AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಸ್ಟ್ ಮಾಡಲು ಬಂದ ಪೊಲೀಸರು ನನ್ನ ಜತೆ ಎಣ್ಣೆ ಹೊಡೆದರು: ರಾಮ್ ಗೋಪಾಲ್ ವರ್ಮಾ

ರಾಮ್ ಗೋಪಾಲ್ ವರ್ಮಾ ಅವರು ಒಂದು ವಿಲಕ್ಷಣ ಘಟನೆಯನ್ನು ಈಗ ಮೆಲುಕು ಹಾಕಿದ್ದಾರೆ. ಅರೆಸ್ಟ್ ಮಾಡಲು ಬಂದಿದ್ದ ಪೊಲೀಸರು ತಮ್ಮ ಜೊತೆ ಕುಳಿತು ಡ್ರಿಂಕ್ಸ್ ಮಾಡಿ ವಾಪಸ್ಸು ಹೋಗಿದ್ದರು ಎಂದು ಆರ್​ಜಿವಿ ಹೇಳಿದ್ದಾರೆ. ಅಂದು ಏನೆಲ್ಲ ನಡೆಯಿತು ಎಂಬುದನ್ನು ರಾಮ್ ಗೋಪಾಲ್ ವರ್ಮಾ ವಿವರಿಸಿದ್ದಾರೆ.

ಅರೆಸ್ಟ್ ಮಾಡಲು ಬಂದ ಪೊಲೀಸರು ನನ್ನ ಜತೆ ಎಣ್ಣೆ ಹೊಡೆದರು: ರಾಮ್ ಗೋಪಾಲ್ ವರ್ಮಾ
Ram Gopal Varma
ಮದನ್​ ಕುಮಾರ್​
|

Updated on: Mar 31, 2025 | 5:52 PM

Share

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರದ್ದು ವಿಚಿತ್ರ ವ್ಯಕ್ತಿತ್ವ. ಹಲವು ಕಾರಣಗಳಿಂದ ಅವರು ವಿವಾದ ಮಾಡಿಕೊಳ್ಳುತ್ತಲೇ ಇರುತ್ತಾರೆ. ಅವರು ಮಾಡುವ ಟ್ವೀಟ್​ಗಳು ಆಗಾಗ ಸುದ್ದಿ ಆಗುತ್ತವೆ. ಟ್ವೀಟ್ ಕಾರಣದಿಂದ ಅವರ ಮೇಲೆ ಕೇಸ್ ದಾಖಲಾಗಿದ್ದು ಕೂಡ ಉಂಟು. ಆದರೆ ಯಾವುದಕ್ಕೂ ರಾಮ್ ಗೋಪಾಲ್ ವರ್ಮಾ (RGV) ತಲೆ ಕೆಡಿಸಿಕೊಳ್ಳುವುದೇ ಇಲ್ಲ. ಒಮ್ಮೆ ಅವರನ್ನು ಪೊಲೀಸರು ಅರೆಸ್ಟ್ ಮಾಡಲು ಬಂದಿದ್ದರು. ಆದರೆ ಅರೆಸ್ಟ್ ಮಾಡುವ ಬದಲು ಎಣ್ಣೆ ಪಾರ್ಟಿ ಮಾಡಿದರು ಎಂದು ರಾಮ್ ಗೋಪಾಲ್ ವರ್ಮಾ (Ram Gopal Varma) ಹೇಳಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ.

‘ನಾಲ್ಕು-ಐದು ವರ್ಷಗಳ ಹಿಂದೆ ನಾನು ಒಂದಷ್ಟು ಟ್ವೀಟ್ ಮಾಡಿದ್ದೆ. ಅದರ ಬಗ್ಗೆ ನಾನು ಯೋಚನೆ ಮಾಡುವುದಿಲ್ಲ. ಮನಸ್ಸಿಗೆ ಬಂದಿದ್ದು ಪೋಸ್ಟ್ ಮಾಡಿದ್ದೆ. ಕೆಲವು ಗಂಟೆಗಳ ಬಳಿಕ ಮಹೇಶ್ ಭಟ್ ನನಗೆ ಕರೆ ಮಾಡಿದರು. ನಿಮ್ಮ ಟ್ವೀರ್​ನಿಂದ ವಿವಾದ ಆಗಿದೆ. ಆದರೆ ಇದೇನೂ ಕಾನೂನಿಗೆ ವಿರುದ್ಧವಾದದ್ದಲ್ಲ ಅಂತ ಅವರು ಹೇಳಿದರು. ಅವರು ಏನು ಹೇಳುತ್ತಿದ್ದಾರೆ ಎಂಬುದೇ ನನಗೆ ತಿಳಿಯಲಿಲ್ಲ. ಯಾಕೆಂದರೆ ನಾನು ಏನು ಟ್ವೀಟ್ ಮಾಡಿದ್ದೆ ಎಂಬುದು ನನಗೆ ಮರೆತುಹೋಗಿತ್ತು’ ಎಂದು ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ.

ಅಂದು ಅವರು ಮಾಡಿದ್ದ ಟ್ವೀಟ್ ಆಕ್ಷೇಪಾರ್ಹವಾಗಿದೆ ಎಂಬ ಕಾರಣಕ್ಕೆ 6-7 ಕೇಸ್​ಗಳನ್ನು ಹಾಕಲಾಗಿತ್ತು. ಆದರೆ ಅವುಗಳೆಲ್ಲ ಅಂತ್ಯವಾಗಿದ್ದು ಮಾತ್ರ ಅನಿರೀಕ್ಷಿತ ರೀತಿಯಲ್ಲಿ. ಆದಿನ ಏನಾಗಿತು ಎಂಬುದನ್ನು ರಾಮ್ ಗೋಪಾಲ್ ವರ್ಮಾ ಅವರು ವಿವರಿಸಿದ್ದಾರೆ.

ಇದನ್ನೂ ಓದಿ
Image
ರಾಮ್ ಗೋಪಾಲ್ ವರ್ಮಾ ವಿರುದ್ಧ ಜಾಮೀನು ರಹಿತ ವಾರೆಂಟ್, ಬಂಧನ ನಿಶ್ಚಿತ
Image
‘‘ಕೆಜಿಎಫ್ 2’ ಕೆಟ್ಟ ಚಿತ್ರ‘ ಯಶ್ ಅಭಿಮಾನಿಗಳ ಕೆಣಕಿದ ವರ್ಮ
Image
ನಿರ್ದೇಶಕ ರಾಮ್​ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ ವಿಧಿಸಿದ ಕೋರ್ಟ್
Image
‘ನನಗೆ ತಾಯಿ ಅಷ್ಟೇ ಇಷ್ಟ, ಮಗಳಲ್ಲ’: ರಾಮ್ ಗೋಪಾಲ್ ವರ್ಮಾ ನೇರ ಮಾತು

‘ಎಲ್ಲ ಕೇಸ್​ಗಳನ್ನು ಒಟ್ಟಿಗೆ ನಿಭಾಯಿಸಲು ನಾವು ಪ್ರಯತ್ನಿಸುತ್ತಿದ್ದೆವು. ಪೊಲೀಸರು ನನ್ನನ್ನು ಅರೆಸ್ಟ್​ ಮಾಡಲು ಬರುವುದರೊಳಗೆ ಕೋರ್ಟ್​ನಲ್ಲಿ ನನ್ನ ಪರವಾಗಿ ತೀರ್ಪು ಬಂದಿತ್ತು. ಹಾಗಾಗಿ ಏನು ಮಾಡುವುದು ಅಂತ ಪೊಲೀಸರಿಗೆ ತಿಳಿಯಲಿಲ್ಲ. ಎಲ್ಲರೂ ನನ್ನ ಜೊತೆ ಕುಳಿತು ಡ್ರಿಂಕ್ಸ್ ಮಾಡಿದರು. ಬಳಿಕ ವಾಪಸ್ ಹೋದರು’ ಎಂದು ಆ ಘಟನೆಯನ್ನು ರಾಮ್ ಗೋಪಾಲ್ ವರ್ಮಾ ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಗೇಮ್ ಚೇಂಜರ್ ಬಾಕ್ಸ್ ಆಫೀಸ್​ ಲೆಕ್ಕ ಸುಳ್ಳು’: ಹಿಗ್ಗಾಮುಗ್ಗ ಜಾಡಿಸಿದ ರಾಮ್ ಗೋಪಾಲ್ ವರ್ಮಾ

ಪದೇಪದೇ ಮನಸ್ಸಿಗೆ ಬಂದಿದ್ದು ಟ್ವೀಟ್ ಮಾಡುತ್ತಾರೆ ಎಂಬ ಕಾರಣದಿಂದಲೇ ಈಗೀಗ ರಾಮ್ ಗೋಪಾಲ್ ವರ್ಮಾ ಅವರನ್ನು ಅನೇಕರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸೋಶಿಯಲ್ ಮೀಡಿಯಾ ಪೋಸ್ಟ್ ಮಾತ್ರವಲ್ಲದೇ ಕೆಲವು ಸಂದರ್ಶನಗಳ ಮೂಲಕವೇ ರಾಮ್ ಗೋಪಾಲ್ ವರ್ಮಾ ಅವರು ವಿವಾದ ಮಾಡಿಕೊಂಡ ಉದಾಹರಣೆಗಳು ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!