AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯ ಜತೆ ಮನ ಬಂದಂತೆ ಡ್ಯಾನ್ಸ್​ ಮಾಡಿ ಕಾಲಿಗೆ ನಮಸ್ಕರಿಸಿದ ಆರ್​ಜಿವಿ; ವಿಡಿಯೋ ವೈರಲ್

ಈ ವಿಡಿಯೋದಲ್ಲಿ ರಾಮ್ ಗೋಪಾಲ್ ವರ್ಮಾ ಅವರು ಇನಾಯಾ ಸುಲ್ತಾನ ಜತೆ ಡಾನ್ಸ್​ ಮಾಡಿದ್ದಾರೆ. ವಿಡಿಯೋದಲ್ಲಿರುವುದು ಇವರಿಬ್ಬರೇ ಅನ್ನೋದು ಸ್ಪಷ್ಟವಾಗಿದೆ.

ನಟಿಯ ಜತೆ ಮನ ಬಂದಂತೆ ಡ್ಯಾನ್ಸ್​ ಮಾಡಿ ಕಾಲಿಗೆ ನಮಸ್ಕರಿಸಿದ ಆರ್​ಜಿವಿ; ವಿಡಿಯೋ ವೈರಲ್
ವೈರಲ್ ಆಗಿದ್ದ ಆರ್​ಜಿವಿ ಹಾಗೂ ಇನಯಾ ನೃತ್ಯದ ವಿಡಿಯೊ
TV9 Web
| Edited By: |

Updated on: Aug 23, 2021 | 1:12 PM

Share

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸಿನಿಮಾ ಹಾಗೂ ಖಾಸಗಿ ಜೀವನದ ವಿಚಾರದಲ್ಲಿ ಆಗಾಗ ಸುದ್ದಿಯಲ್ಲಿರುತ್ತಾರೆ. ಈ ಬಾರಿ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಅವರು ಹಂಚಿಕೊಂಡ ವಿಡಿಯೋ. ಅವರು ವಿಡಿಯೋದಲ್ಲಿ ಡಾನ್ಸ್​ ಮಾಡಿದ್ದಾರೆ, ನಟಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ನಂತರ, ವಿಡಿಯೋದಲ್ಲಿರುವ ವ್ಯಕ್ತಿ ತಾವಲ್ಲ ಎಂದು ಹೇಳಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ರಾಮ್ ಗೋಪಾಲ್ ವರ್ಮಾ ಅವರು ಇನಾಯಾ ಸುಲ್ತಾನ ಜತೆ ಡಾನ್ಸ್​ ಮಾಡಿದ್ದಾರೆ. ವಿಡಿಯೋದಲ್ಲಿರುವುದು ಇವರಿಬ್ಬರೇ ಅನ್ನೋದು ಸ್ಪಷ್ಟವಾಗಿದೆ. ಆದರೆ, ವಿಡಿಯೋದಲ್ಲಿರುವ ವ್ಯಕ್ತಿ ತಾವಲ್ಲ ಎಂದಿದ್ದಾರೆ ಆರ್​ಜಿವಿ. ‘ಈ ವಿಡಿಯೋದಲ್ಲಿರುವ ವ್ಯಕ್ತಿ ನಾನಲ್ಲ. ಕೆಂಪು ಬಟ್ಟೆ ಧರಿಸಿರುವುದು ಇನಾಯಾ ಅಲ್ಲ. ಬೇಕಿದ್ದರೆ ನಾನು ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಮೇಲೆ ಪ್ರಮಾಣ ಮಾಡುತ್ತೇನೆ’ ಎಂದಿದ್ದಾರೆ ಅವರು.

ವಿಡಿಯೋದಲ್ಲಿ ಕಾಣುವ ವ್ಯಕ್ತಿ ರಾಮ್ ಗೋಪಾಲ್ ಅವರೇ ಅನ್ನೋದು ಅಭಿಮಾನಿಗಳಿಗೆ ಗೊತ್ತಾಗಿದೆ. ಈ ವಿಡಿಯೋ ವಿಚಾರವಾಗಿಟ್ಟುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ರೀತಿಯಲ್ಲಿ ಟೀಕಿಸಲಾಗುತ್ತಿದೆ. ಇನ್ನು, ಆರ್​ಜಿವಿ ನಟಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ.

ಈ ರೀತಿಯ ಚಿತ್ರ ವಿಚಿತ್ರ ಟ್ವೀಟ್​ ಮಾಡುವುದರಲ್ಲಿ ಆರ್​ಜಿವಿ ಎತ್ತಿದ ಕೈ. ಫ್ರೆಂಡ್​ಶಿಪ್​ ಡೆ ಬಗ್ಗೆ ಸರಣಿ ಟ್ವೀಟ್​ ಮಾಡಿದ್ದ ಅವರು, ‘ನೀವು ನಿಮ್ಮ ಗೆಳೆಯರಿಗೆ ಸಹಾಯ ಮಾಡಿದಿರಿ ಎಂದಿಟ್ಟುಕೊಳ್ಳು. ಮುಂದಿನ ಬಾರಿ ಆತ ನಿಮ್ಮ ಬಳಿಯೇ ಬರುತ್ತಾನೆ’ ಎಂದು ಬರೆದುಕೊಂಡು #HappyEnemyshipDay ಎನ್ನುವ ಹ್ಯಾಷ್​ಟ್ಯಾಗ್​ ಹಾಕಿದ್ದರು.

ಇದನ್ನೂ ಓದಿ: ಇದು ಗೆಳೆಯರ ದಿನವಲ್ಲ ವೈರಿಗಳ ದಿನ ಎಂದ ರಾಮ್​ ಗೋಪಾಲ್​ ವರ್ಮಾ

ಆಮೀರ್ ಖಾನ್​​ಗಿಂತ ವೇಯ್ಟರ್​ ಉತ್ತಮವಾಗಿ ಆ್ಯಕ್ಟ್​ ಮಾಡಿದ್ದ; ಆರ್​ಜಿವಿ ಹೀಗೆ ಹೇಳಿದ್ದರ ಹಿಂದಿತ್ತು ಬೇರೆ ಉದ್ದೇಶ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ