ರಾಮ್ ಗೋಪಾಲ್ ವರ್ಮಾ ಜತೆ ಬೋಲ್ಡ್​ ಆಗಿ ಕಾಣಿಸಿಕೊಂಡ ಬಿಗ್​ ಬಾಸ್​ ಸ್ಪರ್ಧಿ  

ಅರಿಯಾನಾ ಜತೆ ಇರುವ ಬೋಲ್ಡ್​ ಫೋಟೋಗಳನ್ನು ಆರ್​ಜಿವಿ ಟ್ವಿಟರ್​ನಲ್ಲಿ ಅಪ್​ಲೋಡ್​ ಮಾಡಿ, ‘ಅರಿಯಾನಾ  ಟಾಕ್ಸ್​ ಬೋಲ್ಡ್ ವಿತ್​ ಆರ್​ಜಿವಿ’ ಎನ್ನುವ ಕ್ಯಾಪ್ಶನ್​ ನೀಡಿದ್ದಾರೆ.

ರಾಮ್ ಗೋಪಾಲ್ ವರ್ಮಾ ಜತೆ ಬೋಲ್ಡ್​ ಆಗಿ ಕಾಣಿಸಿಕೊಂಡ ಬಿಗ್​ ಬಾಸ್​ ಸ್ಪರ್ಧಿ  
ಅರಿಯಾ ಜತೆ ರಾಮ್​ ಗೋಪಾಲ್​ ವರ್ಮಾ
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 16, 2021 | 4:10 PM

ರಾಮ್​ ಗೋಪಾಲ್​ ವರ್ಮಾ ಸದಾ ವಿವಾದದ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಅವರು ಸ್ಟಾರ್​ ನಟರ ವಿರುದ್ಧ ಹೇಳಿಕೆ ಕೊಡುವುದರಲ್ಲಿ ಎತ್ತಿದೆ ಕೈ. ಇದರ ಜತೆಗೆ ಸಾಕಷ್ಟು ಹೀರೋಯಿನ್​ಗಳ ಜತೆಯೂ ಆರ್​ಜಿವಿ ಕ್ಲೋಸ್​ ಆಗಿ ಕಾಣಿಸಿಕೊಳ್ಳುತ್ತಾರೆ. ಈ ಫೋಟೋಗಳನ್ನು ಅವರು ಮುಕ್ತವಾಗಿ ಹಂಚಿಕೊಳ್ಳುತ್ತಾರೆ. ಈಗ ಅವರು ಮತ್ತೆ ಅಂತಹುದೇ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ತೆಲುಗು ಬಿಗ್‌ ಬಾಸ್ ಮಾಜಿ ಸ್ಪರ್ಧಿ ಅರಿಯಾನಾ ಗ್ಲೋರಿ ಜತೆಗೆ ರಾಮ್ ಗೋಪಾಲ್ ವರ್ಮಾ ಜಿಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅರಿಯಾನಾ ಜತೆ ಇರುವ ಬೋಲ್ಡ್​ ಫೋಟೋಗಳನ್ನು ಆರ್​ಜಿವಿ ಟ್ವಿಟರ್​ನಲ್ಲಿ ಅಪ್​ಲೋಡ್​ ಮಾಡಿ, ‘ಅರಿಯಾನಾ  ಟಾಕ್ಸ್​ ಬೋಲ್ಡ್ ವಿತ್​ ಆರ್​ಜಿವಿ’ ಎನ್ನುವ ಕ್ಯಾಪ್ಶನ್​ ನೀಡಿದ್ದಾರೆ. ಟೈಟಲ್​ಗೆ ತಕ್ಕಂತೆ ಫೋಟೋಗಳು ಕೂಡ ಇವೆ.

ಅರಿಯಾನಾ  ಅವರ ವಿಶೇಷ ಸಂದರ್ಶನವನ್ನು ಆರ್​ಜಿವಿ ಮಾಡಿದ್ದಾರಂತೆ. ಈ ಸಂದರ್ಶನದಲ್ಲಿ ಅವರು ಸಾಕಷ್ಟು ವಿಚಾರ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂದರ್ಶನ ಶೀಘ್ರದಲ್ಲೇ ಪ್ರಸಾರವಾಗಲಿದೆ. ಇನ್ನು, ಶೀಘ್ರದಲ್ಲೇ ಆರ್​ಜಿವಿ ಚಿತ್ರಕ್ಕೆ ಅರಿಯಾನಾ ನಾಯಕಿಯಾಗಲಿದ್ದಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಅಮಿತಾಭ್​ ಬಚ್ಚನ್​ ಹಾಗೂ ಆರ್​ಜಿವಿ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಮೂಡಿ ಬರಲಿದೆ ಎನ್ನಲಾಗುತ್ತಿದೆ. ರಾಮ್ ಗೋಪಾಲ್​ ವರ್ಮಾ ಹಾಗೂ ಬಾಲಿವುಡ್​ ಹಿರಿಯ ನಟ ಅಮಿತಾಭ್​ ಬಚ್ಚನ್​ ಸಾಕಷ್ಟು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಅದು ಇನ್ನೂ ಹಾಗೆಯೇ ಇದೆ ಅನ್ನೋದು ವಿಶೇಷ. ಇದರ ಪರಿಣಾಮವಾಗಿ ಈಗ ಇಬ್ಬರೂ ಮತ್ತೆ ಒಟ್ಟಾಗಿ ಕೆಲಸ ಮಾಡೋಕೆ ರೆಡಿ ಆಗಿದ್ದಾರಂತೆ. ಹೀಗೊಂದು ಸುದ್ದಿ ಟಾಲಿವುಡ್​ ಅಂಗಳದಲ್ಲಿ ಹರಿದಾಡುತ್ತಿದೆ.

ಇನ್ನು, ವರ್ಮಾ ಲಾಕ್​ಡೌನ್​ನಲ್ಲೇ ಹೊಸ ಮುಖಗಳನ್ನು ಇಟ್ಟುಕೊಂಡು ಚಿತ್ರಗಳನ್ನು ಮಾಡುತ್ತಿದ್ದಾರೆ. ಅವರ ಎಂಟರ್​ ದಿ ಗರ್ಲ್​ ಡ್ರಾಗನ್​ ಮತ್ತು ಡೇಂಜರಸ್​ ಸಿನಿಮಾಗಳು ತೆರೆಗೆಬರೋಕೆ ಸಿದ್ಧವಾಗಿದೆ.

ಇದನ್ನೂ ಓದಿ: ಅಮಿತಾಭ್​-ರಾಮ್​ ಗೋಪಾಲ್​ ವರ್ಮ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ

Published On - 4:09 pm, Wed, 16 June 21

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು