AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯ ಜತೆ ಮನ ಬಂದಂತೆ ಡ್ಯಾನ್ಸ್​ ಮಾಡಿ ಕಾಲಿಗೆ ನಮಸ್ಕರಿಸಿದ ಆರ್​ಜಿವಿ; ವಿಡಿಯೋ ವೈರಲ್

ಈ ವಿಡಿಯೋದಲ್ಲಿ ರಾಮ್ ಗೋಪಾಲ್ ವರ್ಮಾ ಅವರು ಇನಾಯಾ ಸುಲ್ತಾನ ಜತೆ ಡಾನ್ಸ್​ ಮಾಡಿದ್ದಾರೆ. ವಿಡಿಯೋದಲ್ಲಿರುವುದು ಇವರಿಬ್ಬರೇ ಅನ್ನೋದು ಸ್ಪಷ್ಟವಾಗಿದೆ.

ನಟಿಯ ಜತೆ ಮನ ಬಂದಂತೆ ಡ್ಯಾನ್ಸ್​ ಮಾಡಿ ಕಾಲಿಗೆ ನಮಸ್ಕರಿಸಿದ ಆರ್​ಜಿವಿ; ವಿಡಿಯೋ ವೈರಲ್
ವೈರಲ್ ಆಗಿದ್ದ ಆರ್​ಜಿವಿ ಹಾಗೂ ಇನಯಾ ನೃತ್ಯದ ವಿಡಿಯೊ
TV9 Web
| Edited By: |

Updated on: Aug 23, 2021 | 1:12 PM

Share

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸಿನಿಮಾ ಹಾಗೂ ಖಾಸಗಿ ಜೀವನದ ವಿಚಾರದಲ್ಲಿ ಆಗಾಗ ಸುದ್ದಿಯಲ್ಲಿರುತ್ತಾರೆ. ಈ ಬಾರಿ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಅವರು ಹಂಚಿಕೊಂಡ ವಿಡಿಯೋ. ಅವರು ವಿಡಿಯೋದಲ್ಲಿ ಡಾನ್ಸ್​ ಮಾಡಿದ್ದಾರೆ, ನಟಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ನಂತರ, ವಿಡಿಯೋದಲ್ಲಿರುವ ವ್ಯಕ್ತಿ ತಾವಲ್ಲ ಎಂದು ಹೇಳಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ರಾಮ್ ಗೋಪಾಲ್ ವರ್ಮಾ ಅವರು ಇನಾಯಾ ಸುಲ್ತಾನ ಜತೆ ಡಾನ್ಸ್​ ಮಾಡಿದ್ದಾರೆ. ವಿಡಿಯೋದಲ್ಲಿರುವುದು ಇವರಿಬ್ಬರೇ ಅನ್ನೋದು ಸ್ಪಷ್ಟವಾಗಿದೆ. ಆದರೆ, ವಿಡಿಯೋದಲ್ಲಿರುವ ವ್ಯಕ್ತಿ ತಾವಲ್ಲ ಎಂದಿದ್ದಾರೆ ಆರ್​ಜಿವಿ. ‘ಈ ವಿಡಿಯೋದಲ್ಲಿರುವ ವ್ಯಕ್ತಿ ನಾನಲ್ಲ. ಕೆಂಪು ಬಟ್ಟೆ ಧರಿಸಿರುವುದು ಇನಾಯಾ ಅಲ್ಲ. ಬೇಕಿದ್ದರೆ ನಾನು ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಮೇಲೆ ಪ್ರಮಾಣ ಮಾಡುತ್ತೇನೆ’ ಎಂದಿದ್ದಾರೆ ಅವರು.

ವಿಡಿಯೋದಲ್ಲಿ ಕಾಣುವ ವ್ಯಕ್ತಿ ರಾಮ್ ಗೋಪಾಲ್ ಅವರೇ ಅನ್ನೋದು ಅಭಿಮಾನಿಗಳಿಗೆ ಗೊತ್ತಾಗಿದೆ. ಈ ವಿಡಿಯೋ ವಿಚಾರವಾಗಿಟ್ಟುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ರೀತಿಯಲ್ಲಿ ಟೀಕಿಸಲಾಗುತ್ತಿದೆ. ಇನ್ನು, ಆರ್​ಜಿವಿ ನಟಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ.

ಈ ರೀತಿಯ ಚಿತ್ರ ವಿಚಿತ್ರ ಟ್ವೀಟ್​ ಮಾಡುವುದರಲ್ಲಿ ಆರ್​ಜಿವಿ ಎತ್ತಿದ ಕೈ. ಫ್ರೆಂಡ್​ಶಿಪ್​ ಡೆ ಬಗ್ಗೆ ಸರಣಿ ಟ್ವೀಟ್​ ಮಾಡಿದ್ದ ಅವರು, ‘ನೀವು ನಿಮ್ಮ ಗೆಳೆಯರಿಗೆ ಸಹಾಯ ಮಾಡಿದಿರಿ ಎಂದಿಟ್ಟುಕೊಳ್ಳು. ಮುಂದಿನ ಬಾರಿ ಆತ ನಿಮ್ಮ ಬಳಿಯೇ ಬರುತ್ತಾನೆ’ ಎಂದು ಬರೆದುಕೊಂಡು #HappyEnemyshipDay ಎನ್ನುವ ಹ್ಯಾಷ್​ಟ್ಯಾಗ್​ ಹಾಕಿದ್ದರು.

ಇದನ್ನೂ ಓದಿ: ಇದು ಗೆಳೆಯರ ದಿನವಲ್ಲ ವೈರಿಗಳ ದಿನ ಎಂದ ರಾಮ್​ ಗೋಪಾಲ್​ ವರ್ಮಾ

ಆಮೀರ್ ಖಾನ್​​ಗಿಂತ ವೇಯ್ಟರ್​ ಉತ್ತಮವಾಗಿ ಆ್ಯಕ್ಟ್​ ಮಾಡಿದ್ದ; ಆರ್​ಜಿವಿ ಹೀಗೆ ಹೇಳಿದ್ದರ ಹಿಂದಿತ್ತು ಬೇರೆ ಉದ್ದೇಶ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ