AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಗೋಪಾಲ್ ವರ್ಮಾ ಜತೆ ಬೋಲ್ಡ್​ ಆಗಿ ಕಾಣಿಸಿಕೊಂಡ ಬಿಗ್​ ಬಾಸ್​ ಸ್ಪರ್ಧಿ  

ಅರಿಯಾನಾ ಜತೆ ಇರುವ ಬೋಲ್ಡ್​ ಫೋಟೋಗಳನ್ನು ಆರ್​ಜಿವಿ ಟ್ವಿಟರ್​ನಲ್ಲಿ ಅಪ್​ಲೋಡ್​ ಮಾಡಿ, ‘ಅರಿಯಾನಾ  ಟಾಕ್ಸ್​ ಬೋಲ್ಡ್ ವಿತ್​ ಆರ್​ಜಿವಿ’ ಎನ್ನುವ ಕ್ಯಾಪ್ಶನ್​ ನೀಡಿದ್ದಾರೆ.

ರಾಮ್ ಗೋಪಾಲ್ ವರ್ಮಾ ಜತೆ ಬೋಲ್ಡ್​ ಆಗಿ ಕಾಣಿಸಿಕೊಂಡ ಬಿಗ್​ ಬಾಸ್​ ಸ್ಪರ್ಧಿ  
ಅರಿಯಾ ಜತೆ ರಾಮ್​ ಗೋಪಾಲ್​ ವರ್ಮಾ
TV9 Web
| Edited By: |

Updated on:Jun 16, 2021 | 4:10 PM

Share

ರಾಮ್​ ಗೋಪಾಲ್​ ವರ್ಮಾ ಸದಾ ವಿವಾದದ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಅವರು ಸ್ಟಾರ್​ ನಟರ ವಿರುದ್ಧ ಹೇಳಿಕೆ ಕೊಡುವುದರಲ್ಲಿ ಎತ್ತಿದೆ ಕೈ. ಇದರ ಜತೆಗೆ ಸಾಕಷ್ಟು ಹೀರೋಯಿನ್​ಗಳ ಜತೆಯೂ ಆರ್​ಜಿವಿ ಕ್ಲೋಸ್​ ಆಗಿ ಕಾಣಿಸಿಕೊಳ್ಳುತ್ತಾರೆ. ಈ ಫೋಟೋಗಳನ್ನು ಅವರು ಮುಕ್ತವಾಗಿ ಹಂಚಿಕೊಳ್ಳುತ್ತಾರೆ. ಈಗ ಅವರು ಮತ್ತೆ ಅಂತಹುದೇ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ತೆಲುಗು ಬಿಗ್‌ ಬಾಸ್ ಮಾಜಿ ಸ್ಪರ್ಧಿ ಅರಿಯಾನಾ ಗ್ಲೋರಿ ಜತೆಗೆ ರಾಮ್ ಗೋಪಾಲ್ ವರ್ಮಾ ಜಿಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅರಿಯಾನಾ ಜತೆ ಇರುವ ಬೋಲ್ಡ್​ ಫೋಟೋಗಳನ್ನು ಆರ್​ಜಿವಿ ಟ್ವಿಟರ್​ನಲ್ಲಿ ಅಪ್​ಲೋಡ್​ ಮಾಡಿ, ‘ಅರಿಯಾನಾ  ಟಾಕ್ಸ್​ ಬೋಲ್ಡ್ ವಿತ್​ ಆರ್​ಜಿವಿ’ ಎನ್ನುವ ಕ್ಯಾಪ್ಶನ್​ ನೀಡಿದ್ದಾರೆ. ಟೈಟಲ್​ಗೆ ತಕ್ಕಂತೆ ಫೋಟೋಗಳು ಕೂಡ ಇವೆ.

ಅರಿಯಾನಾ  ಅವರ ವಿಶೇಷ ಸಂದರ್ಶನವನ್ನು ಆರ್​ಜಿವಿ ಮಾಡಿದ್ದಾರಂತೆ. ಈ ಸಂದರ್ಶನದಲ್ಲಿ ಅವರು ಸಾಕಷ್ಟು ವಿಚಾರ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂದರ್ಶನ ಶೀಘ್ರದಲ್ಲೇ ಪ್ರಸಾರವಾಗಲಿದೆ. ಇನ್ನು, ಶೀಘ್ರದಲ್ಲೇ ಆರ್​ಜಿವಿ ಚಿತ್ರಕ್ಕೆ ಅರಿಯಾನಾ ನಾಯಕಿಯಾಗಲಿದ್ದಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಅಮಿತಾಭ್​ ಬಚ್ಚನ್​ ಹಾಗೂ ಆರ್​ಜಿವಿ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಮೂಡಿ ಬರಲಿದೆ ಎನ್ನಲಾಗುತ್ತಿದೆ. ರಾಮ್ ಗೋಪಾಲ್​ ವರ್ಮಾ ಹಾಗೂ ಬಾಲಿವುಡ್​ ಹಿರಿಯ ನಟ ಅಮಿತಾಭ್​ ಬಚ್ಚನ್​ ಸಾಕಷ್ಟು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಅದು ಇನ್ನೂ ಹಾಗೆಯೇ ಇದೆ ಅನ್ನೋದು ವಿಶೇಷ. ಇದರ ಪರಿಣಾಮವಾಗಿ ಈಗ ಇಬ್ಬರೂ ಮತ್ತೆ ಒಟ್ಟಾಗಿ ಕೆಲಸ ಮಾಡೋಕೆ ರೆಡಿ ಆಗಿದ್ದಾರಂತೆ. ಹೀಗೊಂದು ಸುದ್ದಿ ಟಾಲಿವುಡ್​ ಅಂಗಳದಲ್ಲಿ ಹರಿದಾಡುತ್ತಿದೆ.

ಇನ್ನು, ವರ್ಮಾ ಲಾಕ್​ಡೌನ್​ನಲ್ಲೇ ಹೊಸ ಮುಖಗಳನ್ನು ಇಟ್ಟುಕೊಂಡು ಚಿತ್ರಗಳನ್ನು ಮಾಡುತ್ತಿದ್ದಾರೆ. ಅವರ ಎಂಟರ್​ ದಿ ಗರ್ಲ್​ ಡ್ರಾಗನ್​ ಮತ್ತು ಡೇಂಜರಸ್​ ಸಿನಿಮಾಗಳು ತೆರೆಗೆಬರೋಕೆ ಸಿದ್ಧವಾಗಿದೆ.

ಇದನ್ನೂ ಓದಿ: ಅಮಿತಾಭ್​-ರಾಮ್​ ಗೋಪಾಲ್​ ವರ್ಮ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ

Published On - 4:09 pm, Wed, 16 June 21

Follow Us
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ