲಿರುವ ವ್ಯಕ್ತಿ ತಾವಲ್ಲ ಎಂದು ಹೇಳಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ರಾಮ್ ಗೋಪಾಲ್ ವರ್ಮಾ ಅವರು ಇನಾಯಾ ಸುಲ್ತಾನ ಜತೆ ಡಾನ್ಸ್​ ಮಾಡಿದ್ದಾರೆ. ವಿಡಿಯೋದಲ್ಲಿರುವುದು ಇವರಿಬ್ಬರೇ ಅನ್ನೋದು ಸ್ಪಷ್ಟವಾಗಿದೆ. ಆದರೆ, ವಿಡಿಯೋದಲ್ಲಿರುವ ವ್ಯಕ್ತಿ ತಾವಲ್ಲ ಎಂದಿದ್ದಾರೆ ಆರ್​ಜಿವಿ. ‘ಈ ವಿಡಿಯೋದಲ್ಲಿರುವ ವ್ಯಕ್ತಿ ನಾನಲ್ಲ. ಕೆಂಪು ಬಟ್ಟೆ ಧರಿಸಿರುವುದು ಇನಾಯಾ ಅಲ್ಲ. ಬೇಕಿದ್ದರೆ ನಾನು ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಮೇಲೆ ಪ್ರಮಾಣ ಮಾಡುತ್ತೇನೆ’ ಎಂದಿದ್ದಾರೆ ಅವರು.

ವಿಡಿಯೋದಲ್ಲಿ ಕಾಣುವ ವ್ಯಕ್ತಿ ರಾಮ್ ಗೋಪಾಲ್ ಅವರೇ ಅನ್ನೋದು ಅಭಿಮಾನಿಗಳಿಗೆ ಗೊತ್ತಾಗಿದೆ. ಈ ವಿಡಿಯೋ ವಿಚಾರವಾಗಿಟ್ಟುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ರೀತಿಯಲ್ಲಿ ಟೀಕಿಸಲಾಗುತ್ತಿದೆ. ಇನ್ನು, ಆರ್​ಜಿವಿ ನಟಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ.

ಈ ರೀತಿಯ ಚಿತ್ರ ವಿಚಿತ್ರ ಟ್ವೀಟ್​ ಮಾಡುವುದರಲ್ಲಿ ಆರ್​ಜಿವಿ ಎತ್ತಿದ ಕೈ. ಫ್ರೆಂಡ್​ಶಿಪ್​ ಡೆ ಬಗ್ಗೆ ಸರಣಿ ಟ್ವೀಟ್​ ಮಾಡಿದ್ದ ಅವರು, ‘ನೀವು ನಿಮ್ಮ ಗೆಳೆಯರಿಗೆ ಸಹಾಯ ಮಾಡಿದಿರಿ ಎಂದಿಟ್ಟುಕೊಳ್ಳು. ಮುಂದಿನ ಬಾರಿ ಆತ ನಿಮ್ಮ ಬಳಿಯೇ ಬರುತ್ತಾನೆ’ ಎಂದು ಬರೆದುಕೊಂಡು #HappyEnemyshipDay ಎನ್ನುವ ಹ್ಯಾಷ್​ಟ್ಯಾಗ್​ ಹಾಕಿದ್ದರು.

ಇದನ್ನೂ ಓದಿ: ಇದು ಗೆಳೆಯರ ದಿನವಲ್ಲ ವೈರಿಗಳ ದಿನ ಎಂದ ರಾಮ್​ ಗೋಪಾಲ್​ ವರ್ಮಾ

ಆಮೀರ್ ಖಾನ್​​ಗಿಂತ ವೇಯ್ಟರ್​ ಉತ್ತಮವಾಗಿ ಆ್ಯಕ್ಟ್​ ಮಾಡಿದ್ದ; ಆರ್​ಜಿವಿ ಹೀಗೆ ಹೇಳಿದ್ದರ ಹಿಂದಿತ್ತು ಬೇರೆ ಉದ್ದೇಶ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ